Breaking News

Uncategorized

ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ

ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ

ಮುಗಳಿಹಾಳ: ಸಮೀಪದ ಯರಝರ್ವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ, ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವ್ವ ನಂದಿ, ಸಿಪಿಐ ಈರಯ್ಯ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಬೆಳಗಾವಿಯ ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ವಿಜಯ ಸಂಗಪ್ಪಗೊಳ, ಲಕ್ಷ್ಮಣ ಕುಂಟಿರಪ್ಪಗೊಳ, ಛಾಯಪ್ಪ ಕುಂಡೆಕಾರ, ಮಹಾಂತೇಶ ಉರುಬಿನ್ನವರ, ಸೋಮು ಪೂಜೇರ, …

Read More »

ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!

ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್​​ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ಬೆಂಗಳೂರು,  ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ …

Read More »

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ,C.M.೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ. ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ. ಗೋಕಾಕ- ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿAದ ವಿಶೇಷ ವಿಮಾಣದ ಮೂಲಕ ಮ.೧೨.೧೫ ಗಂಟೆಗೆ ಬೆಳಗಾವಿಗೆ …

Read More »

ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆ

ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …

Read More »

ಹೆಂಡ್ತಿ ರೀಲ್ಸ್​ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ

ಉಡುಪಿ, (ಆಗಸ್ಟ್ 23): ಸೋಶಿಯಲ್ ಮೀಡಿಯಾ ಮಿತವಾಗಿ ಬಳಸಿದ್ರೆ ಒಳ್ಳೆಯದು. ಅದರ ಬಳಕೆ ಅತಿಯಾದ್ರೆ ಸಂಸಾರದಲ್ಲಿ ಯಾವ ರೀತಿ ವಿರಸ ಮೂಡಿ, ಅದು ಮಹಾ ಅನಾಹುತಕ್ಕೆ ಕಾರಣ ಆಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಉಡುಪಿಯಲ್ಲಿ ಗಂಡನೊಬ್ಬ  ಹೆಂಡತಿಯನ್ನು ಹೊಡೆದು ಕೊಂದಿದ್ದಾನೆ. ಕಾರಣ ಆಕೆಯ ಸೋಶಿಯಲ್ ಮೀಡಿಯಾ ಹುಚ್ಚು. ಅದರಲ್ಲೂ ಇನ್ಸ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ  ಆಕೆ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣ. ಇನ್ಸ್‌ಸ್ಟಾಗ್ರಾಮ್‌ನಲ್ಲಿ ಕೇವಲ 16 ಫಾಲೋವರ್ಸ್‌ ಹೊಂದಿದ್ದ ಪತ್ನಿ ರೀಲ್ಸ್ …

Read More »

ದೌರ್ಜನ್ಯ ತಡೆಯಲು ಸಮನ್ವಯದಿಂದ ಕೆಲಸ ಮಾಡಿ: ಡಾ.ನಾಗಲಕ್ಷ್ಮಿ ಚೌಧರಿ

ಬೆಳಗಾವಿ: ‘ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ತಕ್ಷಣವೇ ಸ್ಪಂದಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ದೌರ್ಜನ್ಯಕ್ಕೆ ಸಂಬಂಧಿಸಿ ಸವದತ್ತಿ ತಾಲ್ಲೂಕಿನಲ್ಲಿ ಹೆಚ್ಚಿನ ದೂರು ಬಂದಿದ್ದವು. ಹಾಗಾಗಿ ಅಲ್ಲಿಗೆ ಭೇಟಿ …

Read More »

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು ಚನ್ನಮ್ಮನ ಕಿತ್ತೂರು: ತೆನೆಗಟ್ಟಿರುವ ಗೋವಿನ ಜೋಳ, ಎದೆ ಎತ್ತರ ಬೆಳೆದು ನಿಂತಿರುವ ಕಬ್ಬು ಬೆಳೆ ನಾಶ ಮಾಡಿ ಒಕ್ಕಲೆಬ್ಬಿಸಲು ಆಗಮಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ತಾಲ್ಲೂಕಿನ ದೇವಗಾಂವ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಲವು ಮಹಿಳೆಯರು ವಿಷದ ಬಾಟಲಿಗಳನ್ನೂ ಹಿಡಿದು ಕುಳಿತರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯಾಧಿಕಾರಿಗಳನ್ನು ಜಮೀನಿನ ಬಳಿ ತಡೆದರು. ಪೊಲೀಸ್ ಅಧಿಕಾರಿಗಳು ಸಂಧಾನಕ್ಕೆ ಯತ್ನಿಸಿದರು. ಬೆಳೆ …

Read More »

ಮಂಡ್ಯದಲ್ಲಿ ಸಿಡಿದೆದ್ದ ಕೈ ಕಾರ್ಯಕರ್ತರು; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ : ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಮಂಗಳವಾರ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮದ್ದೂರು ಪಟ್ಟಣದ ಕೊಲ್ಲಿ ವೃತ್ತದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ತಾಲೂಕು ಕಚೇರಿ ಮುಂಭಾಗ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ …

Read More »

ಸಚಿವ ಎಚ್‌ಡಿಕೆ ಮತ್ತು ಸಂಬಂಧಿಕರಿಂದ ಗೋಮಾಳ ಜಾಗ ಕಬಳಿಕೆ; ಹಿರೇಮಠ ಆರೋಪ

ಧಾರವಾಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಗೋಮಾಳದ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ ಆರೋಪಿಸಿದರು.   ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕುಮಾರಸ್ವಾಮಿ, ಅವರ ಚಿಕ್ಕಮ್ಮ ಸಾವಿತ್ರಮ್ಮ ಹಾಗೂ ಸಂಬಂಧಿಕ ಡಿ.ಸಿ.ತಮ್ಮಣ್ಣ ಕುಟುಂಬದವ‌ರು ಜಾಗವನ್ನು ಕಬಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಂದಾಯ ಇಲಾಖೆಯ ಉನ್ನತಧಿಕಾರಿ 2014 ಆಗಸ್ಟ್‌ …

Read More »