Breaking News
Home / Uncategorized (page 90)

Uncategorized

ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಯಡಿಯೂರಪ್ಪ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯಾದ ಕೋಟಿ ಕೋಟಿ ನಗದು ಹಣ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರುವ ಖಾಸಗಿ ನಿವಾಸ ದವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Read More »

ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ

ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು. ವಿಷಯ- ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.   ನಮ್ಮ ಬೇಡಿಕೆ ಕಿತ್ತೂರು ಉತ್ಸವಕ್ಕೆ ಐದು ಕೋಟಿ,ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುದಾನ ನೀಡುವ ಕೋರಿಕೆ ಸನ್ಮಾನ್ಯರೇ. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ ಅನುದಾನ, ಹಾಗೂ ಬೆಳಗಾವಿ ನಗರದಲ್ಲಿ ನಡೆಯುವ …

Read More »

ಇಂಗಳಿ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 29 ಲಕ್ಷ ಅನುದಾನ?:ಶಶಿಕಲಾ ಜೊಲ್ಲೆ

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ದೇವರು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಪ್ರಯತ್ನದಿಂದ ರೂ. 29 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀ ಬೀರೇಶ್ವರ ಸಹಕಾರಿ ಇಂಗಳಿ ಶಾಖೆಯ ನಿರ್ದೇಶಕ ಪ್ರಕಾಶ ಮಿರ್ಜಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಂಕರ ಪವಾರ ಮಾತನಾಡಿ, …

Read More »

ನಿಂತಿದ್ದ 2 ಖಾಸಗಿ ಬಸ್​ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು

ಕಲಬುರಗಿ: ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್​ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್​ ಎ ಖಾಸ್ ಡಾಬಾದ ಬಳಿ ಶನಿವಾರ ನಡೆದಿದೆ. ಅಕ್ಕಪಕ್ಕದಲ್ಲಿ ನಿಂತಿದ್ದ ಎರಡು ಬಸ್​ಗಳು ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ದಟ್ಟವಾದ ಹೊಗೆ ಆವರಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವ …

Read More »

ʼನಟಿ ಲೀಲಾವತಿ ಕಟ್ಟಿಸಿರೋ ಆಸ್ಪತ್ರೆಗೆ ಸರ್ಕಾರದಿಂದ ಸಲ್ಲಬೇಕಾದ ಸೂಕ್ತ ನೆರವು ಕೊಡಿಸ್ತೇವೆʼ

ಬೆಂಗಳೂರು: ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಉದ್ಘಾಟನೆಗೆ ಬನ್ನಿ ಎಂದು ಕರೆದಿದ್ದಾರೆ, ಡೇಟ್ ಕೇಳಿದ್ದಾರೆ, ನಾನೇ ಡೇಟ್ ಕೊಡ್ತೇನೆ ಆಸ್ಪತ್ರೆಗೆ ಸಹಾಯ ಕೂಡ ಮಾಡ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್‌ ಹೇಳಿದ್ದಾರೆ. ಹಿರಿಯ ನಟಿ ಲೀಲಾವತಿ ಭೇಟಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ನಟಿ ಅವರಿಗೆ ಸೈಟ್ ಕೊಡ್ತೇವೆ, ಆಸ್ಪತ್ರೆ ಸಿಬ್ಬಂದಿ ಸರ್ಕಾರದಿಂದ ಕೇಳಿದ್ದಾರೆ. ಸೈಟ್ಕೂಡ ಹೋಲ್ಡ್ ಆಗಿದೆ, ಏನು ಅಂತ ನೋಡ್ತೇನೆ. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಸೂಕ್ತ ನೆರವನ್ನು ಕೊಡಿಸುತ್ತೇವೆ …

Read More »

ನವೆಂಬರ್‌ 1 ರಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಮಹಾತ್ಮಾ ಪುಲೆ ಆರೋಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಬೆಳಗಾವಿಯ ಜಿ.ಪಂ.ಸಭಾಭವನದಲ್ಲಿ ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ನಿರ್ಣಯ ಖಂಡಿಸಿದರು. ಕರ್ನಾಟಕದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆ ಜಾರಿಗೊಳಿಸುತ್ತಿದೆ. …

Read More »

ಗೂಗಲ್​ ಸೈನ್​ಇನ್​ಗೆ ಕಡ್ಡಾಯವಾಗಲಿದೆ ಪಾಸ್​ ಕೀ.. ಏನಿದು ಹೊಸ ವಿಧಾನ?

ನವದೆಹಲಿ : ಬರುವ ದಿನಗಳಲ್ಲಿ ಗೂಗಲ್ ಸೇವೆಗಳಿಗೆ ಸೈನ್ ಇನ್ ಮಾಡಲು ಪಾಸ್​ವರ್ಡ್​ ಬದಲಾಗಿ ಪಾಸ್​ಕೀ ಬಳಕೆ ಕಡ್ಡಾಯವಾಗಲಿದೆ. ಪಾಸ್​ಕೀ (ಪಾಸ್ ವರ್ಡ್ ಗಳಿಗೆ ಪರ್ಯಾಯ) ಮೂಲಕವೇ ಸೈನ್​ ಇನ್ ಮಾಡುವುದು ಡೀಫಾಲ್ಟ್ ಸೈನ್ – ಇನ್ ಪ್ರಕ್ರಿಯೆ ಆಗಲಿದೆ ಎಂದು ಗೂಗಲ್ ಹೇಳಿದೆ. ಪಾಸ್ ಕೀ ಬಳಸಿ ಬಳಕೆದಾರರು ಬಯೋಮೆಟ್ರಿಕ್ ಸೆನ್ಸರ್ (ಫಿಂಗರ್ ಪ್ರಿಂಟ್ ಅಥವಾ ಮುಖ ಗುರುತಿಸುವಿಕೆಯಂತಹ), ಪಿನ್ ಅಥವಾ ಪ್ಯಾಟರ್ನ್​ಗಳ ಮೂಲಕ ಅಪ್ಲಿಕೇಶನ್ ಗಳು ಮತ್ತು ವೆಬ್ …

Read More »

ಬಿಜೆಪಿ ಶಾಸಕ ಅಭಯ್ ಪಾಟೀಲ ವಿರುದ್ಧ ಅವ್ಯವಹಾರ ಆರೋಪ: ತನಿಖೆ ಮಾಡಿಸುತ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಇಲ್ಲಿನ ಶಹಾಪುರ ಬ್ಯಾಂಕ್ ಆಫ್ ಇಂಡಿಯಾದಿಂದ ಹಳೆ ಪಿ.ಬಿ.ರಸ್ತೆಯವರೆಗೆ ಮಾಡಿರುವ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಾಜಿ ಮಹಾರಾಜ ಉದ್ಯಾನದ ಬಳಿ ಬೆಳಗಾವಿ ನಾಗರಿಕರ ಹಿತರಕ್ಷಣಾ ಒಕ್ಕೂಟದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಶಾಸಕ ಅಭಯ್ ಪಾಟೀಲ ಭಾವಚಿತ್ರ ಇರುವ ಫಲಕಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಘೋಷಣೆ ಮೊಳಗಿಸಿದರು. ಮಾನವ ಸರಪಳಿ ನಿರ್ಮಿಸಿ, ಬುಟ್ಟಿಯಲ್ಲಿ ಮರಳು, ಕಡಿ, ನಕಲಿ ನೋಟುಗಳನ್ನು …

Read More »

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ …

Read More »

ಹುಬ್ಬಳ್ಳಿ : ಬಾಲಕಿ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್

ಹುಬ್ಬಳ್ಳಿ : ಭಾರತ ತಂಡದ ಖ್ಯಾತ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ ಎಲ್​ ರಾಹುಲ್ ಹಲವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ್ದಾರೆ. ಇದೀಗ ಸುಡಗಾಡು ಸಿದ್ಧರ ಸಮುದಾಯದ ವಿದ್ಯಾರ್ಥಿನಿಯೋರ್ವಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡಿರುವ ರಾಹುಲ್​, ವಿದ್ಯಾರ್ಥಿನಿ ಶಾಲೆಗೆ ಸೇರಲು ಸಹಕರಿಸಿದ್ದಾರೆ. ಈ ಹಿಂದೆ ಜಮಖಂಡಿಯ ವಿದ್ಯಾರ್ಥಿಯೊಬ್ಬನಿಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ದಾಖಲಾಗಲು ರಾಹುಲ್​ ಹಣಕಾಸಿ‌ನ ನೆರವು ನೀಡಿದ್ದರು. ಧಾರವಾಡದ ಸಿದ್ದೇಶ್ವರ ಕಾಲೋನಿ ನಿವಾಸಿಯಾಗಿರುವ ಸೃಷ್ಟಿ ಕುಲಾವಿ ಎಂಬ ಬಾಲಕಿಯ ವಿದ್ಯಾಭ್ಯಾಸಕ್ಕೆ …

Read More »