ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಭಯ ಪಾಟೀಲ, ಶ್ರೀ ಅನಿಲ ಬೆನಕೆ, ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ ಆಯುಕ್ತರಾದ ಶ್ರೀ ಲೋಕೇಶ ಕುಮಾರ್, ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ ಹಾಗೂ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು