Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸರಕಾರಕ್ಕೆ ಮನವಿ………….

ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸರಕಾರಕ್ಕೆ ಮನವಿ………….

Spread the love

ಚಿಕ್ಕೋಡಿ:  ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆಗಾಗಿ ಸುಪ್ರಿಂಕೋರ್ಟ್ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರಕಾರ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ನೀಡುವಂತೆ ಒತ್ತಾಯಿಸಿ ಮಂಗಳವಾರ ಮೂಲ ಪರಿಶಿಷ್ಟ ಜಾತಿಗಳ ಒಕ್ಕೂಟದ ವತಿಯಿಂದ ಉಪವಿಭಾಗಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.

ಲಂಬಾಣಿ(ಬಂಜಾರ), ಭೋವಿ, ಕೊರಚ ಕೊರಮ ಮುಂತಾದ ಸಮುದಾಯದ ಜನರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯಲು ಸುಪ್ರಿಂಕೋರ್ಟ್ ಆದೇಶ ಮಾಡಿರುತ್ತದೆ. ಆದ್ದರಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಸುಪ್ರಿಂಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು.ಸುಪ್ರಿಂಕೋರ್ಟಿಗೆ ಅನುಪಾಲನ ವರದಿ ನೀಡುವ ಮೂಲಕ ನಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಅಶೋಕ ಭಂಡಾರಕರ, ಅರವಿಂದ ಘಟ್ಟಿ, ಸುಭಾಷ ಯರನಾಳೆ, ಪ್ರಲ್ಹಾದ ಕದಮ, ಭರತ ನಿರ್ಮಳೆ, ತುಕಾರಾಮ ಭಂಡಾರೆ, ರೇವಪ್ಪ ತಳವಾರ, ಬಸವರಾಜ ಡಾಕೆ, ಶೇಖರ ಪ್ರಭಾತ, ಸುದರ್ಶನ ತಮ್ಮನ್ನವರ, ಎಂ.ಆರ್.ಯಾಧವ, ತುಕಾರಮ ಭಂಡಾರೆ, ಮಹಾವೀರ ಮೋಹಿತೆ, ರಾಜು ಹಕ್ಯಾಗೋಳ, ಅಪ್ಪಾಸಾಬ ಬ್ಯಾಳಿ,ತಾನಾಜಿ ಶಿಂಧೆ, ದಿಲಿಪ ಕಾಂಬಳೆ, ಜಿ.ಎಸ್.ಜ್ಯೋತಿ, ವಿಕ್ರಮ ಶಿಂಗಾಡೆ, ನಿರಂಜನ ಕಾಂಬಳೆ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕುಗ ನೊಳಿ ಚೆಕ್ ಪೋಸ್ಟ್ ನಲ್ಲಿ 14ಲಕ್ಷ್ ರೂಪಾಯಿ ನಗ ದು ಪ ತ್ತೆ

Spread the loveಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ದಿನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ