Breaking News

Uncategorized

‘ನಟಿ ಕಂಗನಾ ರಣಾವತ್​ ಕಪಾಳ ಮೋಕ್ಷ’ ಮಾಡಿದ CISF ಮಹಿಳಾ ಪೇದೆಗೆ ‘ಚಿನ್ನದ ಉಂಗುರ ಗಿಫ್ಟ್​’

ಚೆನ್ನೈ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರನ್ನು ವಿಮಾನ ನಿಲ್ದಾಣದಲ್ಲಿ ಥಳಿಸಿದ ಸಿಐಎಸ್‌ಎಫ್ ಕಾನ್ಸ್ಟೇಬಲ್ಗೆ ಚಿನ್ನದ ಉಂಗುರವನ್ನು ನೀಡುವುದಾಗಿ ತಮಿಳುನಾಡಿನ ಸಂಸ್ಥೆಯೊಂದು ಘೋಷಿಸಿದೆ. ಕೊಯಮತ್ತೂರಿನ ದ್ರಾವಿಡ ಸಂಘಟನೆಯಾದ ತಂಥೈ ಪೆರಿಯಾರ್ ದ್ರಾವಿಡರ್ ಕಳಗಂ (ಟಿಡಿಪಿಕೆ) ಈ ಘೋಷಣೆ ಮಾಡಿದೆ. ಪೆರಿಯಾರ್ ಅವರ ಚಿತ್ರವಿರುವ ಚಿನ್ನದ ಉಂಗುರವನ್ನು ನೀಡುವುದಾಗಿ ಸಂಸ್ಥೆ ಭರವಸೆ ನೀಡಿದೆ. “ನಾವು ಉಂಗುರವನ್ನು ಕುಲ್ವಿಂದರ್ ಕೌರ್ ಅವರ ಮನೆಯ ವಿಳಾಸಕ್ಕೆ ಕಳುಹಿಸುತ್ತೇವೆ. ಕೊರಿಯರ್ ಸೇವೆಗಳು ಚಿನ್ನದ …

Read More »

3ನೇ ಬಾರಿ ಪ್ರಧಾನಿ ಆಗ್ತಿರೋ ಮೋದಿಗೆ ಅಭಿನಂದನೆ, ನಮ್ಮ ರಾಜ್ಯಕ್ಕೆ ಅನುಕೂಲವಾಗುವ ಖಾತೆ ಸಿಗಲಿ -ಡಾ.ಜಿ.ಪರಮೇಶ್ವರ್

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು 3ನೇ ಬಾರಿ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೂ ನಮ್ಮ ರಾಜ್ಯಕ್ಕೆ ಉತ್ತಮ ಖಾತೆ ಸಿಗಲಿ, ಹೆಚ್ಚು ಸ್ಥಾನ ಸಿಗಲಿ ಎಂದು ಆಶಿಸಿದ್ದಾರೆ. ಬೆಂಗಳೂರು, ಜೂನ್.09: ನರೇಂದ್ರ ಮೋದಿ (Narendra Modi) ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿಗೆ …

Read More »

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು- ಸಂಕಷ್ಟಕ್ಕೆ ಸಿಲುಕಿದ ಅಂಗಡಿ ಮಾಲೀಕರು!

ಅಯೋಧ್ಯೆ: ರಾಮನ ನಾಡು ಅಯೋಧ್ಯೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಗೆಲುವು ಸಾಧಿಸಿದ್ದು, ಬಿಜೆಪಿಗೆ ತೀವ್ರ ಮುಖಭಂಗವನ್ನು ಅನುಭವಿಸಿದೆ. ಆದರೆ, ಬಿಜೆಪಿಯ ಸೋಲು ಅಯೋಧ್ಯೆಯ ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಅಂಗಡಿಯ ಮಾಲೀಕ ಅಹತ್ ಸಾಹು ಮಾತನಾಡಿದ್ದು, ಬಿಜೆಪಿ ಆಡಳಿತವು ಅಯೋಧ್ಯೆ ಮಂದಿರದ ಅಭಿವೃದ್ಧಿಗಾಗಿ ನಮ್ಮ ಅಂಗಡಿಗಳನ್ನು ಸ್ವಾದೀನ ಪಡಿಸಿಕೊಂಡಿತ್ತು. ಆಗ ನಮಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಿತ್ತು. ಆದರೆ, ಮುಂದಿನ …

Read More »

ಮೋದಿ ಸರ್ಕಾರ 15 ದಿನ ಇರುತ್ತೋ.. ಇಲ್ವೋ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೋದಿ ಮೂರನೇ ಬಾರಿಗೆ ಪ್ರಮಾಣ ವಚನಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕೌಂಟರ್ ಕೊಟ್ಟಿದ್ದಾರೆ. ಕೆಲವೊಮ್ಮೆ ಸರ್ಕಾರಗಳು ಒಂದು ದಿನ ಮಾತ್ರ ಇರುತ್ತವೆ. ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳ ಗೆಲುವಿನ ಬಗ್ಗೆ ಮಾತನಾಡುವವರಿಗೆ ಸ್ವಂತವಾಗಿ ಸರಳ ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಏನು ಬೇಕಾದರೂ ಆಗಬಹುದು. ಎನ್‍ಡಿಎ ಸರ್ಕಾರ 15 ದಿನವಾದರೂ ಇರುತ್ತದೋ ಇಲ್ವೋ ಯಾರಿಗೆ ಗೊತ್ತು ಎಂದು ಟಿಎಂಸಿ ನಾಯಕಿ ಮಮತಾ ವ್ಯಂಗ್ಯವಾಡಿದ್ದಾರೆ. ಮೋದಿ …

Read More »

‘ಫಿಟ್‌’ ಆಗಲು ಪೊಲೀಸರ ಕಸರತ್ತು

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಸ್ಥೂಲಕಾಯ ಹೊಂದಿದ್ದ ನೂರು ಪೊಲೀಸರನ್ನು ಸದೃಢರಾನ್ನಾಗಿರುವ ಕಾರ್ಯ ಕಳೆದ 10 ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಬ್ಬರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಇಬ್ಬರು ಎಎಸ್‌ಪಿ, ಮೂವರು ಡಿವೈಎಸ್‌ಪಿ, 15 ಮಂದಿ ಪಿಐ, 45 ಪಿಎಸ್‌ಐಗಳೂ ಸೇರಿದಂತೆ ಒಟ್ಟು 867 ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದಾರೆ. ಇತ್ತೀಚೆಗೆ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಬಿಎಂಐ (ಬಾಡ್‌ ಮಾಸ್‌ ಇಂಡೆಕ್ಸ್‌) ಅಂಕ …

Read More »

ಇಲ್ಲಿದೆ ಮೋದಿ 3.O ಸರ್ಕಾರ ಸೇರ್ಪಡೆಯಾಗುತ್ತಿರುವ ಸಂಭವನೀಯ ಸಚಿವರ ಪಟ್ಟಿ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ ಬಿಜೆಪಿ ಸೇರಿದಂತೆ ಮಿತ್ರ ಪಕ್ಷಗಳ 30 ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕದಿಂದ ಎನ್ ಡಿ ಎ ಮಿತ್ರ ಪಕ್ಷವಾದ ಜೆಡಿಎಸ್ ನಿಂದ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದ್ದು, ಕಳೆದ ಬಾರಿ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಸೇರಿದಂತೆ ಇನ್ನೂ ಮೂವರಿಗೆ ರಾಜ್ಯದಿಂದ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ.   …

Read More »

ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಮಂತ್ರಿಗಿರಿ ಫಿಕ್ಸ್‌ : ಕೃಷಿ ಇಲಾಖೆ ಮೇಲೆ ಕಣ್ಣಿಟ್ಟ ʻHDKʼ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ನೂತನ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದ್ದು, ಅವರು ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮೇಲೆ ಬಿಟ್ಟಿದ್ದೇನೆ. ನನಗೆ ಕೃಷಿಗೆ ಸಂಬಂಧ ಪಟ್ಟಂತೆ ಮೊದಲಿನಿಂದಲೇ ಆಸಕ್ತಿ ಇದೆ. ಮೋದಿ ಅವರು ನನ್ನ ಮೇಲೆ ಮತ್ತು ನನ್ನ ತಂದೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. …

Read More »

5 ನಿಗಮ, ಮಂಡಳಿಗಳ ಸರ್ಕಾರಿ ಹುದ್ದೆಗೆ ನಡೆಸಿದ್ದ ಪರೀಕ್ಷೆಗಳ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಬೆಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್ , ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ, ಪರೀಕ್ಷೆಯ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿ ಬಿಡುಗಡೆ ಮಾಡಲಾಗಿದ್ದು, ಎಕ್ಸಾಂ ಬರೆದವರು ತಮ್ಮ ಅಂಕ ಪಟ್ಟಿಯನ್ನು ನೋಡಬಹುದಾಗಿದೆ. ಸದರಿ ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು …

Read More »

ಸ್ನೇಹಿತನ ಕೊಂದು ತುಂಡರಿಸಿ ಮೋರಿಗೆ ಎಸೆದ!

ಬೆಂಗಳೂರು: ಪತ್ನಿ ಜತೆ ಅಕ್ರಮ ಸಂಬಂಧ ಹಾಗೂ ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನು ಹತ್ಯೆಗೈದು, ಬಳಿಕ ಮೃತದೇಹವನ್ನು ಐದಾರು ತುಂಡುಗಳನ್ನಾಗಿ ಮಾಡಿ ಬಿಸಾಡಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಿನಾಪುರ ನಿವಾಸಿ ಮಾಧವ ರಾವ್‌ (41) ಬಂಧಿತ ಆರೋಪಿ. ಈತ ಮೇ 28ರಂದು ಸ್ನೇಹಿತ ಶ್ರೀನಾಥ್‌ನನ್ನು ಹತ್ಯೆಗೈದು, ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಬೆಳತ್ತೂರು ಬಳಿಯ ಮೋರಿಯಲ್ಲಿ ಎಸೆದು ಪರಾರಿಯಾಗಿದ್ದ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೂಂದೆಡೆ ಸಂಪಿಗೆಹಳ್ಳಿ …

Read More »

ಎಚ್‌ಎಸ್‌ಆರ್‌ಪಿ ನೋಂದಣಿ: ಸಮೀಪಿಸುತ್ತಿದೆ ಗಡುವು

ಶಿವಮೊಗ್ಗ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 55,733 ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್‌ ನಂಬರ್ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಮಾಡಲಾಗಿದೆ. 2019ರ ಏಪ್ರಿಲ್‌ 1ಕ್ಕಿಂತ ಮುಂಚೆ ಖರೀದಿಸಲಾದ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಸಬೇಕಿದೆ. ಬೈಕ್‌, ಕಾರು, ಆಟೋ ಮತ್ತು ಲಾರಿ ಸೇರಿದಂತೆ ಎಲ್ಲ ವಾಹನಗಳಿಗೆ ಅಳವಡಿಸುವುದು ಕಡ್ಡಾಯವಾಗಿದೆ. ಹೀಗಾಗಿಯೇ ವಾಹನ ಸವಾರರು ನಂಬರ್ ಪ್ಲೇಟ್‌ ಬದಲಿ ಮಾಡಿಸುವಲ್ಲಿ ನಿರತರಾಗಿದ್ದಾರೆ. ಆನ್‌ಲೈನ್‌ ಮೂಲಕ ಎಚ್‌ಎಸ್‌ಆರ್‌ಪಿ ನೋಂದಣಿ ಮಾಡಿಸಿ ಶುಲ್ಕ ಕಟ್ಟಿ ವಾಹನ ಉತ್ಪಾದಕ …

Read More »