ಬೆಂಗಳೂರು: ಸಂಸತ್ತು ಮತ್ತು ನಿಮ್ಮ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿರಬೇಕು. ಜನರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಬೇಕು. ಯಾವುದೇ ಹೇಳಿಕೆಗಳು ಪಕ್ಷದ ಚೌಕಟ್ಟಿನಲ್ಲಿರಬೇಕೇ ಹೊರತು, ವೈಯಕ್ತಿಕವಾಗಿರಬಾರದು – ಇದು ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ನ ನೂತನ ಸಂಸದರಿಗೆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ನೀಡಿದ ಪಾಠ ಇದು. ಶುಕ್ರವಾರ ಖುದ್ದು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾದ ಬಳಿಕ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ಸೋತ ಮತ್ತು ಗೆದ್ದ ಅಭ್ಯರ್ಥಿಗಳೊಂದಿಗೆ ಫಲಿತಾಂಶದ ಪರಾಮರ್ಶೆ ನಡೆಸಿದರು. ಆಯ್ಕೆಯಾದವರಲ್ಲಿ …
Read More »D.K. Shivakumar ಸಿಬಿಐ ತನಿಖೆಗೆ ಸಹಕಾರ ನೀಡಲು ಸಿದ್ಧ
ಬೆಂಗಳೂರು: ರಾಜ್ಯ ಸರಕಾರದ ಅನುಮತಿ ಇಲ್ಲದಿದ್ದರೂ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ತನಿಖೆ ನಡೆಸಲು ಸಿಬಿಐಗೆ ಅವಕಾಶವಿದೆ. ಹಾಗಾಗಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆಯಿಲ್ಲ. ಆದರೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಅಕ್ರಮ ನಡೆದರೆ ಸರಕಾರದ ಅನುಮತಿ …
Read More »ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ ; ಆರೆಂಜ್ ಅಲರ್ಟ್ ಘೋಷಣೆ
ಮಂಗಳೂರು: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಜೂ. 8ರಿಂದ 11ರ ವರೆಗೆ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಜೂ. 2ರಂದು ಮುಂಗಾರು ಆಗಮಿಸಿತ್ತಾದರೂ ಬಳಿಕದ ದಿನಗಳಲ್ಲಿ ಭಾರೀ ಮಳೆ ಸುರಿಯಲಿಲ್ಲ. ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ …
Read More »TDP ಚಂದ್ರಬಾಬು ನಾಯ್ಡು ಕುಟುಂಬದ ಆಸ್ತಿ 5 ದಿನದಲ್ಲಿ 870 ಕೋ.ರೂ ಏರಿಕೆ!!
ಹೊಸದಿಲ್ಲಿ: ಆಂಧ್ರ ವಿಧಾನಸಭೆ, ಲೋಕಸಭೆ ಚುನಾವಣೆ ಯಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ (ಟಿಡಿಪಿ) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕುಟುಂ ಬದ ಆಸ್ತಿ ಮೌಲ್ಯವು 870 ಕೋಟಿ ರೂ. ಹೆಚ್ಚಳವಾಗಿದೆ. ನಾಯ್ಡು ಕುಟುಂಬಸ್ಥರು ಪ್ರವರ್ತಕರಾಗಿರುವ ಹಾಗೂ ಷೇರುಗಳನ್ನು ಹೊಂದಿರುವ ಹೆರಿಟೇಜ್ ಫುಡ್ಸ್ ಕಂಪೆನಿಯ ಷೇರು ಮೌಲ್ಯ ಜೂ.3ರಂದು 424 ರೂ.ಗಳಿತ್ತು. ಶುಕ್ರವಾರ ಅದು 661.25 ರೂ.ಗೆ ಏರಿದೆ. ಹೀಗಾಗಿ ಜೂ.3ರಂದು 3,700 ಕೋಟಿ ರೂ.ಗಳಿದ್ದ ಕಂಪೆನಿಯ ಮಾರುಕಟ್ಟೆ …
Read More »ನಿರೀಕ್ಷೆ ಹುಸಿಗೊಳಿಸಿದ ನಾಯಕರಿಗೆ ಚಾಟಿ ಬೀಸಿದ ರಾಹುಲ್ ಗಾಂಧಿ
ಬೆಂಗಳೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಿದ ಸಾಮಾನ್ಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆ ಹುಸಿಗೊಳಿಸಿದ ನಾಯಕರಿಗೆ ಚಾಟಿ ಬೀಸಿದ್ದಾರೆ. ಕರ್ನಾಟಕದಲ್ಲಿ ನಾವು ಈ ರೀತಿಯ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಇದು ನಮಗೆ ತುಂಬ ನಿರಾಸೆ ಉಂಟುಮಾಡಿದೆ. ಚುನಾವಣೆಗೆ ಮುನ್ನ ನೀವು ಕಟ್ಟಿಕೊಟ್ಟ ಚಿತ್ರಣವೇ ಬೇರೆ ಆಗಿತ್ತು. ಅದರಂತೆಯೇ ಲೆಕ್ಕ ಹಾಕಿದರೂ ಕನಿಷ್ಠ 17ರಿಂದ 18 ಸ್ಥಾನಗಳನ್ನು ಗೆದ್ದು ತರಬಹುದು ಅಂದುಕೊಂಡಿದ್ದೆವು. ಆದರೆ ಚುನಾವಣೆ ಅನಂತರ …
Read More »ವೃತ್ತಿರಂಗದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ
ಮೇಷ: ಆರೋಗ್ಯ ಸ್ಥಿರ. ಉದ್ಯೋಗಸ್ಥರು ವ್ಯವಹಾರಸ್ಥರಿಗೆ ವಿಪುಲ ಅವಕಾಶ. ಹಲವು ಕಾಲದಿಂದ ಕಾಡುತ್ತಿರುವ ಜಟಿಲ ಸಮಸ್ಯೆಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ದೂರ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ವೃಷಭ: ವೃತ್ತಿರಂಗದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಮಿಥುನ: ಗಣೇಶ, ದುರ್ಗೆಯರ ಆರಾಧನೆ ಯಿಂದ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ. ಹಿರಿಯರ …
Read More »ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ …
Read More »ಮೋದಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ ಪರ್ಯಾಯ ಸ್ಥಿರ ಸರ್ಕಾರ ರಚನೆ ಯತ್ನ ಮುಂದುವರೆಸಿದ ಇಂಡಿಯಾ ಬ್ಲಾಕ್!
ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ಡಿಎ) ಶುಕ್ರವಾರ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ, ಬಿಜೆಪಿಗೆ ಪರ್ಯಾಯವಾಗಿ ಸ್ಥಿರ ಸರ್ಕಾರ ರಚನೆಗೆ ಪ್ರತಿಪಕ್ಷಗಳ ಮೈತ್ರಿಕೂಟ ತನ್ನ ಪ್ರಯತ್ನ ಮುಂದುವರಿಸುವುದಾಗಿ ಹೇಳಿದೆ. ಈ ಸಂಬಂಧ ಟಿಎಂಸಿ ಸಂಸದರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಒ’ಬ್ರಿಯಾನ್ ಅವರು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತು ದೆಹಲಿಯಲ್ಲಿ ಸಮಾಜವಾದಿ ಪಕ್ಷದ(ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ …
Read More »ಕುಂದಗೋಳ : ಮೂರು ಶಾಲೆಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ
ಕುಂದಗೋಳ: ತಾಲ್ಲೂಕಿನ ಮೂರು ಶಾಲೆಗಳು ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ವತಿಯಿಂದ 2023-2024ನೇ ಸಾಲಿನ ‘ಪರಿಸರ ಮಿತ್ರ ಶಾಲಾ ಪ್ರಶಸ್ತಿ’ಗೆ ಭಾಜನವಾಗಿವೆ. ‘ಕಮಡೊಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಗೋಳ ಪಟ್ಟಣದ ಬಿ.ವೈ.ಪಾಟೀಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಈ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿವೆ. ಶಾಲೆಯಲ್ಲಿ ಇಕೋ ಕ್ಲಬ್ ರಚನೆ ಮಾಡುವುದು, ಶಾಲಾ ಆವರಣದಲ್ಲಿ ಸಸ್ಯ ಬೆಳೆಸುವಿಕೆಯಲ್ಲಿ …
Read More »ಸರಗಳ್ಳರ ಬಂಧನ: ಚಿನ್ನಾಭರಣ ವಶ
ರಾಯಬಾಗ: ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಬಂಧಿಸಿ, ₹2.25 ಲಕ್ಷ ಮೌಲ್ಯದ 3.75 ಗ್ರಾಂ ತೂಕದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಭೀಮ ನಗರ ನಿವಾಸಿಗಳಾದ ಸದ್ದಾಂ ಮೆಹಬೂಬ್ ಅವಟಿ (24), ಮಹಮ್ಮದ್ ಅಲಿ ಸಿರಾಜ ಡಾಂಗೆ (24) ಬಂಧಿತರು. ಮೇ28ರಂದು ಚಿಂಚಲಿ ರಸ್ತೆಯ ನಿವಾಸಿ ಸುನೀತಾ ಅಪ್ಪಾಸಾಬ ಪೂಜೇರಿ ಅವರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ …
Read More »