ಕೆಲವು ಸಿನಿಮಾ ಪ್ರೇಮಿಗಳು ಸಿನಿಮಾಗಳನ್ನು ಮಾತ್ರವಲ್ಲದೆ ವೈಯಕ್ತಿಕವಾಗಿ ಸಿನಿಮಾ ನಟ-ನಟಿಯರನ್ನೂ ಬಹಳ ಇಷ್ಟಪಡುತ್ತಾರೆ. ತಮ್ಮ ನೆಚ್ಚಿನ ಕಲಾವಿದರ ಮನೆಯಲ್ಲಿ ನಡೆಯುವ ಸಮಾರಂಭಗಳನ್ನು ಅವರವರ ಅಭಿಮಾನಿಗಳೂ ಸಂಭ್ರಮಿಸುತ್ತಾರೆ. ಕಲಾವಿದರ ಜನ್ಮ ದಿನಾಚರಣೆಯನ್ನು ತಾವೂ ಆಚರಿಸುತ್ತಾರೆ. ದೂರದೂರುಗಳಿಂದ ತಮ್ಮ ಅಚ್ಚುಮೆಚ್ಚಿನ ಕಲಾವಿದರ ಮನೆಗೆ ಬಂದು ಶುಭ ಹಾರೈಸುವವರೂ ಇದ್ದಾರೆ. ಚಂದನವನದ ಹಲವು ನಟ-ನಟಿಯರು ಹಾಗೂ ತಂತ್ರಜ್ಞರಿಗೆ ಜುಲೈನಲ್ಲಿ ಜನ್ಮದಿನದ ಸಡಗರ. ಗೋಲ್ಡನ್ ಸ್ಟಾರ್ ಬಿರುದಾಂಕಿತರಾದ ಗಣೇಶ್ ಜನಿಸಿದ್ದು 1976ರ ಜುಲೈ 2ರಂದು ಸುಮಾರು …
Read More »ಆಶಾ ಕಾರ್ಯ ಕರ್ತೆಯರಿಗೆ ರಕ್ಷಣೆ ಕೊಡದ ಸರ್ಕಾರ. ಸರ್ಕಾರದ ಮೇಲೆ ಕಾರ್ಯ ಕರ್ತೆಯರ ಆಕ್ರೋಶ..
ಮಂಡ್ಯ: ನಾವು ಜನರಿಗೆ ಒಳ್ಳೆಯದು ಹೇಳಿದರೂ ಅವರು ಕೇಳುವುದಕ್ಕೆ ಸಿದ್ಧರಿಲ್ಲ. ಹೀಗಾಗಿ ನಮಗೆ ರಕ್ಷಣೆ ಕೊಡಿ. ನಿಮಗೆ ರಕ್ಷಣೆ ಕೊಡಲು ಆಗಲ್ಲ ಅಂದರೆ ನಮ್ಮನ್ನ ಕೋವಿಡ್ ಕೆಲಸದಲ್ಲಿ ಬಳಸಿಕೊಳ್ಳಬೇಡಿ ಎಂದು ಆಶಾ ಕಾರ್ಯಕರ್ತೆಯರು ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಆಗ್ರಹಿಸಿದ್ದಾರೆ. ಆಶಾ ಕಾರ್ಯಕರ್ತೆಯ ಮೇಲೆ ಮತ್ತೊಂದು ಹಲ್ಲೆ ಪ್ರಕರಣ ನಡೆದಿದ್ದು, ಅಂತರ ಕಾಪಾಡಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. …
Read More »ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ
ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಮೃತ …
Read More »ಹೀಗೆ ಹಲ್ಲು ಕಿರಿದು ನಿಂತಿರೋ ಆಸಾಮಿ ಮಾಡಿದ್ದೇನು ಗೊತ್ತೇ..?
ದಾವಣಗೆರೆ: ಲಾಕ್ಡೌನ್ ನಡುವೆಯೂ ದಾವಣಗೆರೆ ಪಾಲಿಕೆ ಮೇಯರ್ ಹುಟ್ಟುಹಬ್ಬವನ್ನು ಆಚರಿಸಿಕೊಂಡು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಅಜಯ್ ಕುಮಾರ್ ಇಂದು ಲಾಕ್ಡೌನ್ ನಡುವೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಮಹಾನಗರ ಪಾಲಿಕೆಯ ಮೇಯರ್ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಲಾಕ್ಡೌನ್ ನಡುವೆಯೂ ಪಾಲಿಕೆ ಅವರಣಕ್ಕೆ ಬಂದಿರುವ ಮೇಯರ್ ಅಜಯ್ ಕುಮಾರ್ ಅಭಿಮಾನಿಗಳು ಹಾಗೂ ಪಾಲಿಕೆ ಸದಸ್ಯರು ಗುಂಪು ಗುಂಪಾಗಿ ಬಂದು ಮೇಯರ್ …
Read More »24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …
Read More »ಕೊರೋನಾ ಭಯ: ಪ್ರವಾಸಿಗರ ವಾಹನ ತಡೆದು ವಾಪಸ್ ಕಳುಹಿಸಿದ ಗ್ರಾಮಸ್ಥರು
ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆಗಾಗಿ 15 ದಿನ ಲಾಕ್ಡೌನ್ಗೆ ಜೆಡಿಎಸ್ ಆಗ್ರಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …
Read More »ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ. 25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ …
Read More »ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.
ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …
Read More »ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …
Read More »ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….
ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …
Read More »
Laxmi News 24×7