ಬೆಂಗಳೂರು: ಡಿಜಿಪಿ ರಾಮಚಂದ್ರರಾವ್ ಅಮಾನತು ವಾಪಸ್ ನಿರ್ಧಾರ ಸಿಎಂ ಸಿದ್ದರಾಮಯ್ಯನವರದ್ದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಚಂದ್ರರಾವ್ ಅವರ ಅಮಾನತನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ವಾಪಸ್ ಪಡೆದಿದೆ. ರಾಮಚಂದ್ರರಾವ್ ಈ ತಿಂಗಳ ಕೊನೆಗೆ ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಅವರ ಅನುಮತಿ ಪಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಅಮಾನತು ವಾಪಸ್ ಪಡೆದಿದ್ದು ಸರಿ ತಪ್ಪು ಎಂದು ನಾನು ಹೇಳಲು ಬರುವುದಿಲ್ಲ. ಅದು ಡಿಪಿಆರ್ ಮತ್ತು ಮುಖ್ಯಮಂತ್ರಿಗಳಿಗೆ ಬರುತ್ತದೆ. ಅವರು ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.
Laxmi News 24×7