Breaking News
Home / ಜಿಲ್ಲೆ / ಚಿಕ್ಕ ಮಂಗಳೂರು / ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

Spread the love

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ.

ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ.

ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ ದೇವಾಲಯ ಸುತ್ತಮುತ್ತಲೂ ವರುಣನ ಅಬ್ಬರ ಮುಂದುವರಿದಿದೆ. ಕೊಪ್ಪ ತಾಲೂಕಿನ ತೆಂಗಿನಮನೆ, ಕಲ್ಕೆರೆ, ಜಯಪುರ ಸುತ್ತವೂ ಧಾರಾಕಾರ ಮಳೆಯಾಗಿದೆ. ಶೃಂಗೇರಿಯ ಮೆಣಸೆ ಬಳಿ ಭಾರೀ ಮಳೆ ಗಾಳಿಗೆ ಮರ ಧರೆಗುರುಳಿದೆ. ಭಾರೀ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದಿದ್ದು, ಲೈಟ್ ಕಂಬ ಕೂಡ ಮುರಿದು ಧರೆಗುರುಳಿದೆ.

ದಿನಬಿಟ್ಟು ದಿನ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿಗರು ಕಂಗಾಲಾಗಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ನಮ್ಮ ಬದುಕು ನೀರಲ್ಲಿ ತೊಯ್ದು ಹೋಗುತ್ತೇನೋ ಎಂದು ಆತಂಕಕ್ಕೀಡಾಗಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ