Breaking News

ಐನಾಪುರ: ನೇಣು ಹಾಕಿಕೊಂಡು ಅಕ್ಕ, ತಂಗಿ ಆತ್ಮಹತ್ಯೆ

Spread the love

ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, ನಾಲ್ಕನೆಯವಳಾದ ಐಶ್ವರ್ಯ ಇನ್ನೂ
ಕುವರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 

 

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಬ್‍ಇನ್‍ಸ್ಪೆಕ್ಟರ್ ರಾಜಶೇಖರ ರಾಠೋಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ