Breaking News

Uncategorized

ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ

ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದ ಗ್ರಾಮಸ್ಥರು ಕಂಗ್ರಾಳಿ ಬಿ.ಕೆ. ಗ್ರಾಮದಲ್ಲಿ ಅಭಿವೃದ್ಧಿ ಪರ್ವ ಸುಮಾರು 9 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿ ಬೆಳಗಾವಿ : ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿರುವ ಹಿನ್ನೆಲೆಯಲ್ಲಿ ಕಂಗ್ರಾಳಿ ಬಿಕೆ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೋಮವಾರ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ …

Read More »

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ

ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಬೆಳಗಾವಿಯ ಡಾ. ಸಾರಂಗ್ ಶೆಠೆ ಅವರಿಗೆ ರಾಷ್ಟ್ರ ಮಟ್ಟದ NAMS ಗೌರವ ಭಾರತದ ಮೂವರು ಅಸ್ಥಿಶಸ್ತ್ರ ತಜ್ಞರಲ್ಲಿ ಒಬ್ಬರಾಗಿ ಆಯ್ಕೆ ಚಂಡೀಗಢದಲ್ಲಿ ನಡೆದ ಸಮಾರಂಭ ಡಾ. ಡಿ. ಬೆಹೆರಾ ಅವರ ಅಧ್ಯಕ್ಷತೆ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಅಕಾಡೆಮಿ, ಭಾರತ ಸರ್ಕಾರದ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಉನ್ನತ ಸಂಸ್ಥೆಯಾಗಿದೆ. ಈ …

Read More »

ಮೂಕ ಪ್ರಾಣಿಗಳ ಸಾವಿಗೆ ಕಾರಣ ಆದವರ ವಿರುದ್ಧ ಕ್ರಮ ನಿಶ್ಚಿತ: ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ

ಬೆಳಗಾವಿ : ಮೂಕ ಪ್ರಾಣಿಗಳ ಸಾವಿಗೆ ಯಾರೇ ಕಾರಣವಾದರೂ ಅವರ ಮೇಲೆ ಕ್ರಮ ಖಂಡಿತ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರು ಎಚ್ಚರಿಸಿದ್ದಾರೆ. ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸೋಮವಾರ ಮೃಗಾಲಯಕ್ಕೆ ರಂಗಸ್ವಾಮಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಅವರ ತಂಡಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ್​, ಉಪ ಅರಣ್ಯ ಸಂರಕ್ಷಣಾಧಿಕಾರಿ …

Read More »

ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರವಾದ ಇಂದು ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಪರಿಷೆ ಆರಂಭವಾಗಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಎರಡು ದಿನಗಳ ಬದಲು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ಪರಿಷೆ ನಡೆಯಲಿದ್ದು, ಬಸವನಗುಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಜನರ ಜಾತ್ರೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. …

Read More »

ಇಂದು ಮತ್ತೊಂದು ಸಾವು, 31ಕ್ಕೆ ಏರಿದ ಸಾವಿನ ಸಂಖ್ಯೆ

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಇಂದು(ಸೋಮವಾರ) ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಈ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಐದು ದಿನಗಳ ಅಂತರದಲ್ಲಿ ಒಟ್ಟು 31 ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ನ.13ರಂದು 8, ನ.15ರಂದು 20, ನಿನ್ನೆ 16ರಂದು ಬೆಳಗ್ಗೆ 1 ಮತ್ತು ಸಂಜೆ …

Read More »

ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ

ಅಂಜುಮನ್ ಕಾಲೇಜಿನಿಂದ ಯುವಶಕ್ತಿ ಮತದಾನ ಜಾಗೃತಿ ಅಭಿಯಾನ ಯುವಶಕ್ತಿಯಿಂದ ಮತದಾನ ಜಾಗೃತಿ ಅಭಿಯಾನ ಅಂಜುಮನ್ ಪಿ ಯು ಸಿ ಮತ್ತು ಐಟಿಐ ವಿದ್ಯಾರ್ಥಿಗಳಿಂದ ಜಾಗೃತಿ ನಾಗರಿಕರ ಹಕ್ಕು ಮತ್ತು ಮತದ ಮೌಲ್ಯವನ್ನು ಜನರಿಗೆ ತಿಳಿಸುವ ಗುರಿ ಸಮರ್ಥ ಸರ್ಕಾರ ರಚನೆಯಾದರೆ ದೇಶದ ಭವಿಷ್ಯ ಉಜ್ವಲ; ಡಾ. ಹೆಚ್ ಐ ತಿಮ್ಮಾಪೂರ ಬೆಳಗಾವಿ: ದೇಶದ ಭವಿಷ್ಯವನ್ನು ಉತ್ತಮಗೊಳಿಸುವ ಸದುದ್ದೇಶದಿಂದ, ಅಂಜುಮನ್ ಪಿಯು ಮಹಾವಿದ್ಯಾಲಯ ಹಾಗೂ ಅಂಜುಮಾನ್ ಐಟಿಐ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು …

Read More »

ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ

ಡಾ.ಹೆಬ್ಬಾಳಕರ್ಸ್ ಕ್ಲಿನಿಕ್ ಆರಂಭ ಉದ್ಘಾಟಿಸಿ ಶುಭ ಹಾರೈಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಅವರು ಆರಂಭಿಸಿರುವ ಸ್ಕಿನ್ ಆ‌್ಯಂಡ್ ಹೇರ್ ಕೇರ್ ಕ್ಲಿನಿಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಉದ್ಘಾಟಿಸಿದರು. ಕಾಲೇಜು ರಸ್ತೆಯ ಹೋಟೆಲ್ ಸನ್ಮಾನ್ ಹಿಂಭಾಗದಲ್ಲಿರುವ ದಾಸಪ್ಪ ಶಾನಭಾಗ್ ಎಂಪೈರ್ ನಲ್ಲಿ ಕ್ಲಿನಿಕ್ ಆರಂಭವಾಗಿದೆ. ಹಿತಾ ಅವರು ಬಹಳಷ್ಟು ಅಧ್ಯಯನ ಮಾಡಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳನ್ನು …

Read More »

ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ

ವೈಯಕ್ತಿಕ ದ್ವೇಷ ಬದಿಗಿಟ್ಟರಷ್ಟೇ ಸಹಕಾರಿ ಕ್ಷೇತ್ರದಲ್ಲಿ ಯಶಸ್ಸು* 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ *ಬೆಳಗಾವಿ:* ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದಾರೆ. ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ …

Read More »

ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ

ರಾಜೇಂದ್ರ ಬಡೇಸಗೋಳ ರವರಿಗೆ ಕವಿವಿ ಪಿಎಚ್‌ಡಿ ಪದವಿ ಪ್ರದಾನ ಬೆಳಗಾವಿ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ‘ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ರಾಜೇಂದ್ರ ಬಡೇಸಗೋಳ ಅವರಿಗೆ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ …

Read More »

ಗ್ರಾಮಕ್ಕೆ ಆಗಮಿಸಿದ್ದ ಹೆಳವ ಅಲೆಮಾರಿ ಜನಾಂಗದ ಜೋಡಿಗೆ ಮದುವೆ ಮಾಡಿದ ಗ್ರಾಮಸ್ಥರು

ಹಾವೇರಿ: ಜಿಲ್ಲೆಯ ಅಗಡಿ ಗ್ರಾಮ ಶನಿವಾರ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು. ಈ ಗ್ರಾಮಕ್ಕೆ ಆಗಮಿಸಿದ್ದ ಹೆಳವ ಅಲೆಮಾರಿ ಸಮುದಾಯದ ಜೋಡಿಯ ಮದುವೆಯನ್ನು ಸುತ್ತಮುತ್ತಲಿನ ಗ್ರಾಮಗಳ ರೈತರೇ ಎಲ್ಲಾ ಜವಾಬ್ದಾರಿ ವಹಿಸಿಕೊಂಡು ನೆರವೇರಿಸಿದರು. ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಶಿಲ್ಲತಹಳ್ಳಿ ಗ್ರಾಮದ ಹೆಳವ ಸಂಗಮೇಶ್​​ ಮತ್ತು ಗೋಕಾಕ್​ ತಾಲೂಕು ಕಂಡ್ರಕಟ್ಟಿ ಗ್ರಾಮದ ನೇತ್ರಾವತಿ ಅವರು ಗ್ರಾಮಸ್ಥರ ಮತ್ತು ರೈತರ ಸಮ್ಮುಖದಲ್ಲಿ ನೂತನ ದಾಂಪತ್ಯಕ್ಕೆ ಕಾಲಿಟ್ಟರು. ಅಗಡಿ ಗ್ರಾಮದ ಹೊರವಲಯದಲ್ಲಿ ಹೆಳವರ ತಾತ್ಕಾಲಿಕ ಶೆಡ್ …

Read More »