Breaking News

ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

Spread the love

ಮಂಗಳೂರು: ಲಾಕ್‍ಡೌನ್ ಹಿನ್ನೆಲೆ ಜನದಟ್ಟಣೆ ಕಡಿಮೆಯಾಗಿರುವುದರಿಂದ ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ನಂತರ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಘಟನೆ ನಡೆದಿದ್ದು, ಮಜಿ ಮೋನಪ್ಪ ಅವರ ಜಮೀನಿನಲ್ಲಿರುವ ಸುಮಾರು 6 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಆತಂಕ ಸೃಷ್ಟಿಸಿತ್ತು. ಬಾವಿಯಿಂದ ಮೇಲಕ್ಕೆ ಬರಲು ಸಾಧ್ಯವಾಗದೆ ಹೊರಳಾಡುತ್ತಿತ್ತು. ರಾತ್ರಿ ವೇಳೆ ಕಾಣದೆ ಚಿರತೆ ಬಾವಿಯಲ್ಲಿ ಬಿದ್ದಿದ್ದು, ಬೆಳಗ್ಗೆ ಹೊಲದ ಮಾಲೀಕರ ಗಮನಕ್ಕೆ ಬಂದಿದೆ.
ಬಳಿಕ ಮನೆಯವರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ, ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಪೋಲೀಸರು ಜಂಟಿ ಕಾರ್ಯಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಿದ್ದಾರೆ. ಸುಮಾರು ಎರಡು ವರ್ಷ ಪ್ರಾಯದ ಮರಿ ಚಿರತೆ ಇದಾಗಿದ್ದು, ಚಿರತೆಯನ್ನು ರಕ್ಷಿಸಿದ ಬಳಿಕ ಸುರಕ್ಷಿತವಾಗಿ ಪಶ್ಚಿಮಘಟ್ಟದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ