Breaking News

Uncategorized

ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ

ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್‌- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …

Read More »

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …

Read More »

ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ

ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್​ ಯಡಿಯೂರಪ್ಪ ನಮನ‌ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್​ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …

Read More »

ಮನೆಯ ಗೋಡೆ ಕುಸಿತ – 6 ಜನ ಪ್ರಾಣಾಪಾಯದಿಂದ ಪಾರು………

ಗದಗ: ಎರಡು ದಿನ ಸುರಿದ ಭಾರೀ ಮಳೆಗೆ ಮನೆಯ ಗೋಡೆ ನೆನೆದು ಕುಸಿತವಾಗಿದ್ದು, ಕ್ಷಣಾರ್ಧದಲ್ಲಿ 6 ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ನಡೆದಿದೆ. ಕಮಲವ್ವ ಮಡಿವಾಳ ಅವರ ಮನೆಗೊಡೆ ಕುಸಿತವಾಗಿದೆ. ಲಖಮಾಪುರ ಗ್ರಾಮದಲ್ಲಿ ಕುಸಿತವಾದ ಮನೆಗೋಡೆ ಒಳಭಾಗದಲ್ಲಿ 6 ಜನ ಮಲಗಿದ್ದರು. ಈ ವೇಳೆ ಮಳೆಯಲ್ಲಿ ನೆನೆದಿದ್ದ ಗೋಡೆ ಕುಸಿದಿದೆ. ಅದೃಷ್ಟವಶಾತ್ ಗೋಡೆ ಹೊರಭಾಗಕ್ಕೆ ಬಿದ್ದಿದ್ದು, ಕುಸಿತವಾಗುತ್ತಿದ್ದಂತೆ ಕುಟುಂಬ ಎದ್ದು ಓಡಿದೆ. ಇದರಿಂದ ಭಾರೀ …

Read More »

ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿ ಆಗೋದು ಬೇಡ: ಕಾಮೇಗೌಡರು

ಮಂಡ್ಯ: ನಾನು ಆರೋಗ್ಯವಾಗಿದ್ದೇವೆ. ಹಾಗಾಗಿ ಯಾರೂ ಗಾಬರಿ ಆಗುವುದು ಬೇಡ ಎಂದು ಕಾಮೇಗೌಡರು ಕೈ ಮುಗಿದು ಮಾತನಾಡಿದ್ದಾರೆ. ಕಾಮೇಗೌಡರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಐಸೋಲೇಷನ್ ವಾರ್ಡಿನಲ್ಲಿ ಆರೈಕೆ ಮಾಡುವವರು ಇಲ್ಲದ ಕಾರಣ ಅನ್ನ ನೀರು ಸೇವಿಸುವುದನ್ನು ತ್ಯಜಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಇದೀಗ ಸ್ವತಃ ಕಾಮೇಗೌಡರೇ, ಆಸ್ಪತ್ರೆಯಲ್ಲಿ ನನ್ನನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಐದು ದಿನಗಳಿಂದ ಮಂಡ್ಯದ ಕೋವಿಡ್ ಆಸ್ಪತ್ರೆಯ …

Read More »

ನನ್ನ ವಿರುದ್ಧ ಇಡೀ ಗ್ಯಾಂಗ್ ಕೆಲಸ ಮಾಡ್ತಿದೆ: ಎ.ಆರ್.ರೆಹಮಾನ್

ಮುಂಬೈ: ಮ್ಯೂಸಿಕ್ ಮಾಂತ್ರಿಕ ಎ.ಆರ್. ರಹಮಾನ್ ಮೊದಲ ಬಾರಿಗೆ ಬಾಲಿವುಡ್ ನಲ್ಲಿಯ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ರೆಹಮಾನ್ ಅವರನ್ನ ಸಹ ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತವನ್ನು ಎದುರಿಸಿದ್ದಾರೆ. ಇಡೀ ಗ್ಯಾಂಗ್ ನನ್ನ ವಿರುದ್ಧ ಕೆಲಸ ಮಾಡುತ್ತಿತ್ತು. ಹಾಗಾಗಿ ನಾನು ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಳುಗರೊಂದಿಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಸಂಗೀತ ನೀಡಿರುವ ಸಿನಿಮಾಗಳು ಚೆನ್ನಾಗಿಲ್ಲ ಎಂದು …

Read More »

ಕಾರ್ಗಿಲ್ ಹುತಾತ್ಮರಿಗೆ ಸಿಎಂ ನಮನ

ಬೆಂಗಳೂರು: ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಇಂದು ಕಾರ್ಗಿಲ್ ವಿಜಯ್ ದಿವಸ್. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ …

Read More »

ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ,ಶೇ 10 EWS ಮೀಸಲಾತಿ ಚಿಂತನ ಮಂಥನ: ವೆಬಿನಾರ್ ಮೂಲಕ ಗಣ್ಯರಿಂದ ಚರ್ಚೆ

ಬೆಳಗಾವಿ: ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10 ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದ್ದು, ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಇದರಿಂದಾಗುವ ಪರೆಣಾಮಗಳ ಕುರಿತಾಗಿ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಸಹಯೋಗದಲ್ಲಿ ಇದೇ ಜುಲೈ 26 ರಂದು ಸಂಜೆ 4 ಗಂಟೆಗೆ ಝೂಮ್ ವೆಬಿನಾರ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಕಲಬುರಗಿ ಕನಕಗುರಪೀಠ …

Read More »

ಬೆಳಗಾವಿ | 30ರಿಂದ ಸಿಇಟಿ ಪರೀಕ್ಷೆ: ಸಿದ್ಧತೆಗೆ ಸೂಚನೆ

ಬೆಳಗಾವಿ: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 30ರಿಂದ ಮೂರು ದಿನಗಳವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಒಳಗಡೆ ಹಾಗೂ ಸುತ್ತಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು. …

Read More »

ಬೆಳಗಾವಿ| ಬ್ರಾಹ್ಮಣರಿಗೆ ಮೀಸಲಾತಿ: ವೆಬಿನಾರ್‌ ನಾಳೆ.

ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್‌ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ. ‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ …

Read More »