Breaking News

ಮರಕ್ಕೆ ಕಾರು ಡಿಕ್ಕಿ – ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವು

Spread the love

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ  ಜಿಲ್ಲೆ ಜಗಳೂರು ತಾಲೂಕಿನ ಮುಸ್ಟೂರು- ಕಡಬನಕಟ್ಟೆ ಗ್ರಾಮದ ಮಧ್ಯೆ ನಡೆದಿದೆ.

ರಘುನಾಥ್ (45) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸಿಪಿಐ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿಪಿಐ ರಘುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಘುನಾಥ್ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಜಗಳೂರು ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Spread the loveದಾವಣಗೆರೆ, ಬಾಗಲಕೋಟೆ: ದಾವಣಗೆರೆ ದಕ್ಷಿಣ  ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ  ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು ಗುರುವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ