ಬೆಂಗಳೂರು: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಖುಷಿಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ಶಾಸಕರುಗಳಿಗೆ ನಿಗಮ ಮಂಡಳಿ ಗಿಫ್ಟ್ ಕೊಟ್ಟಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಹೌದು… ಸಿಎಂ ಯಡಿಯೂರಪ್ಪ ಭಿನ್ನಮತೀಯ ಶಾಸಕರನ್ನು ಓಲೈಸುವ ಸಂಬಂಧ 24 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು.ಈ ಮೂಲಕ ಭಿನ್ನಮತ ಶಮನದ ತಂತ್ರಗಾರಿಕೆ ಅನುಸರಿಸಿದ್ದರು. ಆದ್ರೆ, ನಿಗಮ ಮಂಡಳಿ ತಂತ್ರಗಾರಿಕೆ ವರ್ಕ್ ಔಟ್ ಆದಂತೆ ಕಾಣಿಸುತ್ತಿಲ್ಲ. ಆಕಾಂಕ್ಷಿಗಳಾಗಿದ್ದವರಿಗೆ ನಿಗಮ …
Read More »ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ
ಚೆನ್ನೈ: ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು …
Read More »ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?
ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ …
Read More »ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ
ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಹೆಂಡತಿ …
Read More »ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ
ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …
Read More »ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …
Read More »ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …
Read More »ಕೆ.ವಿ. ರಾಜೇಂದ್ರ ವರ್ಗಾವಣೆ…
ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್.ವಿ. ದರ್ಶನ್ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್ ಬ್ಯಾಚ್ನ ಅಧಿಕಾರಿಯಾಗಿದ್ದಾರೆ.
Read More »ಸೂಟ್ಕೇಸ್ ಒಳಗೆ ಮಹಿಳೆಯ ಮೃತದೇಹ ಪತ್ತೆ……..
ಲಕ್ನೋ: ಮಹಿಳೆಯೊಬ್ಬಳ ಮೃತ ದೇಹ ಸೂಟ್ಕೇಸ್ನೊಳಗೆ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇದ ಗಾಜಿಯಾಬಾದ್ನಲ್ಲಿ ನಡೆದಿದೆ. ಗಾಜಿಯಾಬಾದ್ನ ದಾಶ್ಮೇಶ್ ವಾಟಿಕಾ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸುಮಾರು 25 ರಿಂದ 30 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ಆದರೆ ಮೃತ ಮಹಿಳೆಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಸ್ಥಳೀಯರು ಸೂಟ್ಕೇಸ್ ನೋಡಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಮೃತದೇಹವನ್ನು …
Read More »ಖಾಸಗಿ ಆಸ್ಪತ್ರೆಗಳ ಕರ್ಮಕಾಂಡ ಬಿಚ್ಚಿಟ್ಟ ನಟಿ ಸುಧಾರಾಣಿ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸುಧಾರಾಣಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣನ ಮಗಳಿಗೆ ಚಿಕಿತ್ಸೆ ಕೊಡಿಸಲು ತಡರಾತ್ರಿ ಪರದಾಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಣ್ಣನ ಮಗಳನ್ನು ಕರೆತಂದ ಸುಧಾರಾಣಿ ಅವರಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪರಿಣಾಮ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಪ್ರಾಥಮಿಕ ಚಿಕಿತ್ಸೆಯನ್ನು …
Read More »
Laxmi News 24×7