Breaking News

Uncategorized

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಹತ್ಯೆ – ಪತ್ನಿ, ಪ್ರಿಯಕನಿಗೆ ಗಲ್ಲು ಶಿಕ್ಷೆ

ಶಿವಮೊಗ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು  ಕೊಲೆ ಮಾಡಿದ್ದ ಪತ್ನಿ  ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ  4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಇಬ್ಬರಿಗೂ 14 ಲಕ್ಷ ರೂ. ದಂಡ ಹಾಗೂ ದೂರುದಾರರಿಗೆ ಪರಿಹಾರವಾಗಿ 5 ಲಕ್ಷ ರೂ. ನೀಡುವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪು ನೀಡಿದ್ದಾರೆ. ಭದ್ರಾವತಿಯ ಖಾಸಗಿ ನರ್ಸಿಂಗ್ …

Read More »

ವಿಜಯ್ – ತ್ರಿಷಾ ಮದುವೆಯಾಗಬೇಕು: ರಾಖಿ ಸಾವಂತ್

ದಳಪತಿ ವಿಜಯ್  ಮತ್ತು ನಟಿ ತ್ರಿಷಾ  ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆ ನಟಿ ರಾಖಿ ಸಾವಂತ್ , ಅವರಿಬ್ಬರು ಮದುವೆಯಾಗಬೇಕು ಎಂದು ಹೇಳುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್, ಇದೀಗ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ಸಮಯದಿಂದ ನಟಿ ತ್ರಿಷಾ ಮತ್ತು ವಿಜಯ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು …

Read More »

ಪಂಜಾಬ್ ಸಚಿವ ಸಂಜೀವ್ ಅರೋರಾ ಬಂಧಿಸಿದ ಇ.ಡಿ

ಚಂಡೀಗಢ: ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅವರನ್ನು ಇ.ಡಿ  ಬಂಧಿಸಿದೆ. ಅರೋರಾ ಮತ್ತು ಇತರ ಕೆಲವು ಸಚಿವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶನಿವಾರ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ  ಅವರನ್ನು ಬಂಧಿಸಿದೆ. ಈ ಕ್ರಮವನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.  62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕ. ಅರೋರಾ ಮತ್ತು ಅವರ ಸಂಸ್ಥೆಗಳಿಗೆ ಸಂಬಂಧಿಸಿದ ನಾಲ್ಕು …

Read More »

ಇಂದು ತಮಿಳುನಾಡು ಸಿಎಂ ಆಗಿ ವಿಜಯ್‌ ಪ್ರಮಾಣವಚನ ಸ್ವೀಕಾರ

ಚೆನ್ನೈ: ಸರ್ಕಾರ ರಚನೆಗೆ 5 ದಿನಗಳ ಬಹುಮತದ ಕಸರತ್ತಿನ ನಂತರ ತಮಿಳುನಾಡು ಸಿಎಂ  ಪಟ್ಟಾಭಿಷೇಕಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಭಾನುವಾರ ಬೆಳಗ್ಗೆ 10 ಗಂಟೆಗೆ ತಮಿಳುನಾಡು ಸಿಎಂ ಆಗಿ ಟಿವಿಕೆ ಮುಖ್ಯಸ್ಥ ವಿಜಯ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತದ ಬೆಂಬಲವನ್ನು ಸಾಬೀತುಪಡಿಸುವ ಪತ್ರಗಳನ್ನು ಸಲ್ಲಿಸಿದ ನಂತರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ವಿಜಯ್ ಅವರನ್ನು ಸರ್ಕಾರ ರಚಿಸಲು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು …

Read More »

ಸಚಿವ ಡಿ.ಸುಧಾಕರ್ ನಿಧನ

ಚಿತ್ರದುರ್ಗ: ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ  ಉಸ್ತುವಾರಿ ಸಚಿವ ಡಿ.ಸುಧಾಕರ್  ನಿಧನರಾಗಿದ್ದಾರೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಧಾಕರ್ ನಿಧನದ ಕುರಿತು ಕಿಮ್ಸ್ ಆಸ್ಪತ್ರೆ ಅಧಿಕೃತ ಘೋಷಣೆ ಮಾಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುಧಾಕರ್ ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಳಿಕ ಬಳಿಕ ಸ್ವಕ್ಷೇತ್ರ ಹಿರಿಯೂರು ನೆಹರು …

Read More »

ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ಮೌಲ್ಯದ ಆಭರಣ ದೇಣಿಗೆ ನೀಡಿದ ಉದ್ಯಮಿ

ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯ  ಆಂಜನೇಯನಿಗೆ ಉದ್ಯಮಿಯೊಬ್ಬರು 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ. ಎಎಂಆರ್ ಕನ್‌ಸ್ಟ್ರಕ್ಷನ್‌ ಕಂಪನಿಯ ಮಾಲೀಕ ಹಾಗೂ ಶಾಸಕ ಜನಾರ್ದನ ರೆಡ್ಡಿ  ಸ್ನೇಹಿತ ಮಹೇಶ ರೆಡ್ಡಿಯವರು ಅಂಜನಾದ್ರಿಯ ಆಂಜನೇಯನಿಗೆ 2.5 ಕೋಟಿ ರೂ. ಮೌಲ್ಯದ ಆಭರಣವನ್ನು ದೇಣಿಗೆ ನೀಡಿದ್ದಾರೆ.  ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳ. ಉದ್ಯಮಿ ಮಹೇಶ ಅವರು ದಂಪತಿ ಸಮೇತ ಅಂಜನಾದ್ರಿಗೆ ಆಗಮಿಸಿ, ಆಂಜನೇಯನಿಗೆ ಸಂಕಲ್ಪ ಪೂಜೆ, …

Read More »

ಅನುಮತಿ ಇಲ್ಲದೆ ಮದುವೆಯಲ್ಲಿ ಡಿಜೆ ಬಳಕೆ: ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳಗಾವಿ: ಮದುವೆ ಕಾರ್ಯಕ್ರಮಕ್ಕೆ ಡಿಜೆ ಬಳಸಲು ಅನುಮತಿ ನಿರಾಕರಿಸಿದರೂ ಕೂಡ ಡಿಜೆ ಬಳಸಿ ಶಬ್ಧ ಮಾಲಿನ್ಯ ಉಂಟು ಮಾಡಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದವರ ಮೇಲೆ ಬೆಳಗಾವಿಯ ತಿಲಕವಾಡಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಗೋಳದಲ್ಲಿ ಈ ಘಟನೆ ನಡೆದಿದೆ. ತಿಲಕವಾಡಿಯ ಅನಗೋಳ ಬಡಮಂಜಿನಗರದ ನಿವಾಸಿಯಾದ ಶುಭಂ ನಾರಾಯಣ ಬಡಮಂಜಿ ಎಂಬುವವರು ತಮ್ಮ ಮದುವೆ ಕಾರ್ಯಕ್ರಮದ ಅಂಗವಾಗಿ  ಮನೆಯ ಮುಂದೆ …

Read More »

ಭಾಷೆ ಮತಗಳನ್ನು ಮೀರಿ ಸಾಹಿತ್ಯ ಸೇವೆ ಸಾಗಲಿ: ಸವಿತಾ ಇನಾಮದಾರ

ಅಖಿಲ ಭಾರತ ಕವಯತ್ರಿಯರ ಬೆಳಗಾವಿ ಘಟಕದ 26 ನೇ ಸಂಸ್ಥಾಪನಾ ದಿನಾಚರಣೆ ಇದೇ ದಿನಾಂಕ 6 ರಂದು ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ವಿಶೇಷ ಅತಿಥಿ ಯಾಗಿ ದೆಹಲಿಯಿಂದ ಆಗಮಿಸಿದ್ದ ಸವಿತಾ ಇನಾಮದಾರ ಕನ್ನಡತಿ, ಲೇಖಕಿ, ಗಾಯಕಿ,ನಟಿ,ದುಭಾಷಿ ಇವರು ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರ ಸಾಂಘಿಕ ಶಕ್ತಿ ನೈಜ ಶಕ್ತಿ, ಸಾಹಿತ್ಯ ವು ಯುವ ಪೀಳಿಗೆಗೆ ಮಾದರಿಯಾಗಿದೆ ಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರು ಜಾತಿ,ಭಾಷೆ,ಮಾತು ಪಂಥಗಳು ಸಂಕೋಲೆಯಿಂದ ಹೊರಬರಬೇಕು.ದೇಹಕ್ಕೆ ಮುಪ್ಪು …

Read More »

ಒಣ ಕಸ, ಹಸಿ ವಿಂಗಡಿಸಿ ನೀಡದಿದ್ರೆ ದಂಡ: ಬೆಳಗಾವಿ ಪಾಲಿಕೆ ಎಚ್ಚರಿಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಮನೆಯಲ್ಲಿ/ವ್ಯಾಪಾರ-ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ದೈನಂದಿನ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ವೇಸ್ಟ್ (ಬಲ್ಬಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಿಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ಈ ನಾಲ್ಕು ಮಾದರಿಯಲ್ಲಿ ತ್ಯಾಜ್ಯವನ್ನು ವಿಂಗಡಿಸಿ ಪಾಲಿಕೆಯ ತ್ಯಾಜ್ಯ ಸಂಗ್ರಹಕಾರರಿಗೆ ನೀಡಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಈ ನೀಯಮ ಉಲ್ಲಂಘಿಸಿದಲ್ಲಿ ಕಾನೂನನ್ವಯ ದಂಡ …

Read More »

“ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ವಿಶೇಷ ಕಾರ್ಯಾಚರಣೆ: ಆಯುಧ ಸಮೇತ ಆರೋಪಿ ವಶಕ್ಕೆ

ಬೆಳಗಾವಿ: ಬೆಳಗಾವಿ ನಗರದಲ್ಲಿ ಇತ್ತಿಚೆಗೆ ಹೆಚ್ಚುತ್ತಿರುವ ಸ್ಟಾಬಿಂಗ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ನಗರದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ತಂಡದಿಂದ ಪರಿಶೀಲನೆ ಮುಂದುವರೆಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಂಡಿ-ಬುಡ್ಯಾನೂರ ರಸ್ತೆಯಲ್ಲಿ ಆರೋಪಿತನಾದ ಕಿರಣ ದುರ್ಗಪ್ಪ ಕಡ್ಯಾಗೋಳ (22) ಎಂಬಾಗ ಕಾನೂನು ಬಾಹಿರವಾಗಿ ಅರಣ್ಯ ಪ್ರದೇಶದ ಗಿಡಗಂಟಿಗಳಲ್ಲಿ ನಿಂತು ಕೈಯಲ್ಲಿ ಕಬ್ಬಿಣದ ಕುಡುಗೋಲ ಹಿಡಿದು ಜಳಪಳಿಸುತ್ತಿದ್ದ. ಈ …

Read More »