ಶ್ರೀನಗರ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದಿದೆ. ಸೋಮವಾರ ನಸುಕಿನಜಾವ 3:30ರ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಹಾಗೂ ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದೆ. ಪಾಕಿಸ್ತಾನವು ಮತ್ತೆ ಬೆಳಗ್ಗೆ 5:30ರ ಸುಮಾರಿಗೆ ನೌಶೇರಾ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತು. ಇದಕ್ಕೆ ಭಾರತೀಯ ಸೇನೆಯು ಸರಿಯಾದ ಪ್ರತ್ಯುತ್ತರ ನೀಡಿದೆ. ಭಯೋತ್ಪಾದಕರು ಭಾರತಕ್ಕೆ ಪ್ರವೇಶಿಸಲು ಪಾಕಿಸ್ತಾನವು …
Read More »ಕೆಮ್ಮಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊರೊನಾ ಇದೆ ಎಂದು ರೈತ ತಮಾಷೆ- ಮಾರುಕಟ್ಟೆ ಅಲ್ಲೋಲ ಕಲ್ಲೋಲ……
ಚಾಮರಾಜನಗರ: ರೈತರೊಬ್ಬರು ರೇಷ್ಮೆ ಮಾರುಕಟ್ಟೆಯಲ್ಲಿ ಕೆಮ್ಮಿದ್ದು, ಪ್ರಶ್ನಿಸಿದ್ದಕ್ಕೆ ಕೊರೊನಾ ಇದೆ ಎಂದು ತಮಾಷೆ ಮಾಡಿದ್ದಾರೆ. ಇಷ್ಟಕ್ಕೆ ಮಾರುಕಟ್ಟೆಯಲ್ಲಿ ರಾದ್ಧಾಂತ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲದ ಮುಡಿಗುಂಡ ಬಳಿ ಘಟನೆ ನಡೆದಿದ್ದು, ಪದೇ ಪದೇ ಕೆಮ್ಮಿದ್ದರಿಂದ ಆತಂಕಗೊಂಡು ಅಕ್ಕಪಕ್ಕದವರು ವಿಚಾರಿಸಿದ್ದಾರೆ. ಈ ವೇಳೆ ತನಗೆ ಕೊರೊನಾ ಇದೆ ಎಂದು ರೈತ ತಮಾಷೆಗೆ ಹೇಳಿದ್ದಾರೆ. ಇದರಿಂದ ಬೆಚ್ಚಿಬಿದ್ದ ರೇಷ್ಮೆಗೂಡಿನ ಮಾರುಕಟ್ಟೆ ವ್ಯಾಪಾರಿಗಳು, ತೀವ್ರ ಆತಂಕಗೊಂಡಿದ್ದು, ತಕ್ಷಣವೇ ರೇಷ್ಮೆ ರೀಲರ್ಸ್ ಗಳು ತಹಸೀಲ್ದಾರ್ಗೆ ದೂರು ನೀಡಿದ್ದಾರೆ. …
Read More »ಮದುವೆ ಮನೆ ಅಡುಗೆ ಭಟ್ಟನಿಗೆ ಕೊರೊನಾ ದೃಢಪಟ್ಟ ,ಹಿನ್ನೆಲೆಯಲ್ಲಿ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್
ತುಮಕೂರು: ದಿನೇ ದಿನೇ ಕೊರೊನಾ ತನ್ನ ಅಟ್ಟಹಾಸ ಮಿತಿಮೀರುತ್ತಿದೆ. ಮದುವೆ ಮನೆ ಅಡುಗೆ ಭಟ್ಟನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮದುವೆಗೆ ಬಂದವರೆಲ್ಲಾ ಕ್ವಾರಂಟೈನ್ ಆಗಿದ್ದಾರೆ. ಬೆಳಗ್ಗೆ ತಾನೇ ಮದುವೆ ಮುಗಿಸಿದ ನವಜೋಡಿ ಕೊರೊನಾದಿಂದ ಸಂಜೆ ವೇಳೆಗೆ ಕ್ವಾರಂಟೈನ್ನಲ್ಲಿ ಲಾಕ್ ಆಗಿದ್ದಾರೆ. ಈ ಕೊರೊನಾ ಜಿಲ್ಲೆಯ ಗುಬ್ಬಿಯ ಹೇರೂರಿನ ನವ ಜೋಡಿಯೊಂದು ಕ್ವಾರಂಟೈನ್ ಸೇರುವಂತೆ ಮಾಡಿದೆ. ವಧುವರರಿಗೆ ಕೊರೊನಾ ಬಂದಿಲ್ಲ. ಬದಲಾಗಿ ಮದುವೆ ಮನೆಯಲ್ಲಿ ಅಡುಗೆ ಮಾಡಿದ್ದ ಅಡುಗೆ ಭಟ್ಟನಿಗೆ ಕೊರೊನಾ …
Read More »International Yoga Day: ಬಿಜೆಪಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ………
ಬೆಂಗಳೂರು(ಜೂ.21): ನಗರದ ಮಲ್ಲೇಶ್ವರಂನಲ್ಲಿರುವ ರಾಜ್ಯ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಾಡಲಾಯ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ತಂತ್ರಜ್ಞಾನ, ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ಕೊಡುಗೆಯನ್ನು ಕೊಟ್ಟಿದೆ. …
Read More »ವಿಶ್ವ ಯೋಗ ದಿನದಂದು ಅಪ್ಪನನ್ನು ನೆನೆಸಿಕೊಂಡು ಅಪ್ಪು…………
ಬೆಂಗಳೂರು: ವಿಶ್ವ ಯೋಗದಿನದಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ತಂದೆ ವರನಟ ಡಾ.ರಾಜ್ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಇಂದು ಇಡೀ ವಿಶ್ವದಲ್ಲೇ ಯೋಗದಿನವನ್ನು ಆಚರಿಸಲಾಗುತ್ತಿದೆ. ಕೊರೊನಾ ಸೋಂಕಿನ ತೀವ್ರತೆ ಹೆಚ್ಚಿರುವ ಕಾರಣ ಮನೆಯಲ್ಲೇ ಯೋಗ ಡೇ ಮಾಡುವಂತೆ ಪ್ರಧಾನಿಯವರು ಕೂಡ ಕರೆಕೊಟ್ಟಿದ್ದಾರೆ. ವಿಶ್ವ ಯೋಗದಿನದ ಅಂಗವಾಗಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅಪ್ಪು, ತಂದೆಯನ್ನು ನೆನಪಿಸಿಕೊಂಡಿದ್ದಾರೆ. ಈ ವಿಚಾರವಾಗಿ ತಮ್ಮ ಇನ್ಸ್ಟಾದಲ್ಲಿ ಪೋಸ್ಟ್ ಹಾಕಿರುವ ಅಪ್ಪು, ರಾಜ್ಕುಮಾರ್ ಅವರು ಯೋಗ ಮಾಡುತ್ತಿರುವ …
Read More »ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!!. ಇಂದು ವಿಶ್ವ ಅಪ್ಪಂದಿರ ದಿನ. ??
ಇಂದು ವಿಶ್ವ ಅಪ್ಪಂದಿರ ದಿನ. ?? ಅಪ್ಪನ ಕುರಿತ ಈ ಕವಿತೆ ಕೇಳಿ, ಕಣ್ಣಂಚಿನಲ್ಲಿ ಕಂಬನಿ ಬರದೇ ಇರದು… #ಅಪ್ಪ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಹೆರುವ ವರೆಗೂ ಹೊರುವ ಅಮ್ಮ ಹರೆಯದ ವರೆಗೂ ಹೊರುವ ಅಪ್ಪ ಇಬ್ಬರ ಪ್ರೀತಿ ಸಮಾನಾದರೂ ಅಪ್ಪ ಏಕೋ ಹಿಂದೆಯೇ ಉಳಿದು ಬಿಟ್ಟ!!! ಕುಟುಂಬಕ್ಕಾಗಿ ಸಂಬಳವಿಲ್ಲದೇ ದುಡಿಯುವ ಅಮ್ಮ ದುಡಿದ ಸಂಬಳವೆಲ್ಲ ಕುಟುಂಬಕ್ಕೆ ನೀಡುವ ಅಪ್ಪ ಇಬ್ಬರ ಶ್ರಮ ಸಮಾನಾದರೂ ಅಪ್ಪ ಏಕೋ …
Read More »ರಾಮಲಿಂಗಾರೆಡ್ಡಿಗೆ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೈ ಸದಸ್ಯ ಆಫ ರ್?
ಬೆಂಗಳೂರು. ಜು.07 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿಗೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಇಲ್ಲವೇ, ರಾಜ್ಯಸಭೈ ಸದಸ್ಯ ಸ್ಥಾನ ನೀಡುವಆಫ ರ್?ನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಒಂದು ವೇಳೆ ಉಪ ಮುಖ್ಯಮಂತ್ರಿಯಾಗಲು ಒಪ್ಪದೆ ಇದ್ದರೆ ರಾಜ್ಯಸಭೈಗೆ ನೇಮಕ ಮಾಡುವ ಭರವಸೆಯನ್ನು ಬಿಜೆಪಿ ಕೊಟ್ಟಿದೆ ಎನ್ನಲಾಗ್ತಿದೆ. ಇನ್ನು ರಾಮಲಿಂಗಾರೆಡ್ಡಿ ರಾಜ್ಯಸಭೈಗೆ ಆಯ್ಕೆಯಾದರೆ, ಅವರ ಪುತ್ರಿಯಾದ ಸೌಮ್ಯರೆಡ್ಡಿ ಅವರಿಗೆ ಸಚಿವ …
Read More »ಶೀತಲ್ ಶೆಟ್ಟಿ ನಿರ್ದೇಶಕಿಯಾಗಿ ವಿಂಡೋ ಸೀಟ್ ಚಿತ್ರದ ಫಸ್ಟ್ ಪೋಸ್ಟರ್ ಲುಕ್…………
ಸಿನಿಮಾಗಳಲ್ಲಿ ಒಂದಷ್ಟು ಪಾತ್ರಗಳನ್ನು ನಿರ್ವಹಿಸುತ್ತಲೇ ನಟಿಯಾಗಿ ರೂಪುಗೊಂಡಿದ್ದವರು ಶೀತಲ್ ಶೆಟ್ಟಿ. ಈ ಹಿಂದೆ ಎರಡು ಕಿರುಚಿತ್ರಗಳನ್ನು ನಿರ್ದೇಶನ ಮಾಡೋ ಮೂಲಕ ಅವರು ನಿರ್ದೇಶಕಿಯಾಗುತ್ತ ಗಂಭೀರವಾಗಿ ಹೆಜ್ಜೆಯಿಡುತ್ತಿರುವ ಮುನ್ಸೂಚನೆ ನೀಡಿದ್ದರು. ಇದೀಗ ಯಾವ ಸದ್ದುಗದ್ದಲವೂ ಇಲ್ಲದೆ ಅವರೊಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ವಿಂಡೋ ಸೀಟ್ ಎಂಬ ಆಕರ್ಷಕವಾದ ಈ ಚಿತ್ರದ ಅತ್ಯಾಕರ್ಷಕ ಟೈಟಲ್ ಪೋಸ್ಟರ್ ಇದೀಗ ಲಾಂಚ್ ಆಗಿದೆ. ಇದು ಮಂಜುನಾಥ್ ಗೌಡ (ಜಾಕ್ ಮಂಜು) ನಿರ್ಮಾಣದ ಚಿತ್ರ. ಬಹುಕಾಲದಿಂದಲೂ ಈ …
Read More »ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಜೇವರ್ಗಿ: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ಬಡಿಗೇರ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಿರೋಧವಾಗಿ ಕಾನೂನು ಜಾರಿಗೆ ತಂದಿರುವುದು ಅತ್ಯಂತ ಖಂಡನೀಯ. ಕಾರ್ಖಾನೆಗಳ ನೆಪದಲ್ಲಿ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ. ಕೂಡಲೇ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು. …
Read More »ಸೂರ್ಯ ಗ್ರಹಣ ವೀಕ್ಷಣೆಗೆ ಕೊರೊನಾ ಅಡ್ಡಿ- ನೆಹರೂ ತಾರಾಲಯದಲ್ಲಿ ಸಾರ್ವಜನಿಕ ವೀಕ್ಷಣೆ ಇಲ್
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ನೆಹರೂ ತಾರಾಯದಿಂದ ಬ್ಯಾಡ್ ನ್ಯೂಸ್ ಹೊರ ಬಿದ್ದಿದ್ದು, ಈ ವರ್ಷದ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ಭಾರತದಲ್ಲಿ ಗೋಚರಿಸುವ ಈ ವರ್ಷದ ಕಡೆಯ ಕಂಕಣ ಸೂರ್ಯಗ್ರಹಣ, ಜೂನ್ 21ರಂದು ಸಂಭವಿಸಲಿದೆ. ಆದರೆ ಕೊರೊನಾ ಆಘಾತದ ಹಿನ್ನೆಲೆ ನೆಹರೂ ತಾರಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡುತ್ತಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ವೀಕ್ಷಣೆಗೆ ತಡೆ ನೀಡಿದೆ. ಸೂರ್ಯ ಗ್ರಹಣ ವೀಕ್ಷಣೆಗೆ ನೆಹರೂ ತಾರಾಲಯಕ್ಕೆ ಸಾವಿರಾರು …
Read More »
Laxmi News 24×7