Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ

ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ

Spread the love

ಬೆಳಗಾವಿ/ಚಿಕ್ಕೋಡಿ: ವೈದ್ಯ ಓರ್ವರಿಗೆ ಕೊರೊನಾ ರೋಗ ಬಂದಿದೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಎಲ್ಲ ವೈದ್ಯರು ಪತ್ರಿಕಾಗೋಷ್ಠಿ ನಡೆಸಿ ನಮ್ಮಲ್ಲಿ ಯಾರಿಗೂ ಕೊರೊನಾ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಐಎಂಎ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯರು, ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ. ಈ ಬಗ್ಗೆ ಯಾರು ಸುಳ್ಳು ಸುದ್ದಿ ಹರಡದಂತೆ ವೈದ್ಯರು ಮನವಿ ಮಾಡಿಕೊಂಡರು.

ಕೊರೊನಾಗೆ ಯಾರು ಹೆದರುವ ಅವಶ್ಯಕೆತೆಯಿಲ್ಲ. ಕೊರೊನಾ ಹೇಗೆ ಔಷಧಿ ಕಂಡು ಹಿಡಿದಿಲ್ಲವೋ ಅದೇ ರೀತಿ ಡೆಂಗ್ಯೂ, ಎಚ್1ಎನ್1 ಸೇರಿದಂತೆ ಅನೇಕ ರೋಗಗಳಿಗೆ ಇನ್ನೂ ಔಷಧಿ ಕಂಡು ಹಿಡಿಯಲು ಆಗಿಲ್ಲ. ಕೇವಲ ಸುಪ್ಪೋರ್ಟಿವ್ ಔಷಧಿ ನೀಡಿ ಈ ರೋಗಗಳ ರೋಗಿಗಳನ್ನು ಗುಣಮುಖರಾಗುತ್ತಾರೆ. ಅದೇ ರೀತಿ ಕೊರೊನಾಗೂ ಔಷಧಿ ನೀಡುವುದರಿಂದ ಶೇ. 97 ರೋಗಿಗಳು ಗುಣಮುಖರಾಗುತ್ತಾರೆ. ಕೊರೊನಾ ರೋಗಕ್ಕೂ ಈ ಮಟ್ಟಿಗೆ ಹೆದರುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಜನರಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಚಿಕ್ಕೋಡಿ ತಾಲೂಕಾ ಆರೋಗ್ಯಾಧಿಕಾರಿ ಡಾ. ವಿ.ಬಿ ಶಿಂಧೆ, ಖ್ಯಾತ ವೈದ್ಯ ಡಾ. ಶ್ರೀಧರ ಕುಲಕರ್ಣಿ, ಡಾ. ರೋಹಿಣಿ ಕುಲ್ಕರ್ಣಿ, ಡಾ. ಪದ್ಮರಾಜ ಪಾಟೀಲ, ಡಾ. ವಿ.ಬಿ ನೂಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ