Breaking News

ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.

Spread the love

ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್‌ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾ‌ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮಳೆಗೆ ಕೆಲಕಡೆ ರಸ್ತೆಗಳು ಮುಳುಗಿವೆ.

ವಿಷಯುಕ್ತ ಇಂಜೆಕ್ಷನ್ ಕೊಟ್ಟು ನನ್ನನ್ನು ಸಾಯಿಸಿಬೇಡಿ:
ಕಣ್ಮುಂದೆ ಗಂಡ-ಮಗ ಮೃತಪಟ್ಟ ಹಿನ್ನೆಲೆಯಲ್ಲಿ ಗಾಯಾಳು ಮುನಿರಾಜಮ್ಮಗೆ ಮಾನಸಿಕ ಅಘಾತವಾಗಿದೆ.

ವಿಷಯುಕ್ತ ಇಂಜೆಕ್ಷನ್ ಕೊಟ್ಟು ನನ್ನನ್ನು ಸಾಯಿಸಿಬೇಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮುನಿರಾಜಮ್ಮ ತನ್ನ ಗಂಡ-ಮಗನನ್ನು ಕಳೆದುಕೊಂಡ ನೋವು ತಾಳಲಾಗದೆ ಗೋಳಾಡಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ