Breaking News

Uncategorized

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು.

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಇಂದು ಬರೋಬ್ಬರಿ 15 ಜನರಲ್ಲಿ ಸೋಂಕು ದೃಢವಾಗಿದೆ. ಧಾರವಾಡದಲ್ಲಿ 9, ಹಾಸನ …

Read More »

ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ:ಶಾಸಕ ಗೌರಿಶಂಕರ

ತುಮಕೂರು: ದೇಶಾದ್ಯಂತ ಕೊರೊನಾ ವಾರಿಯರ್ಸ್‌ಗೆ ಅನೇಕ ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಮಕೂರು ಗ್ರಾಮಾಂತರದ ಕೊರೊನಾ ವಾರಿಯರ್ಸ್‌ಗೆ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಗಿದೆ. ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ ಸಲ್ಲಿಸಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನೆರವೇರಿದೆ. ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೂ ತೆರಳಿ ಕೊರೊನಾ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅಂತವರ ಸೇವೆಯನ್ನು …

Read More »

ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..

ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …

Read More »

ಇದ್ದಕ್ಕಿದ್ದಂತೆ ಯಾದಗಿರಿಯಲ್ಲಿ ಲಾಕ್‍ಡೌನ್ ಬಿಗಿ………..

ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ …

Read More »

ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಲೆಬೆನ್ನೂರು ಪುರಸಭೆಯ ಕಾಂಗ್ರೆಸ್ ಸದಸ್ಯ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬಡವರಿಗೆ …

Read More »

ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್​​ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ

ಚೆನ್ನೈ: ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್​​ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ‘ನಿವಾರಣ್-90’ ಎಂಬ ಕೆಮ್ಮು ಮತ್ತು ಶೀತದ ಔಷಧಿ ಕಂಪನಿಯ ಅಧಿಕಾರಿ ಶಿವನೇಸನ್(47) ಮೃತ ವ್ಯಕ್ತಿ. ಕೊರೊನಾ ಮಹಾಮಾರಿಗೆ ಔಷಧಿ ಕಂಡುಹಿಡಿಯಲು ದೇಶ-ವಿದೇಶಗಳಲ್ಲಿ ಸಂಶೋಧಕರು ಪೈಪೋಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲೂ ಕೂಡ ಔಷಧಿಗಾಗಿ ಸರ್ಕಾರಿ ಪ್ರಯೋಗಾಲಯಗಳು ಮಾತ್ರವಲ್ಲದೆ ಖಾಸಗಿ ಸಂಸ್ಥೆಗಳಲ್ಲೂ ತೀವ್ರ ಗತಿಯಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಕೆಮ್ಮು ಮತ್ತು ಶೀತಕ್ಕೆ ಇನ್ಸ್​​ಟೆಂಟ್​​ ಔಷಧಿ …

Read More »

ಮಲಗಿದ್ದ ಮಗುವನ್ನ ಹೊತ್ತೊಯ್ದು ತಿಂದ ಚಿರತೆ – ಅರ್ಧ ದೇಹ ಪತ್ತೆ

ರಾಮನಗರ: ಪೋಷಕರ ಬಳಿ ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಅರ್ಧ ಚಿಂದು ಸಾಯಿಸಿರುವ ಅಮಾನವೀಯ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ನಡೆದಿದೆ. ಮೂರು ವರ್ಷದ ಹೇಮಂತ್‍ನನ್ನು ಚಿರತೆ ತಿಂದು ಸಾಯಿಸಿದೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಪತ್ತೆಯಾಗಿದೆ. ಮೃತ …

Read More »

4 ದಿನದಲ್ಲೇ 10 ಸಾವಿರ ಮಂದಿಗೆ ಕೊರೊನಾ………….

ನವದೆಹಲಿ: ದೇಶದಲ್ಲಿ ಮತ್ತೆ ಕಠಿಣ ಲಾಕ್‍ಡೌನ್ ಜಾರಿಯಾಗುತ್ತಾ? ಲಾಕ್‍ಡೌನ್ ಸಡಿಲದ ಬಳಿಕ ಕೊರೊನಾ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಎದ್ದಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೊರೋನಾ ಸೋಂಕಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಏಮ್ಸ್ ವೈದ್ಯ, ಕೊರೋನಾ ಟಾಸ್ಕ್ ಫೋರ್ಸ್‍ನ ಪ್ರಮುಖ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ರೆಡ್ ಝೋನ್, ಹಾಟ್‍ಸ್ಪಾಟ್‍ಗಳ ಕಡೆ ಹೆಚ್ಚು ಗಮನ ನೀಡಬೇಕು. ಇಟಲಿ, ಅಮೆರಿಕದಂತೆ ಆಗಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ …

Read More »

ವಿಷ ಹಾಕಿ ಮೀನುಗಳ ಮಾರಣ ಹೋಮ- ಇಬ್ಬರ ಬಂಧನ………..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಫಲ್ಗುಣಿ ನದಿಗೆ ವಿಷ ಹಾಕಿ ಸಾವಿರಾರು ಮೀನುಗಳ ಮಾರಣ ಹೋಮ ಮಾಡಿದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂಡುಕೋಡಿಯ ಇರ್ಷಾದ್ ಹಾಗೂ ಮಹಮ್ಮದ್ ಹನೀಫ್ ಬಂಧಿತ ಆರೋಪಿಗಳು. ಕಿಡಿಗೇಡಿಗಳು ನದಿಗೆ ವಿಷ ಹಾಕಿದ ಪರಿಣಾಮ ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದು, ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ …

Read More »

ಮದ್ಯದಂಗಡಿಗಳ ಮೇಲೆ ಕಲ್ಲೆಸೆದು ಅಂಗಡಿ ಬಂದ್ ಮಾಡಿಸಿದ ಮಹಿಳೆಯರು

ಹಾವೇರಿ: ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮದ್ಯದ ಅಂಗಡಿಗಳ ಆರಂಭದ ದಿನವೇ ಮಹಿಳೆಯರು ಕಲ್ಲೆಸೆದು ಮದ್ಯದ ಅಂಗಡಿಗಳನ್ನ ಬಂದ್ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇ 4ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಒಂದು ಎಂಎಸ್‍ಐಎಲ್ ಮತ್ತು ಎರಡು ಎಂಆರ್‌ಪಿ ಮದ್ಯದ ಅಂಗಡಿಗಳಿಗೆ ಕಲ್ಲೆಸೆದು ಕೆಲಕಾಲ ಅಂಗಡಿಗಳನ್ನ ಬಂದ್ ಮಾಡಿಸಿದ್ದರು. ಲಾಕ್‍ಡೌನ್ ವೇಳೆಯಲ್ಲಿ ಮದ್ಯದ ಅಂಗಡಿಗಳು ಬಂದ್ ಆಗಿದ್ದರಿಂದ ಪುರುಷರು ಮನೆಯಲ್ಲಿ ಸುಮ್ಮನಿದ್ದರು. ಆದರೆ ಈಗ ಮದ್ಯದ …

Read More »