Breaking News
Home / Uncategorized / ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ

Spread the love

ಚಿಕ್ಕೋಡಿ: ಇಂದು ಬೆಳಿಗ್ಗೆ 07 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿ‌ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು, ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು.

ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲಗೊಳ್ಳುತ್ತಿದ್ದಂತೆ ಇತ್ತ ಅಥಣಿ ಮತ್ತು ಕಾಗವಾಡ ತಾಲೂಕಿನ ಅವರಕೋಡ,

ಕೋಕಟನೂರ,ಕಾತ್ರಾಳ,ಐನಾಪೂರ,ಕೃಷ್ಣಾ ಕಿತ್ತೂರ,ಸುಟ್ಟಟ್ಟಿ,ಮೊಳವಾಡ,ಶೇಗುಣಸಿ ಮೊದಲಾದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡ ವದಂತಿ ಹಬ್ಬಿದ್ದು ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಇದು ಕತ್ತೆ ಕಿರುಬದ ಹೆಜ್ಜೆ ಎಂದು ಹೇಳಿದ್ದರು.

 

ಸದ್ಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿಯವರ ಫಾರ್ಮಹೌಸ್ ನಲ್ಲಿ ಪತ್ತೆಯಾದ ಕತ್ತೆ ಕಿರುಬವನ್ನು ಸತತವಾಗಿ ಒಂದುವರೆ ಗಂಟೆ ಯಶಸ್ವಿ ಕಾರ್ಯಾಚರಣೆ ಮಾಡಿ ಹಿಡಿದು ಸಾರ್ವಜನಿಕರ ಆತಂಕ ದೂರ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ ಅವರು ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಎಲ್ಲಿಯೂ ಚಿರತೆ ಬಂದಿಲ್ಲ ಇದು ಕತ್ತೆ ಕಿರುಬದ ಹೆಜ್ಜೆ ಗುರುತುಗಳಾಗಿದ್ದು ಒಂದು ವೇಳೆ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಭಯಬೀತರಾಗದೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವಂತೆ ಕೋರಿದ್ದಾರೆ.


Spread the love

About Laxminews 24x7

Check Also

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Spread the love ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ