ಬೆಂಗಳೂರು: ನಾನು ಪರಿಷತ್ ಗೆ ಬಂದಾಗ 9.30ಕ್ಕೆ ಕಲಾಪ ಶುರುವಾಗುತ್ತಿತ್ತು, ರಾತ್ರಿ 8ಕ್ಕೆ ಮುಗಿಯುತ್ತಿತ್ತು. ಈಗ ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ. ನಮ್ಮ ದೇಶದಲ್ಲಿ ಎಲ್ಲಿಯವರೆಗೆ ದುಡ್ಡು ಕೊಟ್ಟು ವೋಟ್ ಹಾಕಿಸಿಕೊಳ್ಳೋರು, ವೋಟ್ ಹಾಕೋರು ಇರುತ್ತಾರೋ ಅಲ್ಲಿಯವರೆಗೂ ಪ್ರಜಾಪ್ರಭುತ್ವ ಸರಿ ಆಗಲ್ಲ. ಇದೆಲ್ಲವನ್ನೂ ಕಾಲವೇ ಸುಧಾರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರ ಆಯ್ಕೆ ವ್ಯವಸ್ಥೆ ಬಗ್ಗೆ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದ್ದಾರೆ.ಕಲಾಪದಲ್ಲಿ ಭಾಗಿಯಾದ ಎಲ್ಲಾ …
Read More »ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಹೆಬ್ಬಾಳಕರ
ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ : ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಅವರು ಇಂದು ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ …
Read More »ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. 10 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5ರವರೆಗೆ ನಡೆಯಲಿದೆ.ಇನ್ನು ಪರೀಕ್ಷೆಯ ಫಲಿತಾಂಶಗಳನ್ನು ಮೇ 2025 ರಲ್ಲಿ ಘೋಷಿಸಲಾಗುವುದು ಎಂದು ಕೌನ್ಸಿಲ್ ಅಧಿಕೃತ ಅಧಿಸೂಚನೆಗಳಲ್ಲಿ …
Read More »ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆ ಆಯೋಜನೆ
ಯಾದಗಿರಿಯ ಗ್ರಾಮೀಣ ಕ್ರೀಡೆ: ಎತ್ತುಗಳು ಕಲ್ಲು ಎಳೆಯುವ ಸ್ಪರ್ಧೆ; ಫೋಟೋಸ್ ನೋಡಿ ಆಧುನಿಕ ಜಗತ್ತಿನಲ್ಲಿ ಹಳೇ ಸಂಪ್ರದಾಯಗಳು ಮರೆಮಾಚಿ ಹೋಗುತ್ತಿವೆ. ಹಳೇ ಕ್ರೀಡೆಗಳು ಮಾಯವಾಗಿ ಹೊಸ ಜಮಾನ ಶುರುವಾಗಿದೆ. ಆದರೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಜಮಾಲೋದ್ದೀನ್ ದರ್ಗಾದ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮೀಣ ಸೊಗಡಿನ ಕಲ್ಲು ಎಳೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. …
Read More »ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ
ಬೆಂಗಳೂರು, (ನವೆಂಬರ್ 25): ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಫೋನ್ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್ಅನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು …
Read More »ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ.
ಬೆಳಗಾವಿ : ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ, ಉಪಾಧ್ಯಕ್ಷ ಭರತ ದೇಶಪಾಂಡೆ ಮತ್ತು ಗುತ್ತಿಗೆದಾರ ರಾಜೇಂದ್ರ ದೇಸಾಯಿ ಅವರನ್ನು ಸಮಾವೇಶ ಸಮಿತಿಯ ರಾಜ್ಯಮಟ್ಟದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಜಿ ನಗರಸೇವಕಿ ಅನುಶ್ರೀ ದೇಶಪಾಂಡೆ ಅವರನ್ನು ಜಿಲ್ಲಾ ಮಟ್ಟದ ಸಂಘಟಕರನ್ನಾಗಿ ನೇಮಿಸಲಾಗಿದೆ. ಇವರ ನೇತೃತ್ವದಲ್ಲಿ ಈಗಾಗಲೇ …
Read More »ವಿಜಯಪುರ | ಮುಖ್ಯರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ
ವಿಜಯಪುರ(ದೇವನಹಳ್ಳಿ): ಪಟ್ಟಣದ ಕೆನರಾ ಬ್ಯಾಂಕ್ನ ಮುಂಭಾಗದ ರಸ್ತೆ, ಹಳೆ ಕೆನರಾ ಬ್ಯಾಂಕ್ ರಸ್ತೆ, ವೆಂಕಟರಮಣಸ್ವಾಮಿ ದೇವಾಲಯದ ರಸ್ತೆಗಳಲ್ಲಿ ಅಧಿಕವಾಗಿ ವಾಹನಗಳ ಸಂಚಾರವಿದೆ. ಇದೇ ರಸ್ತೆಗಳಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ ಬೇರೆ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿನಿತ್ಯ ಈ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಕೆನರಾ ಬ್ಯಾಂಕ್ ಎದುರಿನಲ್ಲಿ ಮತ್ತು ಹಿಂಭಾಗದಲ್ಲಿ ರೇಷ್ಮೆಗೂಡು ಮಾರುಕಟ್ಟೆ ಗೋಡನ್ಗಳಿವೆ. ಪಕ್ಕದಲ್ಲಿ ಅಂಚೆ ಕಚೇರಿಯಿದೆ. ರೇಷ್ಮೆಗೂಡು ಖರೀದಿ ಮಾಡುವುದಕ್ಕೆ ಬರುವ …
Read More »ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
ಕುಂದಾಪುರ/ದಾವಣಗೆರೆ: ಕೇರಳ ಹೊರತುಪಡಿಸಿ ದೇಶದಲ್ಲೇ ಅತೀ ಹೆಚ್ಚು ತೆಂಗಿನಕಾಯಿ ಬೆಳೆಯುವ ಕರ್ನಾಟಕ ದಲ್ಲೂ ಈ ಬಾರಿ ಇಳುವರಿ ಕೊರತೆಯಿದ್ದು, ದಿನೇದಿನೆ ಬೆಲೆ ಏರಿಕೆಯಾಗುತ್ತಿದೆ. ಇದೇ ಮೊದಲ ಬಾರಿಗೆ ತೆಂಗಿನಕಾಯಿ ಬೆಲೆ 60 ರೂ. ಗಡಿ ದಾಟಿದೆ. ಇದು ತೆಂಗಿನ ಕಾಯಿ ಮಾರುಕಟ್ಟೆಯ ಸಾರ್ವ ಕಾಲಿಕ ಗರಿಷ್ಠ ಧಾರಣೆ ಯಾಗಿದೆ. ರೈತರಿಂದಲೇ ಉತ್ತಮ ಗುಣ ಮಟ್ಟದ ಕಾಯಿಗಳನ್ನು 50-52 ರೂ. ದರದಲ್ಲಿ ವ್ಯಾಪಾರಿಗಳು ಖರೀದಿಸುತ್ತಿದ್ದು, ಅಂಗಡಿಗಳಲ್ಲಿ 58-60 ರೂ.ಗೆ ಮಾರುತ್ತಿದ್ದಾರೆ. ಮಂಗಳೂರು …
Read More »ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ
ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು. ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ …
Read More »ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ ಬೆನ್ನಲ್ಲೇ ಈಗ ಎಐ ಚಾಟ್ಬಾಟ್ ಒಂದು ಮನುಷ್ಯನಿಗೇ “ನೀನು ಸತ್ತು ಹೋಗು’ ಎಂದಿದೆ! ಹೌದು, ಅಮೆರಿಕದ ಮಿಚಿಗನ್ನಲ್ಲಿನ ಭಾರತೀಯ ವಿದ್ಯಾರ್ಥಿ ವಿಧಯ್ ರೆಡ್ಡಿ ತಮ್ಮ ಪಠ್ಯದ ಒಂದು ಸಮಸ್ಯೆಗೆ ಚಾಟ್ಬಾಟ್ ಗೂಗಲ್ ಜೆಮಿನಿ ಬಳಿ ಪರಿಹಾರ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿದ ಜೆಮಿನಿ, “ಮನುಷ್ಯ, ನೀನು ಮುಖ್ಯವೂ ಅಲ್ಲ, ವಿಶೇಷವೂ ಅಲ್ಲ. ನಿನ್ನಿಂದ ಸಮಯ, …
Read More »
Laxmi News 24×7