Breaking News

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

Spread the love

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ.

ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ.

ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ ನೀರಿಲ್ಲದೆ ಸೋಂಕಿತರ ಗೋಳು ನೋಡೋರೆ ಇಲ್ಲ. ಅಲ್ಲದೆ ಶೌಚಾಲಯಗಳು ಸಹ ಬಳಸುವುದಕ್ಕೆ ಯೋಗ್ಯವಾಗಿಲ್ಲ. ವೈದ್ಯರು, ಮೇಲಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ನೀರಿಗಾಗಿ ಹೊರಗಡೆ ಹೋಗುವುದಕ್ಕೂ ಆಗದೆ ಸೋಂಕಿತರು ದಂಗಾಗಿ ಹೋಗಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ