Breaking News
Home / ಜಿಲ್ಲೆ / ಚಿಕ್ಕ ಬಳ್ಳಾಪುರ / ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ, ಪತಿ ಮೇಲೆ ಹಲ್ಲೆ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯಿಂದ ಆಶಾ ಕಾರ್ಯಕರ್ತೆ, ಪತಿ ಮೇಲೆ ಹಲ್ಲೆ

Spread the love

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪೂಲಕುಂಟ್ಲಹಳ್ಳಿಯಲ್ಲಿ ನಡೆದಿದೆ.

ಗಂಗಹಳ್ಳಿ ಗ್ರಾಮದ ಆಶಾಕಾರ್ಯಕರ್ತೆ ರವಣಮ್ಮ ಹಾಗೂ ಪತಿ ನರಸಿಂಹಮೂರ್ತಿ ಹಲ್ಲೆಗೊಳಗಾದವರು. ಸರ್ವೆ ಕಾರ್ಯ ಮುಗಿಸಿದ್ದ ಆಶಾಕಾರ್ಯಕರ್ತೆ ತನ್ನ ಸ್ನೇಹಿತೆ ಪೂಲಕುಂಟ್ಲಹಳ್ಳಿ ಗ್ರಾಮದ ಗಿರಿಜಮ್ಮ ಮನೆಗೆ ಬಂದಿದ್ರು. ಇತ್ತ ಪತ್ನಿ ರವಣಮ್ಮರನ್ನು ಕರೆದೊಯ್ಯಲು ಪತಿ ನರಸಿಂಹಮೂರ್ತಿ ಪೂಲಕುಂಟ್ಲಹಳ್ಳಿಗೆ ಬಂದಿದ್ದಾರೆ.

ಈ ಸಂದರ್ಭದಲ್ಲಿ ಮದ್ಯ ಸೇವಿಸಿ ಅಮಲಿನಲ್ಲಿದ್ದ ಇದೇ ಗ್ರಾಮದ ಕೇಶವ ಎಂಬಾತ ಕ್ಷುಲ್ಲಕ ಕಾರಣಕ್ಕೆ ನರಸಿಂಹಮೂರ್ತಿ ಜೊತೆ ಗಲಾಟೆ ಮಾಡಿದ್ದಾನೆ. ಅಲ್ಲದೆ ಕಲ್ಲಿನಿಂದ ತಲೆಗೆ ಹೊಡೆದಿದ್ದು ರಕ್ತಸ್ರಾವವಾಗಿದೆ. ವಿಷಯ ತಿಳಿದು ಗಂಡನ ರಕ್ಷಣೆಗೆ ಬಂದ ಆಶಾಕಾರ್ಯಕರ್ತೆ ರವಣಮ್ಮನನ್ನು ಕೂಡ ತಳ್ಳಾಡಿ ನೂಕಾಡಿ ಹಲ್ಲೆ ನಡೆಸಿದ್ದಾರೆ ಅಂತ ದೂರು ನೀಡಲಾಗಿದೆ.

ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಹಲ್ಲೆಗೊಳಗಾದವರು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ