ಬೆಂಗಳೂರು: ಸೌತ್ ಸಿನಿಮಾರಂಗದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಪಾಕಿಸ್ತಾನದ ಕ್ರಿಕೆಟರ್ ಒಬ್ಬರನ್ನು ಮದುವೆಯಾಗುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸುದ್ದಿಯಾಗಿತ್ತು. ಈಗ ಇದಕ್ಕೆ ಸ್ವತಃ ತಮನ್ನಾ ಅವರೇ ಸ್ಪಷ್ಟನೇ ನೀಡಿದ್ದಾರೆ. ಸದ್ಯ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಟಾಪ್ ನಟಿಯಗಿರುವ ತಮನ್ನಾ ಅವರು ಬಾಲಿವುಡ್ನಲ್ಲೂ ನಟಿಸುತ್ತಿದ್ದಾರೆ. ಹಾಗಾಗಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ನಂತರ ತಮ್ಮನ್ನಾ ಪಾಕ್ ಕ್ರಿಕೆಟಿಗನನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಸಖತ್ ವೈರಲ್ ಆಗಿತ್ತು. ಇದಕ್ಕೆ …
Read More »ಕಾಫಿನಾಡಲ್ಲಿ ನಾಳೆಯಿಂದ ರಸ್ತೆಗಿಳಿಯಲಿವೆ KSRTC ಬಸ್…….
ಚಿಕ್ಕಮಗಳೂರು: ಕಳೆದ 40 ದಿನಗಳಿಂದ ಸಂಪೂರ್ಣ ಬಂದ್ ಆಗಿದ್ದ ಸರ್ಕಾರಿ ಬಸ್ ಗಳು ನಾಳೆಯಿಂದ ರಸ್ತೆಗಿಳಿಯಲಿವೆ. ಚಿಕ್ಕಮಗಳೂರಿನಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಸ್ ಬಂತು ಎಂದು ಪ್ರಯಾಣಿಕರು ದಿಢೀರ್ ಅಂತ ಹತ್ತುವಂತಿಲ್ಲ. ತಮ್ಮ ಸಂಪೂರ್ಣ ವಿವರ ನೀಡಿ ನಂತರ ಪ್ರಯಾಣಿಸುವ ನಿಯಮ ಜಾರಿಗೆ ತರಲಾಗಿದೆ. ಹೀಗಾಗಿ ಬಸ್ ಹೊರಡುವ ಅರ್ಧ ಗಂಟೆ ಮುಂಚೆ ನಿಲ್ದಾಣಕ್ಕೆ ಬರಬೇಕಾಗಿದೆ. ಮಾಹಿತಿ ನೀಡುವ ವೇಳೆ ಪ್ರಯಾಣಿಕರ ಹೆಸರು, ವಿಳಾಸ, …
Read More »ನಾಳೆ ಬಾರ್ ಓಪನ್ – ಇಂದೇ ಮದ್ಯದಂಗಡಿಗೆ ಆರತಿ ಎತ್ತಿ, ಕಾಯಿ ಒಡೆದ ಮದ್ಯಪ್ರಿಯಾ……….
ಚಿಕ್ಕಮಗಳೂರು/ಚಿತ್ರದುರ್ಗ/ಕೋಲಾರ: ಮೇ 4ರಿಂದ ರಾಜ್ಯದ ಹಲವು ಭಾಗದಲ್ಲಿ ಲಾಕ್ಡೌನ್ ಸಡಿಲಿಕೆಗೊಳಿಸಿ ಮದ್ಯ ಮಾರಾಟಕ್ಕೆ ಷರತ್ತು ವಿಧಿಸಿ ಅವಕಾಶ ನೀಡಲಾಗಿದೆ. ಇಷ್ಟು ದಿನ ಎಣ್ಣೆ ಇಲ್ಲದೇ ನಿರಾಶೆಗೆ ಒಳಗಾಗಿದ್ದ ಮದ್ಯಪ್ರಿಯರು ನಾಳೆ ಮದ್ಯದಂಗಡಿ ಬಾಗಿಲು ತೆರೆಯುವುದನ್ನೇ ಕಾಯುತ್ತಿದ್ದಾರೆ. ಈ ನಡುವೆ ಕೋಲಾರದಲ್ಲಿ ಮದ್ಯಪ್ರಿಯನೋರ್ವ ಅಂಗಡಿಗೆ ಬಾಗಿಲು ತೆರೆಯುವ ಮುನ್ನವೇ ಆರತಿ ಎತ್ತಿ ಪೂಜೆ ಮಾಡಿ, ಕಾಯಿ ಒಡೆದು ಖುಷಿಪಟ್ಟಿದ್ದಾನೆ. ಸೋಮವಾರ ಬಾರ್ ಓಪನ್ ಆಗುವ ಹಿನ್ನೆಲೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ …
Read More »ಕಲಬುರಗಿಯಲ್ಲಿ ಒಬ್ಬಂಟಿಯಾದ ಡಿಸಿಎಂ ಗೋವಿಂದ ಕಾರಜೋಳ
ಕಲಬುರಗಿ: ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಒಬ್ಬಂಟಿಯಾದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಜಿಲ್ಲಾ ಉಸ್ತುವಾರಿಯಾದ್ರೂ ಕಲಬುರಗಿಗೆ ಕಾರಜೋಳ ಅವರು ಬಂದಿಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಮಜರ್ ಖಾನ್ ತರಾಟೆಗೆ ತೆಗೆದುಕೊಂಡರು ಬಿಜೆಪಿಯ ಯಾವ ನಾಯಕರು ಕಾರಜೋಳ ಅವರ ಪರ ಮಾತನಾಡದೇ ಮೌನವಾಗಿದ್ದರು. ಕೊನೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ನಗರದಲ್ಲಿನ ಕಂಟೈನ್ಮೆಂಟ್ ಝೋನ್ಗಳ ಪರಿಸ್ಥಿತಿ ಹಾಗೂ ಅಲ್ಲಿನ ಸ್ಥಳೀಯರಿಗೆ ಇನ್ನು ಒದಗಿಸಬೇಕಾದ ಸೌಕರ್ಯಗಳ ಮಾಹಿತಿ …
Read More »ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇನ್ನಿಲ್ಲ……
ಬೆಂಗಳೂರು: ಕನ್ನಡ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಖ್ಯಾತಿ ಗಳಿಸಿದ್ದ ಕೆ.ಎಸ್ ನಿಸಾರ್ ಅಹಮದ್(84) ಇಂದು ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಿಸಾರ್ ಅಹಮದ್ ಈ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿಸಾರ್ ಅಹಮದ್ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ. 10ನೇ ವಯಸ್ಸಿನಲ್ಲೇ …
Read More »ರಾಷ್ಟ್ರೀಯ ಆರೋಗ್ಯ ಅಭಿಯಾನಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಎಲ್ಲಾ ವರ್ಗದ ನೌಕರರ ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳಕ್ಕೆ ಸಚಿವರಿಗೆ ಮನವಿ
ಶಿವಮೊಗ್ಗಕ್ಕೆ ಆಗಮಿಸಿದ ಮಾನ್ಯ ಆರೋಗ್ಯ ಸಚಿವರಾದ ಶ್ರೀ ಶ್ರೀರಾಮುಲು ಅವರಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಗುತ್ತಿಗೆ ಮತ್ತು ಹೊರಗುತ್ತಿಗೆ ಎಲ್ಲಾ ವರ್ಗದ ನೌಕರರ ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳ ಕುರಿತಾಗಿ ಸಚಿವರಲ್ಲಿ ಖುದ್ದಾಗಿ ವಿವರಿಸಿ ಮನವಿಯನ್ನು ಸಲ್ಲಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ …
Read More »ಬಿಲ್ಡಿಂಗ್ನ ತುತ್ತತುದಿಯಲ್ಲಿ ನಿಂತು ಸ್ಟಾರ್ ನಟನ ತಂಗಿಯ ಲಿಪ್ಲಾಕ್………..
ಮುಂಬೈ: ಬಾಲಿವುಡ್ ಹಿರಿಯ ನಟ ಜಾಕಿ ಶ್ರಾಫ್ ಪುತ್ರಿ, ಟೈಗರ್ ಶ್ರಾಫ್ ಸೋದರಿ ಕೃಷ್ಣಾ ಶ್ರಾಫ್ ತನ್ನ ಗೆಳೆಯನ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿನಂತೆ ಹರಿದಾಡುತ್ತಿವೆ. ಸೋದರ ಜಾಕಿ ಶ್ರಾಫ್ ಸಿಂಗಲ್ ಆಗಿದ್ದರೂ ಸೋದರಿ ಕೃಷ್ಣಾ ಗೆಳೆಯನ ಜೊತೆ ಕೊರೊನಾ ಹಾಲಿಡೇಯನ್ನ ಎಂಜಾಯ್ ಮಾಡ್ತಿದ್ದಾರೆ. ಟೈಗರ್ ಶ್ರಾಫ್ ಮತ್ತು ದಿಶಾ ಪಟಾಣಿ ನಡುವೆ ಲವ್ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, …
Read More »ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ…..ಷರತ್ತುಗಳು ಏನು?
ಬೆಂಗಳೂರು: ಲಾಕ್ಡೌನ್ ನಡುವೆ ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದಲ್ಲಿ ಸೋಮವಾರದಿಂದ ಎಣ್ಣೆ ಮಾರಾಟಕ್ಕೆ ಅನುಮತಿ ನೀಡಿ ಅಬಕಾರಿ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಶನಿವಾರ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ರೆಡ್ಝೋನ್ ಸೇರಿದಂತೆ ಉಳಿದ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ …
Read More »ದೇಶದಲ್ಲಿ ಇಂದು 68 ಸಿಆರ್ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢ………
ನವದೆಹಲಿ: ದೇಶದಲ್ಲಿ ಇಂದು 68 ಸಿಆರ್ಪಿಎಫ್ ಯೋಧರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಈವರೆಗೆ 127 ಸಿಆರ್ಪಿಎಫ್ ಯೋಧರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಲಾಕ್ಡೌನ್ ಹಿನ್ನೆಲೆ ಸಿಆರ್ಪಿಎಫ್ ಯೋಧರನ್ನು ರಾಜಧಾನಿ ದೆಹಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಕೊರೊನಾ ಪತ್ತೆಯಾದ ಎಲ್ಲ 68 ಸೈನಿಕರು ಪೂರ್ವ ದೆಹಲಿಯಲ್ಲಿರುವ ಬೆಟಾಲಿಯನ್ಗೆ ಸೇರಿದವರಾಗಿದ್ದಾರೆ. ಈ ಬೆಟಾಲಿಯನ್ನ ಸೈನಿಕರಲ್ಲಿ ಒಬ್ಬರಿಗೆ ಮೊದಲೇ ಸೋಂಕು ತಗುಲಿರುವುದು ದೃಢಪಟ್ಟಿತ್ತು ಈವರೆಗೂ ಪೂರ್ವ ದೆಹಲಿಯಲ್ಲಿರುವ …
Read More »ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..!
ಸರಳವಾಗಿ ಗೃಹಪ್ರವೇಶ ಮಾಡಿ 500 ಬಡವರಿಗೆ ರೇಷನ್ ಕಿಟ್ ವಿತರಿಸಿದ ಉದ್ಯಮಿ..! ರೋಹಿತ್ ರಾವಳ್ ಅವರು ಬೆಳಗಾವಿ ನಗರದ 500 ಬಡವರಿಗೆ ಉಚಿತ ಪಡಿತರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಬೆಳಗಾವಿ(ಮೇ.01): ಕೊರೋನಾ ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದ್ದು, ಬಡವರ ಕಷ್ಟ ಹೇಳತೀರದಾಗಿದೆ. ದಿನಗೂಲಿ ಆದಾಯದಲ್ಲೇ ಜೀವನ ಸಾಗಿಸುತ್ತಿದ್ದ ಬಡಪಾಯಿಗಳ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ 72 ಕೊರೋನಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಆತಂಕ …
Read More »