Breaking News

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

Spread the love

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.

 

ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ ರಾಜ್‌ಕುಮಾರ್‌ ಮತ್ತು ಧಿರೇನ್‌ ರಾಮ್‌ ಕುಮಾರ್ ಅವರು ಮಾತನಾಡಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರವಾಗಿ ಮಾತನಾಡಿದರು. ಬಳಿಕ ಸಿಎಂ ಬೊಮ್ಮಾಯಿ ಅವರು ರಾಜ್‌ ಕುಟುಂಬದವರು ಸಿದ್ದಪಡಿಸಿದ ಪಿಪಿಟಿ ಯನ್ನು ವೀಕ್ಷಣೆ ಮಾಡಿದರು. ಪಿಡಬ್ಯ್ಲೂಡಿ ಇಲಾಖೆಯಿಂದ ಯೋಜನೆಯ ಅಂದಾಜು ಮೊತ್ತವನ್ನು ತರಿಸಲು ಸೂಚನೆ ನೀಡಿದರು.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ