ತಿರುವನಂತಪುರಂ: ತನ್ನ ಕಣ್ಸನ್ನೆ ಮೂಲಕವೇ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಿಂದ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾರೆ. ಹೌದು ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿರುವ ಪ್ರಿಯಾ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ಇದನ್ನು ಕಂಡ ಅವರ …
Read More »ಲಾಕ್ಡೌನ್ನಿಂದ ಹೆಚ್ಚಾದ ಆರ್ಥಿಕ ಸಮಸ್ಯೆ- ಬೆಂಕಿ ಹಚ್ಚಿಕೊಂಡು 26ರ ಗೃಹಿಣಿ ಆತ್ಮಹತ್ಯೆ
ಹೈದರಾಬಾದ್: ಕೊರೊನಾ ವೈರಸ್ ಎಂಬ ಮಹಾಮಾರಿ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಹೇರಲಾಗಿತ್ತು. ಆದರೆ ಈ ಲಾಕ್ ಡೌನ್ ನಿಂದಾಗಿ ಸ್ವಲ್ಪ ಮಟ್ಟಿಗೆ ಪ್ರಯೋಜನವಾದರೆ ಇನ್ನೂ ಕೆಲವರ ಬದುಕಿನಲ್ಲಿ ಕತ್ತಲು ಕವಿದಂತಾಗಿದೆ. ಹಾಗೆಯೇ ಆರ್ಥಿಕ ಸಮಸ್ಯೆಯನ್ನು ಎದುರಿಸಲಾಗಿದೆ 26 ವರ್ಷದ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಹೈದರಾಬಾದ್ ನ ಪರಿಗಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಆರ್ಥಿಕವಾಗಿ ಸರಳ ಕುಟುಂಬ ಹಿಂದುಳಿದಿತ್ತು. ಇದೀಗ …
Read More »ರೈತ ಮುಖಂಡನ ಸರಳ ವಿವಾಹ – ಜೋಡಿಯಿಂದ ಮದ್ವೆ ಖರ್ಚಿನ ಹಣ ದೇಣಿಗೆ
ಚಾಮರಾಜನಗರ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್ಡೌನ್ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವರ …
Read More »ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖ
ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-298 ಪಿ-418 ಪಿ- 448 ಪಿ-484 ಪಿ-495 ಪಿ-496 ಪಿ-541 ಪಿ-542 ಪಿ-551
Read More »ಧಾರವಾಡದಲ್ಲಿಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣಗಳು…..
ಧಾರವಾಡ: ಕಳೆದ ವಾರದ ಕೊನೆಯವರೆಗೂ ಯಾವುದೇ ಹೊಸ ಕೇಸ್ ಇಲ್ಲದೆ ತಣ್ಣಗಾಗಿದ್ದ ಧಾರವಾಡ ಜಿಲ್ಲೆಯಲ್ಲಿಗ ಕೊರೊನಾ ರಣಕೇಕೆ ಮತ್ತೆ ಶುರುವಾಗಿದ್ದು, ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಇಂದು ದೃಢ ಪಟ್ಟಿರುವ ನಾಲ್ಕು ಪ್ರಕರಣ ಪೈಕಿ ಒಬ್ಬರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿರೋದು ಆಗಿದ್ರೆ, ಉಳಿದ ಮೂರೂ ಸಹ ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿವೆ. ಮುಂಬೈನಿಂದ ಬಂದಿರುವ 39 ವರ್ಷದ ಪುರುಷ (ರೋಗಿ-1123) ಹಾಗೂ 28 ವರ್ಷದ …
Read More »ಮೇ 31ರವರೆಗೂ ಲಾಕ್ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ………..
ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿ ಆತಂಕ ಸೃಷ್ಟಿಸಿದ ಹಿನ್ನೆಲೆ ಮೇ 31ರ ಮಧ್ಯರಾತ್ರಿಯವರೆಗೂ ಲಾಕ್ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವು ಆದೇಶ ಹೊರಡಿಸಿದೆ. ಇತ್ತ ತಮಿಳುನಾಡು, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲೂ ಲಾಕ್ಡೌನ್ ಅನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ. ಮಹಾರಾಷ್ಟ್ರ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಸಾಂಕ್ರಾಮಿಕ ರೋಗ ಕಾಯ್ದೆ 1898ರ ಅಡಿ ಮೇ 17ರ …
Read More »ಆರ್ಥಿಕ ಸಂಕಷ್ಟ – ತಿರುಪತಿ ದೇವಾಲಯದ 500 ಕೋಟಿ ಸ್ಥಿರಾಸ್ತಿ ಮಾರಾಟ?
ಹೈದರಾಬಾದ್: ಕೋವಿಡ್ 19 ಲಾಕ್ಡೌನ್ ನಿಂದ ಸೃಷ್ಟಿಯಾಗಿರುವ ಹಣಕಾಸು ಸಮಸ್ಯೆಯನ್ನು ಪರಿಹಾರ ಮಾಡಲು ತನ್ನ ಕೆಲ ಸ್ಥಿರಾಸ್ತಿಗಳನ್ನು ಮಾರಾಟ ಮಾಡಲು ತಿರುಪತಿ ತಿರುಮಲ ದೇಗುಲ (ಟಿಟಿಡಿ)ದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಹೌದು. ಮಾರ್ಚ್ ಮೂರನೇ ವಾರದಲ್ಲಿ ತಿರುಪತಿ ದೇಗುಲದ ಬಾಗಿಲು ಮುಚ್ಚಿದ್ದು, ಜೂನ್ ತಿಂಗಳಿನಲ್ಲಿ ಬಾಗಿಲು ತೆರೆಯಲು ತೆರೆಯಲು ಅನುಮತಿ ಸಿಗುತ್ತದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ. ಒಂದು ವೇಳೆ ಜೂನ್ ತಿಂಗಳಿನಲ್ಲೂ ದೇವಾಲಯದ ಬಾಗಿಲು ತೆರೆಯದಿದ್ದರೆ ಭಕ್ತರು ದೇಣಿಗೆ …
Read More »ಸೋಮವಾರದಿಂದ ಕೆಲಸಕ್ಕೆ ಹಾಜರಾಗಿ- ಬಿಎಂಟಿಸಿಯಿಂದ ನೌಕರರಿಗೆ ಸೂಚನೆ…
ಬೆಂಗಳೂರು: ಸೋಮವಾರದಿಂದ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿಯಿಂದ ನೌಕರರಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ ಬಸ್ ಸಂಚಾರ ಇರುತ್ತದೆ ಎಂದು ತಿಳಿಸಲಾಗಿದ್ದು, ಈ ಮೂಲಕ ಸೋಮವಾರದಿಂದ ಬಿಎಂಟಿಸಿ ಸಂಚಾರ ಆರಂಭವಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನೌಕರರಿಗೆ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಶಾಂತಿನಗರ ಸಾರಿಗೆ ಘಟಕ, ಶಾಂತಿ ನಗರ ಬಿಎಂಟಿಸಿ ಆಸ್ಪತ್ರೆ, ಯಶವಂತಪುರ ಬಿಎಂಟಿಸಿ ಘಟಕ, ಕೆಂಗೇರಿ ಟಿಟಿಎಂಸಿ ಹಾಗೂ ಹೆಣ್ಣೂರು ಘಟಕಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಶುಕ್ರವಾರ ಸುತ್ತೋಲೆ …
Read More »SSLC ಪರೀಕ್ಷೆ ದಿನಾಂಕ ಸೋಮವಾರ ನಿಗದಿ ಸಾಧ್ಯತೆ……..
ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನು ನಿಗದಿಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೆ ನಮ್ಮ ನಾಡಿನ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹೆಮ್ಮಾರಿಯಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು ಅಂತಾ ಚರ್ಚೆ ನಡೆಸುತ್ತಿದ್ದೇವೆ. ನಾಳೆ ಶಿಕ್ಷಕರ ಮತ್ತು ಪದವೀದರ ಕ್ಷೇತ್ರದ ಪರಿಷತ್ ಸದಸ್ಯರ ಜೊತೆ …
Read More »ಜೂನ್ 5ರಿಂದ ಈ ಬಾರಿ ಮಳೆಗಾಲ ಶುರು
ನವದೆಹಲಿ: ಈ ಬಾರಿಯ ನೈರುತ್ಯ ಮಾನ್ಸೂನ್ ಮಾರುತಗಳ ಆಗಮನ ವಿಳಂಬವಾಗಲಿದೆ ಎಂದು ಕೇಂದ್ರ ಹವಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಆರಂಭಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಐಎಂಡಿ, ಜೂನ್ 1 ರ ಬದಲು 5ರಂದು ಮಾನ್ಸೂನ್ ಮಾರುತಗಳು ಕೇರಳ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮಾನ್ಸೂನ್ ಆರಂಭ ನಾಲ್ಕು ದಿನ ವಿಳಂಬವಾಗಲಿದೆ ಎಂದು ಅಂದಾಜಿಸಿದೆ. ಕಳೆದ ವರ್ಷವೂ ಜೂನ್ 6ರಂದು ದೇಶದಲ್ಲಿ ಮಾನ್ಸೂನ್ ಆರಂಭವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ …
Read More »