Breaking News

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the love

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು ಮಾಡಿದೆ. ಬೇಕಂತಲೇ ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರು ಹೇಳಿ ಮಾಡಿರುವ ವೀಡಿಯೋ ವೈರಲ್ ಆಗಿದೆ. ಆದೇಶದಂತೆ ತನಿಖೆ ನಡೆಸಿದಾಗ, ಮೊಬೈಲ್‌ಗಳು ಪತ್ತೆಯಾಗಿದ್ದು, ಮೂವರು ಕೈದಿಗಳನ್ನು ಗುರುತಿಸಲಾಗಿದೆ. ಕರ್ತವ್ಯ ಲೋಪ ಎಸಗಿದ ವಾರ್ಡರ್‌ಗಳನ್ನು ಅಮಾನತುಗೊಳಿಸಿ, ಜೈಲರ್ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು!

ಬೆಂಗಳೂರು, ಮಾರ್ಚ್​ 29: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ, ಡ್ರಗ್ಸ್ ಸಾಗಾಟ ಇವೆಲ್ಲ ಹೊಸದೇನಲ್ಲ. ಆದರೆ ಇತ್ತೀಚಿಗೆ ಡಿಜಿಪಿ ಅಲೋಕ್ ಕುಮಾರ ಅವರ ಕಟ್ಟುನಿಟ್ಟಾದ ಕ್ರಮದಿಂದ ಈ ಎಲ್ಲಾ ಅವ್ಯವಹಾರಗಳಿಗೆ ಬ್ರೇಕ್ ಬೀಳುವ ನಿರೀಕ್ಷೆಯಿತ್ತು. ಆದರೆ ಈಗ ಮತ್ತೊಮ್ಮೆ ಜೈಲಿನೊಳಗೇ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.

ಡ್ರೈನೇಜ್​ನಲ್ಲಿ ಮೊಬೈಲ್ ಫೋನ್​ಗಳು ಪತ್ತೆ
ವಿಡಿಯೋದಲ್ಲಿ ಜೈಲಿನಲ್ಲಿ ಮೊಬೈಲ್, ಟಿವಿ ಹಾಗೂ ನೆಟ್‌ಫ್ಲಿಕ್ಸ್‌ನಂತಹ ಸೌಲಭ್ಯಗಳು ಲಭ್ಯವಿವೆ ಎಂದು ಹೇಳಲಾಗಿದ್ದು, ಡಿಜಿಪಿ ಅಲೋಕ್ ಕುಮಾರ್ ಅವರೇ ಮೊಬೈಲ್ ನೀಡಿದ್ದಾರೆಂದೂ ಕೈದಿಗಳು ಹೇಳಿದ್ದಾರೆ. ಈ ವಿಡಿಯೋ ನಿಜವಾಗಿಯೂ ಜೈಲಿನೊಳಗೇ ಚಿತ್ರೀಕರಿಸಲ್ಪಟ್ಟಿದೆಯೇ ಅಥವಾ ಬೇರೆಡೆ ಸೆಟಪ್ ಮಾಡಿ ಚಿತ್ರಿಸಿಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ವೈರಲ್ ಆದ ನಂತರ ಪೊಲೀಸರು ತಕ್ಷಣವೇ ಜೈಲಿನಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಕಾರಾಗೃಹದ 9ನೇ ಬ್ಯಾರಕ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ವೇಳೆ ಡ್ರೈನೇಜ್ ಮಾರ್ಗದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಹಾಲಿನ ಪ್ಯಾಕೆಟ್‌ಗಳಲ್ಲಿ ಸುತ್ತಿ ಅಡಗಿಸಿಡಲಾಗಿದ್ದ ಮೊಬೈಲ್​ಗಳನ್ನು ಅಧಿಕಾರಿಗಳು ಆರೋಪಿಗಳಿಂದಲೇ ಹೊರತೆಗೆಸಿದ್ದಾರೆ.

ಉದ್ದೇಶಪೂರ್ವಕವಾಗಿ ಡಿಜಿಪಿ ಹೆಸರು ಹೇಳಿ ವೀಡಿಯೋ ಮಾಡಿರುವ ಕೈದಿಗಳು
ತನಿಖೆಯಲ್ಲಿ ವಿಡಿಯೋ ಮಾಡಿದ್ದ ಕೈದಿಗಳನ್ನು ಪತ್ತೆಹಚ್ಚಲಾಗಿದೆ. ದರ್ಶನ್, ಅಭಿಷೇಕ್ ಮತ್ತು ಎಂಡ್ರೋಸ್ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇವರು ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ಬೇರೆ ಬ್ಯಾರಕ್‌ಗೆ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಅಸಮಾಧಾನದಿಂದ ಉದ್ದೇಶಪೂರ್ವಕವಾಗಿ ಡಿಜಿಪಿ ಅಲೋಕ್ ಕುಮಾರ್​ ಹೆಸರಿಗೆ ಚ್ಯುತಿ ತರಲು ವಿಡಿಯೋ ಮಾಡಿ ವೈರಲ್ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ. ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಕ್ವಾರಂಟೈನ್ ಸೆಲ್‌ಗೆ ಸ್ಥಳಾಂತರಿಸಲಾಗಿದೆ.

ಘಟನೆ ಬಳಿಕ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ಆದೇಶದ ಮೇರೆಗೆ ವಾರ್ಡರ್‌ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ ಎ. ಕಾಮತ್ ಮತ್ತು ಹನುಮಂತಪ್ಪ ಹಡಪದ್ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಜೈಲರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜೈಲಿನ ಕೆಲವು ಭಾಗಗಳಲ್ಲಿ ಏರ್‌ಟೆಲ್ ಸಿಗ್ನಲ್ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಕಟ್ಟು ನಿಟ್ಟಾಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ