Breaking News

Uncategorized

ಚೀನಾದ 59 ಅಪ್ಲಿಕೇಶನ್‌ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್‌ ಪ್ರತಿಕ್ರಿಯೆ ನೀಡಿದೆ.

ವದೆಹಲಿ: ಚೀನಾದ 59 ಅಪ್ಲಿಕೇಶನ್‌ಗಳು ನಿಷೇಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದ ಬಳಿಕ ಮೊದಲ ಬಾರಿಗೆ ಗೂಗಲ್‌ ಪ್ರತಿಕ್ರಿಯೆ ನೀಡಿದೆ. ಭಾರತ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಡೆವಲಪರ್‌ಗಳಿಗೆ ಮಾಹಿತಿ ನೀಡಿದ್ದು, ಈ ಅಪ್ಲಿಕೇಶನ್‌ಗಳನ್ನು ತಾತ್ಕಾಲಿಕವಾಗಿ ಬ್ಲಾಕ್‌ ಮಾಡಿದ್ದೇವೆ ಎಂದು ಗೂಗಲ್‌ ವಕ್ತಾರರು ತಿಳಿಸಿದ್ದಾರೆ. ಗೂಗಲ್‌ ವಕ್ತಾರರು ಎಷ್ಟು ಅಪ್ಲಿಕೇಶನ್‌ ಬ್ಲಾಕ್‌ ಮಾಡಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಆದರೆ ಡೆವಲಪರ್‌ಗಳೇ ಕೆಲ ಅಪ್ಲಿಕೇಶನ್‌ಗಳನ್ನೆ ಪ್ಲೇ ಸ್ಟೋರ್‌ನಿಂದ ತೆಗೆದಿದ್ದಾರೆ ಎಂದು …

Read More »

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …

Read More »

ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿಯಸಖತ್ ಸದ್ದು

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ 777 ಚಾರ್ಲಿ ಸಖತ್ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಗೋವಾ ಸೇರಿದಂತೆ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಯುತ್ತಿರುವ ಕುರಿತು ಚಿತ್ರ ತಂಡ ಅಪ್‍ಡೇಟ್ ನೀಡಿತ್ತು. ಇದೀಗ ಮತ್ತೊಂದು ಸಂತಸದ ವಿಚಾರವನ್ನು ಹಂಚಿಕೊಂಡಿದೆ. ರಕ್ಷಿತ್ ಶೆಟ್ಟಿ ಅಭಿನಯದಲ್ಲಿ ಮೂಡಿಬರುತ್ತಿರುವ 777 ಚಾರ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಈಗಾಗಲೇ ಸಿನಿಮಾದ ಬಹುಭಾಗ ಚಿತ್ರೀಕರಣ ಪೂರ್ಣಗೊಂಡಿದೆ. ಗೋವಾ, ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. …

Read More »

ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಟ, ನಿಖಿಲ್ ಕುಮಾರಸ್ವಾಮಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅನ್ನದಾತರ ಬಗ್ಗೆ ಬರೆದುಕೊಂಡಿದ್ದಾರೆ. ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ …

Read More »

ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಇನ್ನಿಲ್ಲ

ಬೆಂಗಳೂರು: ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ಅವರು ಇಂದು ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಇಡೀ ರಾಜ್ಯವೇ ಕೊರೊನಾ ವೈರಸ್ ಕಾಟದಿಂದ ತತ್ತರಿಸಿ ಹೋಗುತ್ತಿದೆ. ಈ ನಡುವೆ ಸಾಲು ಸಾಲು ನಟರು ಸಾವನ್ನಪ್ಪುತ್ತಿರುವುದು ಚಿತ್ರರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚೆಗಷ್ಟೇ ಸಾವನ್ನಪ್ಪಿದ ಯುವ ನಟ ಚಿರಂಜೀವಿ ಸರ್ಜಾ ಸಾವಿನ ಸುದ್ದಿ ಮರೆಯುವ ಮುನ್ನವೇ ಹಿರಿಯ ಹಾಸ್ಯನಟ ರಾಜ್‍ಗೋಪಾಲ್ ಅವರು ನಮ್ಮನ್ನು ಅಗಲಿದ್ದಾರೆ. ಕಳೆದ ಕೆಲ ದಿನಗಳಿಂದ ಕಿಡ್ನಿ ಸಮಸ್ಯೆ ಮತ್ತು ಅಸ್ತಮಾ ಸಮಸ್ಯೆಯಿಂದ …

Read More »

ಜುಲೈ ಅಂತ್ಯಕ್ಕೆ ಬೆಂಗ್ಳೂರಲ್ಲಿ 40 ಸಾವಿರ ಕೇಸ್- ತಜ್ಞರಿಂದ ಸರ್ಕಾರಕ್ಕೆ ಡೆಡ್ಲಿ ವಾರ್ನಿಂಗ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವೇ ಆಗ್ತಿದೆ. ಅದರಲ್ಲೂ ಕೊರೊನಾ ಬೆಂಗಳೂರಿಗೆ ಮಹಾಕಂಟಕ ತಂದೊಡ್ಡುತ್ತೆ ಎಂದು ತಜ್ಞರು ಡೆಡ್ಲಿ ವಾರ್ನಿಂಗ್ ಕೊಟ್ಟಿದ್ದಾರೆ. ಹೌದು. ಬೆಂಗಳೂರು ಈಗಾಗಲೇ ಕೊರೊನಾ ಸೋಂಕಿಗೆ ತತ್ತರಿಸಿದೆ. ಆದರೆ ಇದರ ನಡುವೆ ಮತ್ತೊಂದು ಆತಂಕಕಾರಿ ವಿಚಾರ ಹೊರಬಿದ್ದಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬರೋಬ್ಬರಿ 30 ಸಾವಿರದಿಂದ 40 ಸಾವಿರ ಸೋಂಕು ದಾಖಲಾಗಬಹುದು ಅಂತ ತಜ್ಞ ವೈದ್ಯರಾದ ಸುದರ್ಶನ್ ಬಲ್ಲಾಳ್ ಎಚ್ಚರಿಕೆ ಕೊಟ್ಟಿದ್ದಾರೆ. ಅಲ್ಲದೇ ಮುಂದಿನ 15 …

Read More »

ನನಸಾಯ್ತು ‘ಕನಕಪುರ ಬಂಡೆ’ಯ ದಶಕಗಳ ಕನಸು- ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿಕೆಶಿ ಪಟ್ಟಾಭಿಷೇಕ

ಬೆಂಗಳೂರು: ಡಿ.ಕೆ. ಶಿವಕುಮಾರ್ ಕೊನೆಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಘೋಷಣೆಯಾದ ಬಳಿಕ ಹಲವಾರು ಅಡೆತಡೆಗಳ ಬಳಿಕ ಇಂದು ಬೆಳಗ್ಗೆ 11.30ಕ್ಕೆ ಪದಗ್ರಹಣ ಸ್ವೀಕರಿಸಲಿದ್ದಾರೆ. ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅಂದ್ರೆ ಡಿಕೆಶಿ. ಕಾಂಗ್ರೆಸ್ಸಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ಕನಕಪುರದಿಂದ ಸತತವಾಗಿ ಗೆಲ್ಲುತ್ತಲೇ ವಿಧಾನಸೌಧಕ್ಕೆ ಎಂಟ್ರಿ ಕೊಡ್ತಿರೋ ಡಿಕೆಶಿ, ಇದೀಗ ಕಾಂಗ್ರೆಸ್ಸಿನ ಹೆಮ್ಮರವಾಗಿ ಬೆಳೆದಿದ್ದಾರೆ. ಪಕ್ಷದ ಅಧ್ಯಕ್ಷ ಗಾದಿಗೇರುವ ಡಿಕೆಶಿ ದಶಕಗಳ ಕನಸು ಈಗ ನನಸಾಗ್ತಿದೆ. ಹಲವಾರು …

Read More »

ಕೊರೊನಾ ಎಫೆಕ್ಟ್- ಉಡುಪಿಯಲ್ಲಿ ಭಕ್ತರಿಗೆ ಮುದ್ರಾಧಾರಣೆ ಇಲ್ಲ

ಉಡುಪಿ: ಕೊರೊನಾ ಮಹಾಮಾರಿ ಸೋಂಕು ಉಡುಪಿಯಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣೆ ತಪ್ಪಿಸಿದೆ. ಕೃಷ್ಣಮಠದಲ್ಲಿ ಸಾಂಕೇತಿಕವಾಗಿ ತಪ್ತಮುದ್ರಾಧಾರಣೆ ಕಾರ್ಯಕ್ರಮ ನಡೆಸಲಾಗಿದೆ. ಪ್ರಥಮ ಏಕಾದಶಿಯಂದು ಮುದ್ರಾಧಾರಣೆ ನಡೆಸುವುದು ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಈ ಬಾರಿ ಯಾವುದೇ ಭಕ್ತರಿಗೆ ಮುದ್ರಾಧಾರಣೆ ಮಾಡದೆ ಕೇವಲ ಯತಿಗಳು ಮಾತ್ರ ಪರಸ್ಪರ ಮುದ್ರಾಧಾರಣೆ ಮಾಡಿಸಿಕೊಂಡರು. ಕೊರೊನಾ ಬಂದ ನಂತರ ಲಾಕ್‍ಡೌನ್ ಘೋಷಣೆಯಾದ ಕ್ಷಣದಿಂದ ಉಡುಪಿ ಕೃಷ್ಣ ಮಠ ಮುಚ್ಚಿದೆ. ರಾಜ್ಯದ ಇತರ ಎಲ್ಲಾ ದೇವಾಲಯಗಳು ತೆರೆದಿದ್ದರೂ ಕೃಷ್ಣಮಠವನ್ನು ತೆರೆಯುವ …

Read More »

ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ.

ಕೊಪ್ಪಳ : ಈ ವರ್ಷ ಮುಂಗಾರು ಮಳೆಯಿಲ್ಲದೆ ಕಂಗಾಲಾಗಿದ್ದ ರೈತರ ಪಾಲಿಗೆ ಬೇವು ಈ ವರ್ಷ ಸಿಹಿಯಾಗಿದೆ. ಮುಂಗಾರು ಮಳೆಗಳಲ್ಲಿಯೇ ಬೀಜ ಮಳೆ ಎಂದು ಹೆಸರಾಗಿರುವ ರೋಹಿಣಿ ಮಳೆ ಈ ವರ್ಷ ಕೈ ಕೊಟ್ಟ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಕಂಗಾಲಾಗಿ ಕೈಕಟ್ಟಿ ಕುಳಿತುಕೊಂಡಿರುವ ಈ ಸಂದರ್ಭದಲ್ಲಿ ರೈತರ ಬಾಳೀಗೆ ಸಿಹಿಯಾಗಿ ಬಂದಿದ್ದು, ಬೇವಿನ ಬೀಜ ಎಂದರೆ ತಪ್ಪಾಗಲಾರದು. ಅತ್ಯಂತ ಕಹಿಯಾಗಿರುವ ಮತ್ತು ಔಷಧ ಗುಣಗಳನ್ನು ಹೊಂದಿರುವ ಬೇವು ಮಾತ್ರ (ಬೇವಿನ ಬೀಜ) …

Read More »

ಮಾಸ್ಕ್ ಹಾಕಲ್ಲ ಏನ್ ಮಾಡ್ತೀರಾ ಮಾಡಿ’ ಎಂದವ್ರನ್ನ ಬಸ್ಸಿನಿಂದ ಹೊರದಬ್ಬಿದ ಪ್ರಯಾಣಿಕರು

ಉಡುಪಿ: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್ ಒಳಗೆ ಬಂದು ಕುಳಿತಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿರ್ವಾಹಕನಿಗೆ ಈ ಬಗ್ಗೆ ದೂರು ನೀಡಿದ್ದಾರೆ. ನಿರ್ವಾಹಕ ಹೇಳಿದರೂ ಇಬ್ಬರು ಪ್ರಯಾಣಿಕರು ಕೆಳಗಿಳಿದಿಲ್ಲ. ಈ ವೇಳೆ ಪ್ರಯಾಣಿಕರು, ಮಾಸ್ಕ್ ಹಾಕಲ್ಲ ಏನ್ ಮಾಡುತ್ತೀರಾ ಮಾಡಿ ಎಂದು …

Read More »