Breaking News

ರಾಯಬಾಗ ,ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆಅಬಕಾರಿ ಇಲಾಖೆ ದಾಳಿ….

Spread the love

ಚಿಕ್ಕೋಡಿ : ರಾಯಬಾಗ ಹಾಗೂ ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದ್ವಿಚಕ್ರದ ವಾಹನ, ಟಾಟಾ ಇಂಡಿಗೋ ಕಾರ್,ಕಳ್ಳಭಟ್ಟಿ ಸರಾಯಿ ಸೇರಿ ಸುಮಾರು 4 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಗುರುವಾರ ವಶ ಪಡಿಸಿಕೊಂಡಿದ್ದಾರೆ.

ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್ ಹಿರೇಮಠರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತ ಬಸವರಾಜ್ ಸಂದಿಗವಾಡ್, ಅಬಕಾರಿ ಇನ್ಸ್ಪೆಕ್ಟರ್ ಬಸವರಾಜ್ ಕರಾಮಣ್ಣವರ್ ಇವರು ಗ್ರಾಹಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಒಂದು ದ್ವಿಚಕ್ರ ವಾಹನ, ೧೦ ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ಟಾಟಾ ಇಂಡಿಗೋ ಕಾರ್ ಹಾಗೂ ೧೧೬ ಬಾಟ್ಲ ದೇಸಿ ಸರಾಯಿ ವಶಕ್ಕೆ ಪಡೆದಿದ್ದಾರೆ. ಸಬ್ ಇನ್ಸ್ಪೆಕ್ಟರ್ ಗಳಾದ ಸುನಿಲಕುಮಾರ್, ಪ್ರವೀಣ್ ರಂಗಸುಬೆ, ಸಿಬ್ಬಂದಿಗಳಾದ ಹಸನ್ ಸಾಬ್, ವಿಜಯ್ ,ಅಂಬಾರಿ, ಸೈಯದ್,ಮಂಜುನಾಥ್ ದಾಳಿಯಲ್ಲಿ ಬಾಗವಹಿಸಿದ್ದರು.


Spread the love

About Laxminews 24x7

Check Also

ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.

Spread the loveಬೆಳಗಾವಿ:  ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು. ಬೆಳಗಾವಿಯ ಪೀರಣವಾಡಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ