Breaking News

ರಾಜ್ಯದಲ್ಲೇ ಅತ್ಯುತ್ತಮ ಕೋವಿಡ್ ಪ್ರಯೋಗಾಲಯ ಚಾಮರಾಜನಗರದಲ್ಲಿ ಸ್ಥಾಪನೆ: ಸುರೇಶ್ ಕುಮಾರ್

Spread the love

ಚಾಮರಾಜನಗರ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 1.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್-19 ಪರೀಕ್ಷಾ ಪಿಸಿಆರ್ ಪ್ರಯೋಗಾಲಯ ರಾಜ್ಯದಲ್ಲಿಯೇ ಅತ್ಯುತ್ತಮ ಪ್ರಯೋಗಾಲಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಕೋವಿಡ್-19 ಪಿಸಿಆರ್ ಪ್ರಯೋಗಾಲಯಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ. ಐಸಿಎಂಆರ್ ನಿಯಮಾವಳಿಯ ಅನುಗುಣವಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಒಂದು ಬಾರಿಗೆ ಸುಮಾರು 96 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ವಿರುವ ಈ ಪಿಸಿಆರ್ ಪ್ರಯೋಗಾಲಯದಲ್ಲಿ ಒಂದು ದಿನಕ್ಕೆ 300 ಮಾದರಿಗಳನ್ನು ಪರೀಕ್ಷಿಸಬಹುದಾಗಿದ್ದು, 6 ರಿಂದ 8 ಗಂಟೆಯ ಒಳಗೆ ಅವುಗಳ ಫಲಿತಾಂಶ ಹೊರಬಲಿದೆ. ಇದು ಸಂಪೂರ್ಣವಾಗಿ ಸ್ವಯಂ ಚಾಲಿತ ಯಂತ್ರವಾಗಿದ್ದು, ಇದಕ್ಕಾಗಿ ಹೆಚ್ಚಿನ ಸಿಬ್ಬಂದಿಯೂ ಬೇಕಿಲ್ಲ ಎಂದು ಮಾಹಿತಿ ನೀಡಿದರು.

ಕೊವಿಡ್-19 ಸಮಯದಲ್ಲಿ ಕೊರೊನಾ ವೈರಸ್ ಸಂಬಂಧಿತ ಪರೀಕ್ಷೆಗಳನ್ನು ಮಾಡಲು ಅನುಕೂಲವಾದರೆ, ಕೋವಿಡ್-19 ನಂತರದ ದಿನಗಳಲ್ಲಿ ಅನ್ಯ ಪರೀಕ್ಷೆಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಲೋಕಾರ್ಪಣೆ ಮಾಡಲಾಗಿದೆ ಎಂದ ಅವರು, ಪಿಸಿಆರ್ ಟೆಸ್ಟ್ ಯಾವುದೇ ರೋಗವನ್ನು ಹಾಗೂ ಕಾಯಿಲೆಯನ್ನು ನಿಖರವಾಗಿ ಪತ್ತೆ ಹಚ್ಚುವ ಕಾರ್ಯವನ್ನು ಮಾಡಲಿದೆ ಎಂದರು.


Spread the love

About Laxminews 24x7

Check Also

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Spread the loveಚಾಮರಾಜನಗರ: ಕೊಳ್ಳೇಗಾಲದಲ್ಲಿ  ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ  ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ