Breaking News

Uncategorized

ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಹೆಸರಲ್ಲಿ ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಮೀರ್‌ ಉಲ್ಲಾ ಬಂಧಿತ ಆರೋಪಿ. ಫೇಸ್‌ಬುಕ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸಮೀರ್ ಉಲ್ಲಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡಿರುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಈ ವಿಡಿಯೋವನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋವನ್ನು …

Read More »

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ

ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …

Read More »

ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.

ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …

Read More »

ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ

  ಅಥಣಿ:  ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು,   5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ  ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …

Read More »

ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!

ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್‍ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್‍ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್‍ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …

Read More »

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು

  ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ.   ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …

Read More »

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …

Read More »

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …

Read More »

ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆ

ಉಡುಪಿ: ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆಗಳಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಟ್ರಸ್ಟಿಗಳು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು. ಇವತ್ತು ನಡೆದ ಸಭೆಯಲ್ಲಿ ಮಂದಿರ ನಿರ್ಮಾಣ ಕ್ಕೆ ಭೂಮಿಯ ಧಾರಣಾ ಸಾಮರ್ಥ್ಯ ಅಧ್ಯಯನ ಮತ್ತು ಮಂದಿರ ನಿರ್ಮಾಣ ಮೊತ್ತದ ಕ್ರೋಢೀಕರಣದ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮಗಳಿಗೆ ಪೇಜಾವರ …

Read More »