Breaking News

Uncategorized

200ಕೋಟಿ gst ವಂಚನೆ ಮಾಡಿದ್ದ 4ಜನ ಅರೆಸ್ಟ್…..!

ಬೆಂಗಳೂರು: ಗುಪ್ತಚರ(ಡಿಜಿಜಿಐ) ವಿಭಾಗ ಹಾಗೂ ಜಿಎಸ್‍ಟಿ ಬೆಂಗಳೂರು ಝೋನಾಲ್ ಯುನಿಟ್(ಬಿಝೆಡ್‍ಯು) ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಜಿಎಸ್‍ಟಿ ತೆರಿಗೆ ವಂಚನೆ ಮಾಡಿದ ಆರೋಪದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಚೀನಾ ಮೂಲದ ಕಂಪನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸೇವೆ ನೀಡಿದ ನೆಪದಲ್ಲಿ ಸುಮಾರು 1,000 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್‍ವೈಸ್‍ಗಳನ್ನು ಸೃಷ್ಟಿಸಲಾಗಿದೆ ಎಂದು ಆಪಾದಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಎಸ್‍ಟಿ ಗುಪ್ತಚರ …

Read More »

ಸಾವಿರಾರು ಕೋಟಿ ಒಡೆಯ ಇದ್ದರೂ ತನ್ನ ಸ್ವಂತ ಜಿಲ್ಲೆಗೆ ಮನೆಗೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು…

ನವದೆಹಲಿ: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹಿನ್ನಡೆಯಾಗಿದ್ದು, ಬಳ್ಳಾರಿ ಪ್ರವೇಶದ ಅರ್ಜಿಗೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ.    ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಡಿಸೆಂಬರ್‍ನಲ್ಲಿ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಮುಂದಾಗಿದೆ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿತು.   …

Read More »

ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ: ನಟ ಜಗ್ಗೇಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ …

Read More »

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …

Read More »

ಮರಾಠ ಸಮುದಾಯ ಓಲೈಸುವ ಸಲುವಾಗಿ50 ಕೋಟಿಇದು ಉಪಚುನಾವಣೆ ತಂತ್ರ ನಾವು ಸುಮನಿರಲ್ಲ ಪ್ರತಿಭಟನೆ ಮಾಡ್ತೀವಿ :ಸಾ.ರಾ. ಗೋವಿಂದ

ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ. ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು. . 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ …

Read More »

ಕಲಿಯುಗದ ಕರ್ಣನಿಗೆ ಗುಡಿ ಕಟ್ಟಿದ್ದಾರೆ. ಅಂಬರೀಶ್‍ರವರ ವ್ಯಕ್ತಿತ್ವದ ನೆನಪನ್ನು ಮುಂದಿನ ಪೀಳಿಗೆಯೂ ತಿಳಿಯುವಂತೆ ಮಾಡುತ್ತಿದ್ದಾರೆ.

ಮಂಡ್ಯ; ಅಂಬರೀಶ್ ಅಂದರೆ ಅಭಿಮಾನಿಗಳ ಆರಾಧ್ಯದೈವ. ಅಂಬಿಯ ಮಗ್ದ ಮನಸಿನ ಒರಟು ಮಾತಿಗೆ ತಲೆಬಾಗದವರೆ ಇಲ್ಲ. ಆದರೆ ರೆಬೆಲ್ ಸ್ಟಾರ್ ನಮ್ಮನ್ನೆಲ್ಲಾ ಅಗಲಿ 2 ವರ್ಷ ತುಂಬುತ್ತಿದೆ. ವ್ಯಕ್ತಿ ಸತ್ತರು ಪ್ರೀತಿ ಸಾಯಲ್ಲ ಅನ್ನೋ ಹಾಗೇ ಅಭಿಮಾನಿಗಳು ಅಂಬಿ ಮೇಲಿನ ಪ್ರೀತಿ ಕಡಿಮೆ ಮಾಡಿಲ್ಲ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಕಲಿಯುಗದ ಕರ್ಣನಿಗೆ ಗುಡಿ ಕಟ್ಟಿದ್ದಾರೆ. ಅಂಬರೀಶ್‍ರವರ ವ್ಯಕ್ತಿತ್ವದ ನೆನಪನ್ನು ಮುಂದಿನ ಪೀಳಿಗೆಯೂ ತಿಳಿಯುವಂತೆ ಮಾಡುತ್ತಿದ್ದಾರೆ. ನವೆಂಬರ್ 24, …

Read More »

ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು.

ಬೆಂಗಳೂರು, ನ.15- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪಟಾಕಿ ನಿಷೇಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ನೆಪ ಮಾತ್ರಕ್ಕೆ ಎಂಬಂತಾಗಿದ್ದು, ಬೆಳಕಿನ ಹಬ್ಬದ ಮೊದಲ ದಿನವೇ ಪಟಾಕಿ ಸದ್ದು ಜೋರಾಗಿತ್ತು. ಪಟಾಕಿ ಮಾರಾಟ ಮತ್ತು ಸಿಡಿಸುವುದರ ಮೇಲೆ ರಾಜ್ಯ ಸರ್ಕಾರ ನಿಷೇಧ ವಿಸಿತ್ತು. ರಾಸಾಯನಿಕ ಮಿಶ್ರಣದ ಪಟಾಕಿಗಳ ಬದಲಾಗಿ ಪರಿಸರಕ್ಕೆ ಹೆಚ್ಚಿನ ಹಾನಿಯಾಗದ ಹಸಿರು ಪಟಾಕಿಗಳನ್ನು ಬಳಸಲು ಸಲಹೆ ನೀಡಲಾಗಿತ್ತು. ದೀಪಾವಳಿಯ ಮೊದಲ ದಿನ ವಾದ ನಿನ್ನೆ ಸಂಜೆ ಪಟಾಕಿಯ ಸದ್ದು …

Read More »

ಬಾಲಕಿ- ಕಂದಮ್ಮಗಳಿಗೆ ದೀಪಾವಳಿ ಗಿಫ್ಟ್ ಕೊಟ್ಟ ಸಿಎಂ

ಲಕ್ನೋ: ಕಂದಮ್ಮನ ಆಕ್ರಂದನವನ್ನು ನೋಡಲಾರದೆ ಬಡ ಪಟಾಕಿ ವ್ಯಾಪಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಬಂಧನದಿಂದ ಬಿಡುಗಡೆಗೊಳಿಸಿ ಬಾಲಕಿಗೆ ದೀಪಾವಳಿ ಗಿಫ್ಟ್ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಉತ್ತರ ಪ್ರದೇಶದ ಬುಲಾಂದ್‍ಶಹರ್ ನ ಖುರ್ಜಾದಲ್ಲಿ ಈ ಘಟನೆ ನಡೆದಿದ್ದು, ರಾಜ್ಯದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಮಾರುವಂತಿಲ್ಲ. ಆದರೆ ಈ ಮಾರುಕಟ್ಟೆಯಲ್ಲಿ ಕದ್ದು ಮುಚ್ಚಿ ಪಟಾಕಿ ಮಾರಲಾಗುತ್ತಿತ್ತು. ಅಂತಹವರನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಬಾಲಕಿಯ ತಂದೆಯನ್ನೂ ಬಂಧಿಸಲಾಗಿದೆ. ಅಪ್ಪನನ್ನು ಎಳೆದುಕೊಂಡು ಹೋಗುವುದನ್ನು ನೋಡಲಾಗದೆ …

Read More »

ನವೆಂಬರ್ 16ರಿಂದ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳು ದರ್ಶನ

ಮುಂಬೈ: ಕಳೆದ ಎಂಟು ತಿಂಗಳಿಂದ ದೇವಸ್ಥಾನಗಳಿಗೆ ಸಾರ್ವಜನಿಕರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಕುರಿತು ಮಹಾರಾಷ್ಟ್ರ ಸರ್ಕಾರ ಕಡೆಗೂ ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ತೆರೆಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಫೇಸ್ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಈ ಮೂಲಕ ಬರೋಬ್ಬರಿ ಎಂಟು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂ ಘೋಷಿಸಿದ ಬಳಿಕ …

Read More »

ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮ

ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ …

Read More »