ತುಮಕೂರು: ತೀವ್ರ ಎದೆ ನೋವಿನಿಂದ ಎಎಸ್ಐ ಸಾವನ್ನಪ್ಪಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಎನ್.ಜಿ ಪವಾರ್ (54) ಮೃತ ಎಎಸ್ಐ. ಕೆಎಸ್ಆರ್ಪಿ ಬೆಟಾಲಿಯನ್ನ ಸಿಬ್ಬಂದಿ ಬ್ಯಾರಕ್ನಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ವಿಶ್ರಾಂತಿಗೆ ತೆರಳಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲಿ ಅವರು ಕೊನೆ ಉಸಿರೆಳಿದಿದ್ದಾರೆ. ಎನ್.ಜಿ ಪವಾರ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದವರು. ಬಾಗಲಕೋಟೆಯಲ್ಲಿ ಪತ್ನಿ ಹೆಡ್ …
Read More »ಅಕ್ರಮ ಭೂಮಿ ಮಂಜೂರಾತಿ ಪ್ರಕರಣ – ಜೆಡಿಎಸ್ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಸಿಐಡಿ ವಶಕ್ಕೆ
ಹಾಸನ: ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಜೆಡಿಎಸ್ನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2018 ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಲಿಂಗೇಶ್ ಅವರು ಶಾಸಕಾರಾಗಿ ಆಯ್ಕೆಯಾಗಿದ್ದರು. ಆಗ ಅವರು ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಅಕ್ರಮ ಭೂಮಿ ಮಂಜೂರಾತಿ ಆರೋಪದ ಬಗ್ಗೆ ಕೋಲಾರದ ಆರ್ಟಿಐ …
Read More »ಕೊಕ್ಕನೂರು ಶಾಲೆ ಮುಖ್ಯ ಶಿಕ್ಷಕ ಆತ್ಮಹತ್ಯೆ ಕೇಸ್ – 11 ಮಂದಿ ವಿರುದ್ಧ ಎಫ್ಐಆರ್
ದಾವಣಗೆರೆ: ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣದಲ್ಲಿ ಶಾಲಾ ಸಹ ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್ಪಿ ಹಾಗೂ ಬಿಆರ್ಪಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜಯಪ್ಪ ಪತ್ನಿ ಅಂಜನಮ್ಮ ನೀಡಿದ ದೂರಿನ ಮೇರೆಗೆ ಮಲೇಬೆನ್ನೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಾನಸಿಕ ಕಿರುಕುಳ ಹಾಗೂ ಜಾತಿನಿಂದನೆ ಆರೋಪದಡಿ ಸಿಆರ್ಪಿ, ಬಿಆರ್ಪಿ, ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, …
Read More »ಕೊಡಗಿನ ತಾಯಿ-ಮಗು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮತಾಂತರ & ಲವ್ ಜಿಹಾದ್ಗೆ ದೊಡ್ಡ ಸಂಚು
ಮಡಿಕೇರಿ: ಒಂದೂವರೆ ತಿಂಗಳ ಹಿಂದೆ ಕೊಡಗಿನ ಕುಶಾಲನಗರದಿಂದ ನಾಪತ್ತೆಯಾಗಿದ್ದ ಸಚಿತಾ ಹಾಗೂ ಆಕೆಯ 9 ವರ್ಷದ ಮಗು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಮದರಸವೊಂದರಲ್ಲಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ಹಿಂದೆ ಮತಾಂತರ ಹಾಗೂ ಲವ್ ಜಿಹಾದ್ನ ದೊಡ್ಡ ಸಂಚು ಇದೆ ಎಂದು ಕುಶಾಲನಗರದ ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮಲಪ್ಪುರಂ ಜಿಲ್ಲೆಯ ಪೊನ್ನಾಣಿ ಹಾಗೂ ಮಂಜೇರಿ ಭಾಗಗಳಲ್ಲಿ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪವನ್ನೂ ಮಾಡಿವೆ. ಕುಶಾಲನಗರ ಬಳಿಯ ಎನ್ಟಿಸಿ ಕಾಂಪ್ಲೆಕ್ಸ್ನ …
Read More »ಕರಾವಳಿ & ಮಲೆನಾಡು ಪ್ರವಾಸೋದ್ಯಮ ಬ್ರಾಂಡ್ ಅಂಬಾಸಿಡರ್ ಆಗಿ ರಿಷಬ್ ಶೆಟ್ಟಿ ನೇಮಕ
ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇನ್ನು 20 ದಿನದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿಯ ಬಗ್ಗೆ …
Read More »ಗ್ಯಾರಂಟಿಗೆ ವೋಟರ್ ಐಡಿ ಕಡ್ಡಾಯ
ಬೆಂಗಳೂರು: ಗ್ಯಾರಂಟಿ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಆಧಾರ್ ಜೊತೆಗೆ ವೋಟರ್ ಐಡಿ ಇದ್ರೆ ಮಾತ್ರ ಗ್ಯಾರಂಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಗ್ಯಾರಂಟಿ ಪರಿಷ್ಕರಣೆ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಗ್ಯಾರಂಟಿ ಪರಿಷ್ಕರಣೆಗೆ ತೀರ್ಮಾನಿಸಲಾಗಿದೆ. ಫಲಾನುಭವಿಗಳ ರೀ-ವೇರಿಫಿಕೇಶನ್ ನಡೆಯಲಿದ್ದು, ಫಲಾನುಭವಿಗಳು ಹೊಸ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕಿದೆ. ಮರು ಪರಿಶೀಲನೆಗೆ ನಿಯೋಜಿತ ಅಧಿಕಾರಿಗಳು ಹೊಸ ಮರುಪರಿಶೀಲನಾ ಅರ್ಜಿ ತಗೆದುಕೊಂಡು ಹೋಗಿ ಮನೆ ಮನೆಗೆ …
Read More »ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಶಿಫಾರಸು
ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಗ್ಯಾರಂಟಿ ಅನುಷ್ಠಾನ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರ (ಜೂ.19) ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಶಿಫಾರಸು ಮಾಡಿದ್ದಾರೆ. ಶಕ್ತಿ ಯೋಜನೆಯಿಂದ ಉಂಟಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ದರ ಹೆಚ್ಚಳ ಅನಿವಾರ್ಯ ಎಂದು ಮುಖ್ಯಮಂತ್ರಿಗಳಿಗೆ ಸಮಿತಿ ಮನವಿ ಮಾಡಿವೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ ಸದ್ಯ 5,173 …
Read More »ಎಂಎಲ್ಸಿ ಚುನಾವಣೆಯಲ್ಲಿ ನಮಗೆ ಬಿದ್ದಿರುವುದು ಆತ್ಮಸಾಕ್ಷಿಯ ಮತಗಳು: ಸಚಿವ ಸತೀಶ್ ಜಾರಕಿಹೊಳಿ
ಎಂಎಲ್ಸಿ ಚುನಾವಣೆಯಲ್ಲಿ ಇಷ್ಟೊಂದು ಮತಗಳು ಬರುತ್ತವೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಕೇವಲ ನಾಲೈದು ಮತಗಳು ಬರಬಹುದು ಅಂದುಕೊಂಡಿದ್ದೆವು. ಆದರೆ ಇಲ್ಲಿ ಬಿದ್ದಿರುವುದು ಆತ್ಮಸಾಕ್ಷಿಯ ಮತಗಳು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ರಾಜಧಾನಿಯ ಅರಮನೆ ಮೈದಾನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೆಹಲಿ ಮಾಡೆಲ್ ಈಗ ಕರ್ನಾಟಕದಲ್ಲೂ ಅನುಷ್ಠಾನಗೊಂಡಿದೆ. ನಾವು ಬಿಜೆಪಿಯ ಮಾಡೆಲ್ ಅನ್ನೇ ಅನುಕರಿಸಿದ್ದೇವೆ. ಇದು ಕುದುರೆ ವ್ಯಾಪಾರ ಅಲ್ಲ ಬದಲಿಗೆ ಇದೊಂದು ರಾಜಕೀಯ ತಂತ್ರಗಾರಿಕೆ ಎಂದು …
Read More »ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಬೆಳಗಾವಿಯಲ್ಲಿ ನಡೆಯಲಿದೆ ನೇರ ಸಂದರ್ಶನ ಮತ್ತು ಉದ್ಯೋಗ ಮೇಳ
ಬೆಳಗಾವಿ: ಬೆಳಗಾವಿ ನಗರದ ಕಾ.ರಾ.ವಿ ಆಸ್ಪತ್ರೆ ಹಾಗೂ ಇಲ್ಲಿನ ಚಿಕಿತ್ಸಾಲಯಗಳಿಗೆ ಗುತ್ತಿಗೆ ಆಧಾರದ ಮೇಲೆ 5 ವಿಮಾ ವೈದ್ಯಾಧಿಕಾರಿಗಳನ್ನು (ಮೆರಿಟ್ ಕಮ್ ರೊಸ್ಟರ್) ಮೂಲಕ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಜೂನ್ 24 ರಂದು ಬೆಳಗ್ಗೆ 10.30 ರಿಂದ ಸಂಜೆ 4, ಗಂಟೆಯವರೆಗೆ ಬೆಳಗಾವಿಯ ಕಾ.ರಾ.ವಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23324216 / 23324218 ಗೆ ಸಂಪರ್ಕಿಸಬಹುದು …
Read More »ಬೆಳಗಾವಿ ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 5 ಲಕ್ಷ ಮೌಲ್ಯದ ಅಫೀಮ್ ಜಪ್ತಿ
ಬೆಳಗಾವಿ: ರಾಜಸ್ಥಾನದ ಪಾಲಿಯಿಂದ ತಂದು ಬೆಳಗಾವಿಯ ಹಿಂಡಾಲ್ಕೋ ಫ್ಯಾಕ್ಟರಿ ಸಮೀಪ ಎನ್.ಹೆಚ್ 48 ಹೆದ್ದಾರಿಯ ಸರ್ವಿಸ್ ರಸ್ತೆಯ ಹತ್ತಿರ ಅಫೀಮ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದ ಮೂಲದ ರೋಪಿತನಾದ ಶುಭಂ ಮದನಲಾಲ ಶರ್ಮ (29) ಎಂಬಾತನನ್ನು ಬಂಧಿಸಲಾಗಿದೆ. ಈತ ಖೇತಾರಾಮ ಚೌಧರಿ ಎಂಬುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗ ಸಿಸಿಬಿ ವಿಭಾಗದ ಪಿಐ ರವರಾದ ಮಂಜುನಾಥ ನಾಯಿಕ ಹಾಗೂ ಸಿಬ್ಬಂದಿಯವರು ದಾಳಿ ಮಾಡಿದ್ದಾರೆ.ದಾಳಿ ವೇಳೆ 5,00,000 ರೂ. ಮೌಲ್ಯದ 1.048 …
Read More »
Laxmi News 24×7