Breaking News

ಕಾರಿನಡಿ ಸಿಲುಕಿ ಮಗು ಸಾವು

Spread the love

ಖಾನಾಪುರ: ಕಾರು ಹಿಂತೆಗೆದುಕೊಳ್ಳುತ್ತಿದ್ದಾಗ ಕಾರಿನಡಿ ಸಿಲುಕಿ ಮಗು ಸಾವನ್ನಪ್ಪಿದ ಘಟನೆ ಖಾಅನಾಅಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ತನ್ವೀರ ಅಕ್ಬರ ಕಕ್ಕೇರಿ ಅವರ 19 ತಿಂಗಳ ಮಗು ತೌಹೀದ್ ಮೃತ ದುರ್ದೈವಿ. ತನ್ವೀರ ಅವರು ತಮ್ಮ ಮನೆಗೆ ದಿನಸಿ ತರುವಂತೆ ತಮ್ಮ ಸಹೋದರ ಮನ್ಸೂರ್ ಗೆ ಹೇಳಿದ್ದರಿಂದ ಆತ ಮನೆ ಮುಂದೆ‌ ನಿಲ್ಲಿಸಿದ್ದ ಸ್ವಿಫ್ಟ್ ಕಾರನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮನೆಯ ಒಳಗಡೆಯಿಂದ ಅಂಬೆಗಾಲು ಹಾಕುತ್ತ ಹೊರಬಂದ ಮಗು ಕಾರಿನಡಿ ಸಿಲುಕಿ ಸಾಅವನ್ನಪ್ಪಿದೆ.

ಚಾಲಕ ಮಗುವಿನತ್ತ ಲಕ್ಷ್ಯ ಕೊಡದಿದ್ದರಿಂದ ಮಗುವಿನ ತಲೆಯ ಮೇಲೆ‌‌ ಕಾರಿನ ಚಕ್ರಗಳು ಹಾಯ್ದಿವೆ. ಘಟನೆಯಲ್ಲಿ ಗಾಯಗೊಂಡ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಮಗು ಮೃತಪಟ್ಟಿದೆ‌. ನಂದಗಡ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್‌ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ

Spread the loveರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ