Home / ಜಿಲ್ಲೆ / ಸೈಕಲ್‍ನಲ್ಲಿ ಬಂದು ನಾಣ್ಯಗಳನ್ನು ಎಸೆದು ಹೋದ ವ್ಯಕ್ತಿ, ಮೈಸೂರಲ್ಲಿ ಆತಂಕ..!

ಸೈಕಲ್‍ನಲ್ಲಿ ಬಂದು ನಾಣ್ಯಗಳನ್ನು ಎಸೆದು ಹೋದ ವ್ಯಕ್ತಿ, ಮೈಸೂರಲ್ಲಿ ಆತಂಕ..!

Spread the love

ಮೈಸೂರು, ಏ.22- ನಗರದ ಸೀಬಯ್ಯ ರಸ್ತೆಯಲ್ಲಿ ಸೈಕಲ್‍ನಲ್ಲಿ ಬಂದ ವ್ಯಕ್ತಿಯೊಬ್ಬ ನಾಣ್ಯಗಳನ್ನು ಎಸೆದು ಹೋಗಿದ್ದು, ಈ ನಾಣ್ಯಗಳನ್ನು ತೆಗೆದುಕೊಂಡಿದ್ದ ವ್ಯಕ್ತಿಯನ್ನು ಪಾಲಿಕೆ ಆರೋಗ್ಯ ಅಧಿಕಾರಿಗಳು ಪತ್ತೆಹಚ್ಚಿ ನಾಣ್ಯಗಳನ್ನು ವಶಕ್ಕೆ ಪಡೆದು ವೈರಾಣು ನಿರೋಧಕ ಸಿಂಪಡಿಸಿದ್ದಾರೆ.

ಈ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಸೈಕಲ್‍ನಲ್ಲಿ ಬಂದು ನಾಣ್ಯಗಳನ್ನು ದಾರಿಯುದ್ದಕ್ಕೂ ಎಸೆದು ಹೋಗಿದ್ದಾನೆ. ಈ ಸಂದರ್ಭದಲ್ಲಿ ಈ ಮಾರ್ಗವಾಗಿ ಬರುತ್ತಿದ್ದ ದಾರಿಹೋಕರೊಬ್ಬರು ನಾಣ್ಯ ಬಿದ್ದಿರುವುದನ್ನು ಗಮನಿಸಿ ತೆಗೆದುಕೊಂಡಾಗ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಇನ್ನೂ ಹಲವು ನಾಣ್ಯಗಳು ಸಿಕ್ಕಿವೆ

ಒಟ್ಟು 20 ರೂ. ಸಂಗ್ರಹವಾಗಿದೆ. ಕೊರೊನಾ ಭೀತಿ ನಡುವೆ ಅನುಮಾನಗೊಂಡ ಸ್ಥಳೀಯ ನಿವಾಸಿಗಳು ತಕ್ಷಣ ಪೊಲೀಸರು ಹಾಗೂ ಪಾಲಿಕೆಗೆ ತಿಳಿಸಿದ್ದಾರೆ. ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಬಂದು ನಾಣ್ಯಗಳನ್ನು ತೆಗೆದುಕೊಂಡಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿ ಆತನಿಂದ ನಾಣ್ಯಗಳನ್ನು ವಶಕ್ಕೆ ಪಡೆದು ಆತನಿಗೂ ವೈರಾಣು ನಿರೋಧಕ ಸಿಂಪಡಿಸಿ ನಾಣ್ಯಗಳಿಗೂ ಸಿಂಪಡಿಸಿದ್ದಾರೆ.

ಈ ರಸ್ತೆಯಲ್ಲಿ ಯಾರು ಬಂದು ನಾಣ್ಯಗಳನ್ನು ಎಸೆದಿದ್ದಾರೆ ಎಂಬ ಬಗ್ಗೆ ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ