ಜೈಪುರ: ಸೆಕ್ಸ್ ಫಿಲಂ ನೋಡಿ ಗೆಳೆಯನ ತಾಯಿಯನ್ನ ಅತ್ಯಾಚಾರಗೈದಿರುವ ಭಯಾನಕ, ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.21 ವರ್ಷದ ವಿಕಾಸ್ ಅಲಿಯಾಸ್ ನೇವಲಾ ಕಾಮುಕ ಯುವಕ. ಆನ್ಲೈನ್ ಸೆಕ್ಸ್ ಸಿನಿಮಾಗಳನ್ನು ನೋಡಿದ ವಿಕಾಸ್, ಮನೆಯಲ್ಲಿ ಒಂಟಿಯಾಗಿದ್ದ ಗೆಳೆಯನ 60 ವರ್ಷದ ವಿಧವೆ ತಾಯಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ವಿಕಾಸ್ ಮದ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ಅತ್ಯಾಚಾರದ ಬಳಿಕ …
Read More »ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ
ಬೆಳಗಾವಿ: ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನ.24 ರಂದು 7 ಗಂಟೆಯಿಂದ ಜ.24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973 …
Read More »ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ:
ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ನಿಗಮ-ಮಂಡಳಿ ನೇಮಕ ಮಾಡಿ ಬಿ.ಎಸ್.ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಣಕಾಸಿನ ಮುಗ್ಗಟ್ಟು ಇರುವಾಗ ನಿಗಮ ಮಂಡಳಿ ನೇಮಕ ಮಾಡಿರುವುದು ರಾಜ್ಯಕ್ಕೆ ಎಸಗಿರುವ ದ್ರೋಹ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ತರಾತುರಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದಾರೆ ಎಂದರು. ಸರ್ಕಾರ ಖಾಸಗಿ ಶಾಲೆಗಳ …
Read More »40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳ ಬೆಂಕಿ
ಬೆಳಗಾವಿ – ಶಿಂದೊಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನಲ್ಲಿ ರಾಶಿ ಮಾಡಲು ಕೂಡಿಟ್ಟಿದ್ದ ಸುಮಾರು 40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸುವರ್ಣ ಸೌಧದ ಹಿಂದುಗಡೆ ಶೆಗಣಮಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಇರುವ 138/ಬಿ ಸರ್ವೆ ನಂಬರಿನ ಜಮೀನಲ್ಲಿ ಈ ದುರ್ಘಟನೆ ನಡೆದಿದೆ. ಎರಡು ಭತ್ತದ ಬಣವೆಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ ತಡರಾತ್ರಿಯಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ …
Read More »ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ
ಬೆಳಗಾವಿ : ಕಾಡು ಪ್ರಾಣಿಗಳ ಬೇಟೆಯಾಡಲು ಬಂದ ಯುವಕನೇ ತಾನು ತಂದಿದ್ದ ಸ್ಫೋಟಕ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಾಚಿಗಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಗಜೇಂದ್ರ ರಜಪೂತ (17)ಮೃತ ಯುವಕ. ದ್ವಿಚಕ್ರದಲ್ಲಿ ಗಜೇಂದ್ರ ಹಾಗೂ ಶಿವಕುಮಾರ್ ಇಬ್ಬರು ಪ್ರಾಣಿಗಳ ಭೇಟೆಯಾಡಲು ಬಂದಿದ್ದರು. ಗಜೇಂದ್ರ ತಾನು ತಂದಿದ್ದ ಸ್ಫೋಟಕ ವಸ್ತುಗಳನ್ನು ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದನು. ಅಲ್ಲಿಗೆ ಬಂದ ವೇಳೆ ಬೈಕಿಗೆ ಟ್ಯಾಕ್ಟರ್ ಡಿಕ್ಕಿ …
Read More »ಕರ್ನಾಟಕ ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ: ವಾಟಾಳ್ ನಾಗರಾಜ್
ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಜೊತೆಗೆ ಇಂದು ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಿವೆ ಎಂದು ಹೇಳಿದ್ದಾರೆ. ಡಿಸೆಂಬರ್ 5 ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ನೀಡುವಂತೆ ರಾಜ್ಯದ …
Read More »ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಿಕ್ಕಬಳ್ಳಾಪುರ: ಮದ್ಯ ಸೇವನೆ ಮಾಡಲು 500 ರೂ. ಕೊಟ್ಟಿಲ್ಲವೆಂದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಆರೋಪಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆದಿನಾರಾಯಣಪ್ಪ ಆತ್ಮಹತ್ಯೆಗೆ ಶರಣಾದವ. ಈತ ಮೂರು ದಿನಗಳ ಹಿಂದೆಯಷ್ಟೇ ಪತ್ನಿ ರತ್ನಮ್ಮ(35)ನನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದನು. ಬಳಿಕ ಸ್ಥಳದಿಂದ ಪರಾರಿಯಾಗಿದ್ದನು. ಇದೀಗ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತಕ್ಕೋ ಏನೋ ಕೆರೆಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. …
Read More »ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಕನ್ನಡದ ಬಿಗ್ಬಾಸ್
ಬೆಂಗಳೂರು: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಜೊತೆ ನಟ ಕಿಚ್ಚ ಸುದೀಪ್ ಮಾತುಕತೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ. ಈ ಬಾರಿ ಬಿಗ್ಬಾಸ್ ಮನೆಗೆ ಪ್ರವೇಶ ಪಡೆಯುವ 15 ಸ್ಪರ್ಧಿಗಳ ಹೆಸರು ಅಂತಿಮವಾಗಿದೆ ಎನ್ನಲಾಗಿದೆ. ಕೊರೊನಾ …
Read More »ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ …
Read More »ಮನೆ ಬಾಗಿಲಿಗೆ ಮಹಾನಗರ ಪಾಲಿಕೆ – ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ದಾವಣಗೆರೆ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಚಾಲೆ ನೀಡಿದರು. ಇಂದು ಬೆಳಗ್ಗೆ ದಾವಣಗೆರೆ ನಗರದ ಗಾಂಧಿ ನಗರದಲ್ಲಿರುವ ಚೌಡೇಶ್ವರಿ ದೇವಾಲಯದ ಬಳಿ ಉದ್ಘಾಟಿಸಿದರು. ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ …
Read More »
Laxmi News 24×7