ವಿಜಯಪುರ, (ಜ. 06) ಇದು ನಾಲ್ಕಾರು ವರ್ಷದ ರೋಷ ಜ್ವಾಲಾಗ್ನಿಯಾಗಿ ಸ್ಪೋಟಗೊಂಡ ಕೊಲೆಯಲ್ಲಿ ಅಂತ್ಯವಾದ ಕಥೆ ಇದು. ಹಿರಿಯರು ಕರೆದು ಬುದ್ದಿ ಹೇಳಿದರೂ ಸುಧಾರಿಸದ ಇಬ್ಬರು ರಾತ್ರೋ ರಾತ್ರಿ ಹೆಣವಾಗಿ ಹೋಗಿದ್ದಾರೆ. ಇಲ್ಲಿ ಸಂಬಂಧಕ್ಕಿಂತ ಆಸೆಗಳೇ ಮುಖ್ಯವಾದ ಕಾರಣ ಇಬ್ಬರೂ ಹೆಣವಾಗಿದ್ದಾರೆ. ಹೀಗೆ ಭೀಕರವಾಗಿ ಹೊಲದಲ್ಲಿ ಹೆಣವಾಗಿ ಬಿದ್ದವರು ಅಕ್ಕಪಕ್ಕದ ಬಿದ್ದವರು ಅಕ್ಕಪಕ್ಕದ ತೋಟದ ಮನೆಯವರು. ಮೇಲಾಗಿ ವರಸೆಯಲ್ಲಿ ಅತ್ತಿಗೆ-ಮೈದುನ. ಮಾಡಬಾರದ ಕೆಲಸ ಮಾಡಿ ಹೀಗೆ ಹೊಲದಲ್ಲಿ ಹೆಣವಾಗಿ ಬಿದ್ದಿದ್ದಾರೆ. ಈ …
Read More »ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ.
ಹೈದರಾಬಾದ್: ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ. ಸ್ಮಾರ್ಟ್ ಫೋನ್ ಇಲ್ಲದೆ ಆನ್ಲೈನ್ ಶಿಕ್ಷಣ ಪಡೆಯಲು ಮಕ್ಕಳಿಗೆ ಕಷ್ಟವಾಗುತ್ತಿದೆ, ಎಂಬ ಸುದ್ದಿಯನ್ನು ತಿಳಿದ ಸೋನು ಸೂದ್ ತಕ್ಷಣ ನೂರು ಮೊಬೈಲ್ ಫೋನ್ಗಳನ್ನು ಆರ್ಡರ್ ಮಾಡಿದ್ದಾರೆ. ಆಚಾರ್ಯ ಚಿತ್ರತಂಡಲ್ಲಿ ಕೆಲಸ ಮಾಡುತ್ತಿರುವ 100 ಕಾರ್ಮಿಕರಿಗೆ ನೀಡಿದ್ದಾರೆ. ಸೊನು ಸುದ್ ಅವರು ಮೊಬೈಲ್ ತರಿಸಿ ಚಿತ್ರತಂಡದಲ್ಲಿ ಕೆಲಸ ಮಾಡುವ …
Read More »ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ : ಬಿ.ಸಿ.ಪಾಟೀಲ್
ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನೂ ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕಿದೆ, ಸಿಗುತ್ತೆ. …
Read More »ಒಟಿಟಿಯಲ್ಲಿ ರಿಲೀಸ್ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್ ಬಜೆಟ್ ನಿರ್ಮಾಪಕರು
ಬೆಂಗಳೂರು: ಕೋವಿಡ್ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್ವುಡ್ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ. ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್ ಬಜೆಟ್ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 …
Read More »ಕಿಚ್ಚ ಸುದೀಪ್ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್
ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬವಾಗಿದ್ದು, ಕಿಚ್ಚ ಸುದೀಪ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಲ್ಲಿ ಹೇಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಶುಭ ಕೋರಿದ್ದಾರೆ. ಕವಿ ನಾನಲ್ಲ, ಕವಿತೆಯಂತೂ ನನಗೆ ಗೊತ್ತಿಲ್ಲ. ಕೆಲ ಸಿಂಪಲ್ ವರ್ಡ್ಸ್ ನಳ್ತೀನಿ ಅದರ್ ಮೇಲ್ ನಂಗ್ ಗೊತ್ತಿಲ್ಲ ಎಂದು ಒಂದೇ ಸಾಲಿನ ಕವಿತೆ ಹೇಳಿ. ಬಳಿಕ ಮಡದಿಯೋ, ಗೆಳತಿಯೋ ಏನೆಂದು ಕರೆಯಲಿ ನಿನ್ನ ಎಂದು ಭಾವನಾತ್ಮಕವಾಗಿ ಹೇಳುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …
Read More »ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ : BSY
ಬೆಂಗಳೂರು,ಜ.6- ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಯೋಜನೆಗಳ ಲೋಕಾರ್ಪಣೆ, ವಿಪ್ರ ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು. ಶಂಕರಾಚಾರ್ಯ, ಮಧ್ವಾಚಾರ್ಯ ಸೇರಿದಂತೆ …
Read More »ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ :ಯತ್ನಾಳ
ಬೆಂಗಳೂರು(ಜ.06): ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಸಿದ್ದೇನೆ. ಅಭಿವೃದ್ದಿ ಬಗ್ಗೆ ಮಾತನಾಡಿದರೆ ಅದು ಪಕ್ಷ ವಿರೋಧಿ ಹೇಳಿಕೆ ಹೇಗಾಗುತ್ತೆ? ನಾನೇನು ಮಂತ್ರಿ ಮಾಡಿ ಅಂತ ಯಡಿಯೂರಪ್ಪನವರ ಮನೆಗೆ ಹೋಗಿಲ್ಲ. ಮೂವತ್ತು ವರ್ಷ ನಾನು ರಾಜಕೀಯ ಮಾಡಿದವನು. ಯಾರಿಗೂ ಹೆದರೋ ಮಗ ನಾನಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಗುಡುಗಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧ ತಿರುಗಿ ಬಿದ್ದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿರುದ್ಧವೂ …
Read More »ಮರುಕಳಿಸಿದೆ ನಿರ್ಭಯಾ ಕೇಸ್: ಕಬ್ಬಿಣದ ರಾಡ್ ನೂಕಿಸಿ ಅತ್ಯಾಚಾರ ಎಸಗಿ ಕೊಲೆ!
ಬದೌನ್ (ಉತ್ತರ ಪ್ರದೇಶ): ಕಾಮುಕರ ಅಟ್ಟಹಾಸಕ್ಕೆ, ಕ್ರೌರ್ಯಕ್ಕೆ ಕೊನೆಯೇ ಇಲ್ಲವೇನೋ ಎನ್ನುವಂಥ ಭಯಾನಕ ಘಟನೆಗಳು ಆಗಾಗ್ಗೆ ವರದಿಯಾಗುತ್ತಲೇ ಇದೆ. ಅಂಥದ್ದೇ ಒಂದು ಭಯಾನಕ ಘಟನೆ ಉತ್ತರ ಪ್ರದೇಶ ಬದೌನ್ನಲ್ಲಿ ನಡೆದಿದೆ. ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಗಲ್ಲುಶಿಕ್ಷೆಯಾಗಿದೆ. ಆದರೆ ಅದರ ಬೆನ್ನಲ್ಲೇ ಥೇಟ್ ಇದೇ ಘಟನೆ ನೆನಪಿಸುವ ಅತ್ಯಂತ ಕ್ರೌರ್ಯವಾದ ಅತ್ಯಾಚಾರ ಘಟನೆ ಬದೌನ್ನಲ್ಲಿ ನಡೆದಿದೆ. 50 ವರ್ಷದ ಮಹಿಳೆಯೊಬ್ಬರ ಗುಪ್ತಾಂಗಕ್ಕೆ ರಾಡ್ ಹಾಕಿ ಅತ್ಯಾಚಾರ …
Read More »ಹಾಸನ: ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢ, ಏಳು ಶಾಲೆಗಳಿಗೆ ರಜೆ
ಹಾಸನ: ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡ ಬಳಿಕ ಹತ್ತು ಶಿಕ್ಷಕರಿಗೆ ಕೋವಿಡ್ 19 ದೃಢಪಟ್ಟಿರುವುದರಿಂದ ಏಳು ಶಾಲೆಗಳಿಗೆ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ. ಪ್ರಾಥಮಿಕ ಶಾಲೆಯ ಏಳು ಮತ್ತು ಪ್ರೌಢಶಾಲೆಯ ಮೂವರು ಶಿಕ್ಷಕರಿಗೆ ಸೋಂಕು ತಗುಲಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ. ಶಾಲೆ ಆರಂಭಕ್ಕೂ ಮುನ್ನ ಮೂವರು ಶಿಕ್ಷಕರಿಗೆ ಪಾಸಿಟಿವ್ ಪತ್ತೆಯಾಗಿತ್ತು. ಹಾಗಾಗಿ ಸೋಂಕಿತ ಶಿಕ್ಷಕರು ಶಾಲೆಗೆ ಹಾಜರಾಗಿರಲಿಲ್ಲ. ‘ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು, ಹಾಸನ ತಾಲ್ಲೂಕಿನ ಇಬ್ಬರು ಹಾಗೂ …
Read More »
Laxmi News 24×7