Breaking News

ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು,,,,,,,,,,

Spread the love

ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.

ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ


Spread the love

About Laxminews 24x7

Check Also

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Spread the loveಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ