Breaking News

Uncategorized

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ

ಬೆಳಗಾವಿ: ಕೋವಿಡ್-19 ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ.100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜತೆ ಚರ್ಚೆ ನಡೆಸಿದರು. ಪ್ರತಿವರ್ಷ ಅತ್ಯುತ್ತಮ ಫಲಿತಾಂಶಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ …

Read More »

ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಐಎಂಎ ಹಗರಣದಲ್ಲಿ ವಂಚಿತರ ಸಂಕಷ್ಟ ಆಲಿಸದೇ ಆರೋಪಿ ಮನ್ಸೂರ್ ಖಾನ್ ಗೆ ಸಹಕರಿಸಿದ್ದಾರೆ. ಅಲ್ಲದೇ ಕಿಕ್ ಬ್ಯಾಕ್ ಪಡೆದುಕೊಂದಿದ್ದಾರೆ ಎಂಬ ಆರೋಪ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿವಂತೆ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ. ಈ ಹಿಂದೆ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳಾದ ಹೇಮಂತ್ …

Read More »

ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ:ವಾಟಾಳ್ ನಾಗರಾಜ್

ಕೊಪ್ಪಳ: ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು. ರೋಲ್‍ಕಾಲ್ ಕನ್ನಡಪರ ಸಂಘಟನೆಗಳ ಬಂದ್‍ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ. ಈ ಹಿಂದೆ ಯಡಿಯೂರಪ್ಪ ಅವರನ್ನೇ ಬೈದಂತವರು, ಅವರ ತಂದೆ ತಾಯಿಗೂ ಬೈಯೋದಿಲ್ಲ ಎಂದು …

Read More »

ಅರಭಾವಿ ಕ್ಷೇತ್ರದ ಯುವ ಜನಾಂಗಕ್ಕೆ ಹೊಸ ಚೈತನ್ಯ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಜಿ.ಟಿ.ಟಿ. ಸಂಸ್ಥೆ ಸಹಕಾರಿ

ಅರಬಾವಿ –  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಅರಭಾವಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) …

Read More »

ಉಮೇಶ ಕತ್ತಿ ಅವರು ಸಚಿವರಾಗಬೇಕು:ಮಹಾಂತೇಶ ಕವಟಗಿಮಠ

ಬೆಳಗಾವಿ : ಬೆಳಗಾವಿ ಬಿಜೆಪಿ ಹಿರಿಯ ನಾಯಕ, 8 ಬಾರಿ ಶಾಸಕರಾದ ಉಮೇಶ ಕತ್ತಿ ಅವರು ಸಚಿವರಾಗಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಪಾಂಗೀರೆ ಗ್ರಾಮದಲ್ಲಿ ಸೋಮವಾರ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರರಚನೆ ಇದು ಸಂಪೂರ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಹಿರಿಯ ಶಾಸಕ ಉಮೇಶ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಮಂಜೂರಾತಿ ಪಡೆದು ರೈತರಿಗೆ ನೀರಾವರಿ ಸೌಲಭ್:ಮಹಾಂತೇಶ ಕವಟಗಿಮಠ

ಚಿಕ್ಕೋಡಿ : ಕೃಷ್ಣಾ ನದಿಯ ಲಕ್ಷಾಂತರ ಕ್ಯೂಸೆಕ್ ಹರಿದು ಹೋಗುವ ನೀರನ್ನು ಬಳಕೆ ಮಾಡಿಕೊಂಡು ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿಗಳನ್ನು ಮಂಜೂರಾತಿ ಪಡೆದು ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ರಾಜ್ಯ ಬಿಜೆಪಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಪಾಂಗೀರೆ ಗ್ರಾಮದಲ್ಲಿ ಸೋಮವಾರ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ …

Read More »

COVID ಲಸಿಕೆ: ಸರಕಾರಕ್ಕೆ 250 ರೂ, ಖಾಸಗಿಗೆ 1000 ರೂ.ಗೆ ಮಾರಾಟ: ಸೆರಂ ಇನ್ಸ್ಟಿಟ್ಯೂಟ್ Nov, 24 2020

ನವದೆಹಲಿ: ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ ಭಾರತಕ್ಕೆ ಲಸಿಕೆ ಪೂರೈಕೆ ಕುರಿತು ಖಾಸಗಿ ಸಂಸ್ಥೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸೆರಂ ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲ, ಬ್ರಿಟನ್ ಮೂಲದ ಆಕ್ಸ್‍ಫರ್ಡ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ‘ಕೋವಿಶೀಲ್ಡ್’ ಲಸಿಕೆಯು ಭರವಸೆದಾಯಕ ಫಲಿತಾಂಶ ನೀಡಿರುವುದಾಗಿ ಪ್ರಕಟಿಸಲಾಗಿದ್ದು, …

Read More »

ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಪಡೆದುಕೊಳ್ಳಲು ರಮೇಶ್ ಜಾರಕಿಹೊಳಿ‌ ಸೂಚನೆ‌

ಬೆಂಗಳೂರು : ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಸಚಿವರು, ಬಾಕಿ ಇರುವ ಪ್ರಸ್ತಾವನೆಗಳಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ಅರಣ್ಯ …

Read More »

ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ.:ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯದ ಜನ ಅಂಬರೀಶ್ ಅವರನ್ನು ವಿಶೇಷವಾಗಿ ದೇವರಂತೆ ಪೂಜಿಸುತ್ತಿದ್ದರು. ಪ್ರೀತಿ ಒಂದೇ ಅವರು ಸಂಪಾದಿಸಿರೋ ಆಸ್ತಿ. ಜನರ ಅವರನ್ನ ಹೃದಯಲ್ಲಿ ಇಟ್ಟುಕೊಂಡು ಪೂಜಿಸ್ತಾ ಇದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇಂದು ಅಂಬಿ ಎರಡನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ಎಲ್ಲರನ್ನೂ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಿದ್ದರು. ಎಲ್ಲರ ಪ್ರೀತಿ ಗಳಿಸಿ ಆ ಪ್ರೀತಿಯನ್ನ ಶಾಶ್ವತವಾಗಿ ಉಳಿಸಿಕೊಂಡಿದ್ದಾರೆ. …

Read More »

210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು

ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. …

Read More »