Breaking News

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

Spread the love

ಮಂಡ್ಯ: ತಮಿಳುನಾಡಿಗೆ  ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ.

ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ತಗ್ಗಿದ ಹಿನ್ನೆಲೆ ನೀರಿನ ಪ್ರಮಾಣ ಸರಿದೂಗಿಸಲು ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಸರ್ಕಾರದ ಆದೇಶ ಹಾಗೂ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಳೆದ ರಾತ್ರಿಯಿಂದಲೇ ನೀರು ಬಿಡುಗಡೆ ಕಾರ್ಯ ಆರಂಭಿಸಿದ್ದಾರೆ. 

ಜಲಾಶಯದ 80ಕ್ಕೂ ಹೆಚ್ಚು ಕ್ರಸ್ಟ್‌ ಗೇಟ್‌ಗಳ ಮೂಲಕ ಸುಮಾರು 3,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳ ಮೂಲಗಳು ಮಾಹಿತಿ ನೀಡಿವೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ