ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ಆದಿಶಕ್ತಿ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಕೊಣ್ಣೂರ ಪಟ್ಟಣದಲ್ಲಿ 5 ವರ್ಷಕ್ಕೊಮ್ಮೆ ಅದ್ದೂರಿಯಾಗಿ ನಡೆಯುವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ವಾದ್ಯಮೇಳು ಗಳು ಜನತೆಯ ಗಮನ ಸೆಳೆದವು. ಊರಿನ ಹಿರಿಯರು ಯುವಕರು ಸೇರಿ ಯುವ ನಾಯಕರಾದ ಸಂತೋಷ್ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು. …
Read More »ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ. ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾ ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, …
Read More »ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ‘ಡಿಕೆ ಬ್ರದರ್ಸ್;ಸಿಪಿ ಯೋಗೇಶ್ವರ್
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆ ನೋಡಿದರೆ ದರ್ಶನ್ ಅವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ ಎಂಬ ಅನುಮಾನಗಳು ಈಗ ದಟ್ಟವಾಗಿವೆ. ಹೌದು ಈ ಹಿಂದೆ ಮಾಜಿ ಸಂಸದ ಡಿಕೆ ಸುರೇಶ ರವರು ಚನ್ನಪಟ್ಟಣ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ …
Read More »ಕೇಂದ್ರ ವಿಮಾನಯಾನ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡ ರಾಮ್ ಮೋಹನ್ ನಾಯ್ಡು.. 21 ಬಾರಿ ರಾಮನಾಮ ಬರದ ನಂತರ ಅಧಿಕಾರ ಸ್ವೀಕರಿಸಿದ್ದಾರೆ.
ನವದೆಹಲಿ : ಓಂ ಶ್ರೀ ರಾಮ್.. ಓಂ ಶ್ರೀ ರಾಮ್.. ಓಂ ಶ್ರೀ ರಾಮ್.. ಹೀಗೆ ರಾಮನಾಮ ಬರೆದಿದ್ದು ಕೇಂದ್ರ ಮಂತ್ರಿ ರಾಮ್ ಮೋಹನ ನಾಯ್ಡು ಕಿಂಜರಪು. ಕೇಂದ್ರ ವಿಮಾನಯಾನ ಸಚಿವರಾಗಿ ಇಂದು ಅಧಿಕಾರ ವಹಿಸಿಕೊಂಡ ರಾಮ್ ಮೋಹನ್ ನಾಯ್ಡು.. 21 ಬಾರಿ ರಾಮನಾಮ ಬರದ ನಂತರ ಅಧಿಕಾರ ಸ್ವೀಕರಿಸಿದ್ದಾರೆ. ತಾಯಿಯ ಆದೇಶ ಪಾಲಿಸಿರುವ ಸಚಿವ ನಾಯ್ಡು ಅಧಿಕಾರ ಸ್ವೀಕರಿಸುವ ಮುನ್ನ ರಾಮನಾಮ ಬರೆದು ಭಕ್ತಿ …
Read More »ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಪೂರ್ಣ
ಬೆಂಗಳೂರು, ಜೂನ್ 13: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳದಿ ಲೈನ್ (RV ರಸ್ತೆ – ಬೊಮ್ಮಸಂದ್ರ) ಉದ್ದಕ್ಕೂ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ವರೆಗಿನ 3.3 ಕಿಮೀ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಹಲವಾರು ವಿಳಂಬಗಳ ನಂತರ ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಅಂತಿಮವಾಗಿ ಸಿದ್ಧವಾಗಿದೆ. ಜೂನ್ 15 ರಿಂದ ರಾಗಿಗುಡ್ಡದಿಂದ ಸಿಎಸ್ಬಿವರೆಗಿನ ಮೇಲ್ಸೇತುವೆಯಲ್ಲಿ ಅಧಿಕಾರಿಗಳ ಅಂತಿಮ ಪರಿಶೀಲನೆಯ ನಂತರ ವಾಹನಗಳನ್ನು …
Read More »ಬಗೆದಷ್ಟು ಬಯಲಾಗುತ್ತಿದೆ ದರ್ಶನ್ ಕರ್ಮಕಾಂಡ
ನಟ ದರ್ಶನ್ ರ ಕರ್ಮಕಾಂಡಗಳು ಬಗೆದಷ್ಟು ಬಯಲಾಗುತ್ತಿದೆ. ಹೊರಗಿನವರಿಗೆ ಮಾತ್ರವಲ್ಲ ಸ್ವತಃದವರಿಗೂ ದರ್ಶನ್ ವಿಲನ್ ಆಗಿಯೇ ಇದ್ದರು ಅನ್ನೋದು ಇದೀಗ ಬಯಲಾಗಿದೆ. ಸ್ವತಃ ತಾನು ಹುಟ್ಟಿದ ತಾಯಿಯ ತವರು ಮನೆಯಲ್ಲೇ ನೆಲಸಮಗೊಳಿಸಿ ತಮ್ಮ ಸೋದರ ಮಾವನವರನ್ನು ಬೀದಿಪಾಲು ಮಾಡಿದ ಪೈಶಾಚಿಕ ಕೃತ್ಯ ಕೊಡಗಿನಲ್ಲಿ ನಡೆದಿದ್ದು, ಈ ಬಗ್ಗೆ ಸ್ವತಃ ಅವರ ಸೋದರ ಮಾವ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಹುಟ್ಟೂರು ತನ್ನ ತಾಯಿಯ ತವರು ಮನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ. ನಟ …
Read More »ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಜನತಾದರ್ಶನ’ಕ್ಕೆ ಮರು ಚಾಲನೆ
ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ …
Read More »ನಕಲಿ ಕಾರ್ಡ್ ರದ್ದು? ಅರ್ಹ ಬಿಪಿಎಲ್ ಅರ್ಜಿದಾರರಿಗೆ ಅವಕಾಶ
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್ ರೇಶನ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದು ಗೊಳ್ಳುವ ಕಾರ್ಡ್ಗಳ ಬದಲಿಗೆ ಬಿಪಿಎಲ್ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ …
Read More »ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ
ಚೆನ್ನೈ: ಖ್ಯಾತ ನಟರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕಾಲಿವುಡ್ ನಟ ಪ್ರದೀಪ್ ವಿಜಯನ್ ಬುಧವಾರ (ಜೂನ್ 12 ರಂದು) ಚೆನ್ನೈನ ಪಲವಕ್ಕಂನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಟನ ಸ್ನೇಹಿತ ಕಳೆದ ಎರಡು ದಿನಗಳಿಂದ ಪ್ರದೀಪ್ ವಿಜಯನ್ ಅವರಿಗೆ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಕರೆಯನ್ನು ರಿಸೀವ್ ಮಾಡದ ಕಾರಣ ಒಬ್ಬ ಸ್ನೇಹಿತ ಮನೆಗೆ ಹೋಗಿ ನೋಡಿದಾಗ ಪ್ರದೀಪ್ ಶವವಾಗಿ ಪತ್ತೆಯಾಗಿದ್ದಾರೆ. ಆ ಬಳಿಕ …
Read More »ಬಸವನಾಡಲ್ಲಿ ಭರ್ಜರಿ ಮುಂಗಾರು ಬಿತ್ತನೆ: ನಿರೀಕ್ಷೆ ಮೀರಿದ ಉತ್ತಮ ಮಳೆ
ವಿಜಯಪುರ: ಕಳೆದ ವರ್ಷದ ಭೀಕರ ಬರದಿಂದ ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರಿಗೆ ಈ ಬಾರಿಯ ಮುಂಗಾರು ಭಾರಿ ಆಶಾಭಾವ ಮೂಡಿಸಿದ್ದು, ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅನ್ನದಾತರಿಂದ ಬಿತ್ತನೆ ಕಾರ್ಯವೂ ಭರದಿಂದ ಸಾಗಿದೆ. ಜೂನ್ 1 ರಿಂದ 11 ವರೆಗೆ 35 ಮಿ.ಮೀ. ಸಾಮಾನ್ಯ ಮಳೆ ಆಗಬೇಕಿದ್ದರೂ 180 ಮಿ.ಮೀ. ಮಳೆ ಸುರಿದಿದ್ದು, ಭೂಮಿ ಉತ್ತಮ ಹದಗೊಂಡಿದ್ದು, ಬಿತ್ತನೆ ಕಾರ್ಯ ಚುರುಕು …
Read More »