Breaking News

ಲಾಕ್‍ಡೌನ್ ಎಫೆಕ್ಟ್- ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟ

Spread the love

ಚಾಮರಾಜನಗರ: ಕೊರೊನಾ ಲಾಕ್ ಡೌನ್ ಎಪೆಕ್ಟ್ ನಿಂದ ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೀರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ದೇವಾಲಯ ಕಳೆದ ಎರಡು ತಿಂಗಳಿಂದ ಮುಚ್ಚಿದೆ. ಹೀಗಾಗಿ ಭಕ್ತರಿಲ್ಲದೆ ಮಹದೇಶ್ವರನ ಆದಾಯದಲ್ಲಿ ಭಾರೀ ನಷ್ಟವಾಗಿದೆ.

ಹುಂಡಿಯೊಂದರಲ್ಲೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಆದಾಯವಿಲ್ಲದಿದ್ದರೂ 200 ಮಂದಿ ಖಾಯಂ ನೌಕರರು ಸೇರಿದಂತೆ 475ಕ್ಕೂ ಹೆಚ್ಚು ನೌಕರರಿಗೆ ವೇತನ ನೀಡಲಾಗುತ್ತಿದೆ. ಯಾರಿಗೂ ಕಡಿತ ಮಾಡದೆ ವೇತನ ಪಾವತಿ ಮಾಡಲಾಗುತ್ತಿದೆ. ವೇತನ, ವಿದ್ಯುತ್ ಬಿಲ್, ಸ್ವಚ್ಚತೆ, ಸೇರಿದಂತೆ ಪ್ರತಿ ತಿಂಗಳು 2 ಕೋಟಿಗೂ ಹೆಚ್ಚು ಖರ್ಚು ವೆಚ್ಚವಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಮೀಸಲಿಟ್ಟಿದ್ದ ಹಣದಲ್ಲಿ ಪ್ರಾಧಿಕಾರ ಖರ್ಚು ವೆಚ್ಚ ಸರಿದೂಗಿಸುತ್ತಿದೆ.

ಒಟ್ಟಿನಲ್ಲಿ ಲಾಕ್ ಡೌನ್ ಮುಂದುವರಿದರೆ ಮಾದಪ್ಪ ಮತ್ತಷ್ಟು ನಷ್ಟ ಅನುಭವಿಸಲಿದ್ದಾನೆ. ದೇವಸ್ಥಾನ ಓಪನ್ ಆಗದಿದ್ದರೆ ಮುಂದೆ ನೌಕರರ ವೇತನಕ್ಕೂ ಕತ್ತರಿ ಬೀಳಲಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ