ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಇನ್ನೂ ದೀರ್ಘಕಾಲ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ …
Read More »ಟ್ಯಾಂಕರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ – ನಾಲ್ವರು ಸಜೀವ ದಹನ, 10 ಮಂದಿಗೆ ಗಾಯ
ಗಾಂಧಿನಗರ: ಟ್ಯಾಂಕರ್ಗೆ ಡಿಕ್ಕಿಯಾಗಿ ಬಸ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಚೋಟಿಲಾ-ರಾಜ್ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ನಡೆದಿದೆ. ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಬಸ್ನಲ್ಲಿ 40 ಪ್ರಯಾಣಿಕರಿದ್ದರು. ಅದರಲ್ಲಿ 4 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಏನನ್ನು ಹೊತ್ತೊಯ್ಯುತ್ತಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಅಪಘಾತ ಎಷ್ಟು ಪ್ರಬಲವಾಗಿತ್ತೆಂದರೆ …
Read More »ಉಪೇಂದ್ರರ ಪ್ರಜಾಕೀಯ ವಿಜಯ್ ಮ್ಯಾಜಿಕ್ ಮಾಡೋಕೆ ಆಗಲ್ಲ. ಇದು ಸತ್ಯ
ತಮಿಳುನಾಡಿನಲ್ಲಿ ವಿಜಯ್ ಗೆಲುವು ದಾಖಲಾಗಿದೆ. ಹಿಸ್ಟರಿ ಸೃಷ್ಟಿಯಾಗಿದೆ. ವಿಜಯ್ ಇನ್ನು ಮುಂದೆ ತಮಿಳುನಾಡು ಮುಖ್ಯಮಂತ್ರಿ. ವಿಜಯ್ ಗೆಲ್ಲುತ್ತಿದ್ದಂತೆಯೇ ಕರ್ನಾಟಕದಲ್ಲಿ ಸೃಷ್ಟಿಯಾದ ಸೋಷಿಯಲ್ ಮೀಡಿಯಾ ಸಂಚಲನವೇನು ಗೊತ್ತೇ.. ಉಪೇಂದ್ರರ ಪ್ರಜಾಕೀಯವೂ ಇದನ್ನು ಮಾಡಬಹುದೇ ಎಂಬ ಪ್ರಶ್ನೆ. ಉಪೇಂದ್ರರ ಪ್ರಜಾಕೀಯ ವಿಜಯ್ ಮ್ಯಾಜಿಕ್ ಮಾಡೋಕೆ ಆಗಲ್ಲ. ಇದು ಸತ್ಯ. ಅದಕ್ಕೆ ಕಾರಣಗಳೂ ಇವೆ. ಮೊದಲನೆಯದು ಉಪೇಂದ್ರ ಜನರ ನಡುವೆ ಹೋಗುವುದಿಲ್ಲ. ಹೋಗುವ ಸೂಚನೆಯೂ ಇಲ್ಲ. ವಿಜಯ್ ಅವರು ಟಿವಿಕೆ ಸ್ಥಾಪನೆ ಮಾಡಿ, ಸೋಷಿಯಲ್ …
Read More »ಹಿಜಬ್ ಬಗ್ಗೆ ಮಾತಾಡೋರು, ನೀಟ್ ಬಗ್ಗೆ ಮಾತಾಡಲಿ – 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ, ಉತ್ತರಿಸ್ತೀನಿ: ಮಧು ಬಂಗಾರಪ್ಪ
ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ, 25 ಲಕ್ಷ ಮಕ್ಕಳ ಕಾಲಡಿಗೆ ನುಸುಳಿ ಬರಲಿ ಆಗ ಈ ಆದೇಶದ ಬಗ್ಗೆ ಉತ್ತರಿಸ್ತಿನಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ ಹೊರಹಾಕಿದ್ದಾರೆ. ಹಿಜಬ್ಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ ಕೊಟ್ಟಿದ್ದನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಂಡು ಅಲ್ಪಸಂಖ್ಯಾತರ ಓಲೈಸಲು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಿಜಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು …
Read More »ಬೆಳಗಾವಿಯಲ್ಲಿ 3 ದಿನಗಳ ಮಾವು, ಅರಣ್ಯೋತ್ಪನ್ನ ಮತ್ತು ಪಾರಂಪರಿಕ ಆಹಾರ ಮೇಳ
ಬೆಳಗಾವಿ: ದಕ್ಷಿಣ ಕೊಂಕಣ ಎಜುಕೇಶನ್ ಸೊಸೈಟಿ ವತಿಯಿಂದ, ಲೋಕಮಾನ್ಯ ಮಲ್ಟಿಪರ್ಪಸ್ ಕೋ-ಆಪ್ ಸೊಸೈಟಿಯ ಸಹಯೋಗದಲ್ಲಿ ಮಾವು, ಅರಣ್ಯೋತ್ಪನ್ನ ಮತ್ತು ಪಾರಂಪರಿಕ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಮೇ 15ರಿಂದ 17ರವರೆಗೆ ಬೆಳಗಾವಿಯ ಜಿಎಸ್ಎಸ್/ಆರ್ಪಿಡಿ ಕಾಲೇಜು ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವವು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಸ್ಥಳೀಯ ಮಾವಿನ ಹಣ್ಣುಗಳ ವಿವಿಧ ತಳಿಗಳು, ಅರಣ್ಯದಲ್ಲಿ ದೊರೆಯುವ ಋತುಮಾನಿಕ ಹಣ್ಣುಗಳು, ಸಸ್ಯಗಳು, …
Read More »ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿ : ಮೃಣಾಲ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಣಕುಂಡೆ ಗ್ರಾಮದೊಳಗಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು 71 ಲಕ್ಷ ರೂ,ಗಳ ಅನುದಾನದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮೃಣಾಲ ಹೆಬ್ಬಾಳಕರ್ ಗುತ್ತಿಗೆದಾರರಿಗೆ …
Read More »ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ ಮಂಡಿಸುವಂತೆ ಕನ್ನಡಪರ ಸಂಘಟನೆ ಕಾರ್ಯಕರ್ತರ ಆಗ್ರಹ: ಮಹಾನಗರ ಪಾಲಿಕೆ ಮುಂದೆ ಹೈಡ್ರಾಮಾ
ಬೆಳಗಾವಿ ಕರ್ನಾಟಕದ ವಿಭಾಜ್ಯ ಅಂಗ ಎಂದು ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಗೊತ್ತವಳಿ ಅಂಗೀಕಾರ ಮಾಡಬೇಕು ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದು, ಇಂದು ಪಾಲಿಕೆ ಮಹತ್ವದ ಸಭೆ ಹಿನ್ನೆಲೆ ಪೊಲೀಸ ಬಂದೋಬಸ್ತ್ ನಿಯೋಜಿಸಲಾಗಿದೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾನಗರ ಪಾಲಿಕೆಯಲ್ಲಿ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಇನ್ನೊಂದು ಕಡೆ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಎಂಇಎಸ್ ವಿರೋಧಿಸಿದೆ. ಹೀಗಾಗಿ ಪಾಲಿಕೆ ಸಭೆಯತ್ತ ಕುತೂಹಲ ಹೆಚ್ಚಿದೆ. ಕರ್ನಾಟಕದ …
Read More »ಬೆಳಗಾವಿಗೆ ಮೂರು ಹೋಸ ಎಕ್ಸ್ಪ್ರೆಸ್ ರೈಲುಗಳ ಆರಂಭ
ದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್, ಸಿಕಂದರಾಬಾದ್ ಮತ್ತು ಚರ್ಲಪಲ್ಲಿಯನ್ನು ಬೆಳಗಾವಿಯೊಂದಿಗೆ ಸಂಪರ್ಕಿಸುವ ಮೂರು ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ. ಇದು ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕವನ್ನು ವೃದ್ಧಿಸಲಿದೆ. ಪರಿಚಯಿಸಲಾದ ರೈಲುಗಳ ವಿವರ ಹೀಗಿದೆ ರೈಲು ಸಂಖ್ಯೆ 17071/17072 ಹೈದರಾಬಾದ್–ಬೆಳಗಾವಿ–ಹೈದರಾಬಾದ್ ಸಾಪ್ತಹಿಕ ಎಕ್ಸ್ಪ್ರೆಸ್ ರೈಲು ಸಂಖ್ಯೆ 17073/17074 ಸಿಕಂದರಾಬಾದ್–ಬೆಳಗಾವಿ–ಸಿಕಂದರಾಬಾದ್ ಸಾಪ್ತಹಿಕ ಎಕ್ಸ್ಪ್ರೆಸ್ ರೈಲು ಸಂಖ್ಯೆ 17075/17076 ಚರ್ಲಪಲ್ಲಿ–ಬೆಳಗಾವಿ–ಚರ್ಲಪಲ್ಲಿ ಸಾಪ್ತಹಿಕ ಎಕ್ಸ್ಪ್ರೆಸ್ ರೈಲುಗಳು ಸಂಚರಿಸಲಿವೆ. …
Read More »ಸಿಸಿಬಿ ಪೊಲೀಸರ ದಾಳಿ: 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುವ ವೇಳೆ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೈಯ್ಯದ ನಿಸಾರ ತಂದೆ ಸೈಯ್ಯದ ಇಸಾಕ (40) ಬಂದಿತ ಆರೋಪಿ ಆರೋಪಿ ನಂ.2 ಗಜಾನನ, ಎಂಬಾತನಿಗೆ ಮಾರಾಟ ಮಾಡಲು ಬಂದಾಗ ಸಿಸಿಬಿ ವಿಭಾಗ ಪಿಐ. ಮಂಜುನಾಥ ನಾಯಕ, ಪಿಎಸ್ಐ ಮಂಜುನಾಥ ಭಜಂತ್ರಿ …
Read More »ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು
ಬೆಳಗಾವಿ: ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು. ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ …
Read More »
Laxmi News 24×7