Breaking News

ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ

Spread the love

ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ  ರವಿ  ಚನ್ನಣ್ಣನವರ್ ಅವರ ವಿರುದ್ಧ ನಾನು   ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು  ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
 ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಅವರು ಸಾರಿಗೆ  ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿದ್ದು ನನ್ನ ಗಮನಕ್ಕೆನೂ ಬಂದಿಲ್ಲ ಮತ್ತು ಈ ಬಗ್ಗೆ ಯಾವುದೇ ಸಂಘಟನೆಗಳು ನನ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿಲ್ಲ.
 ಹೀಗಿರುವಾಗ ವಿನಾಕಾರಣ ಅಧಿಕಾರಿಗಳ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡುವಂಥ  ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Spread the love

About Laxminews 24x7

Check Also

ಬ್ರೇಕ್ ಫೆಲ್ಯೂರ್ ಆಗಿ ಬೈಕ್ – ಕಾರಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್

Spread the loveಬೆಂಗಳೂರು : ಬ್ರೇಕ್ ಫೆಲ್ಯೂರ್ ಆಗಿ ಶಾಲಾ ಬಸ್​ವೊಂದು ನಿಯಂತ್ರಣ ತಪ್ಪಿ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ