Breaking News

ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್​ಗೆ ಬಂದ್ರು ಸಿಎಂ ಬೊಮ್ಮಾಯಿ..!

Spread the love

ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್​​ ಆರಂಭಿಸಿದ್ದಾರೆ.

ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು ವೀಕ್ಷಿಸುತ್ತಿದ್ದಾರೆ.

ಸಿಟಿ ರೌಂಡ್ಸ್​​ಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ.. ಮಳೆಯಿಂದ ಹಾನಿಗೊಳಗಾದ ಸ್ಥಳಗಳ ವೀಕ್ಷಣೆಗೆ ತೆರಳುತ್ತಿದ್ದೇನೆ. ಆ ಬಳಿಕ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಲು ಸೂಚನೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲೂ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

 

 


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ