Breaking News

ಹನಿಟ್ರ್ಯಾಪ್‌ ಮೂಲಕ ಸಹೋದ್ಯೋಗಿಯ ಕಿಡ್ನ್ಯಾಪ್‌ – 12 ಲಕ್ಷಕ್ಕೆ ಬೇಡಿಕೆ, 8 ಮಂದಿ ಅರೆಸ್ಟ್

Spread the love

ವಿಜಯಪುರ: ಜಮೀನು ಮಾರಾಟ ಮಾಡಿದ ಹಣದ ಆಸೆಗಾಗಿ ಹನಿಟ್ರ‍್ಯಾಪ್ ಮೂಲ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬರೋಬ್ಬರಿ 12 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದ ಅಂತರ-ಜಿಲ್ಲಾ ಅಪಹರಣಕಾರರನ್ನು ಪೊಲೀಸರು ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯಪುರ ನಗರದ ಕಸ್ತೂರಿ ಕಾಲೋನಿಯ ನಿವಾಸಿ 22 ವರ್ಷದ ಸಾಹಿಲ್‌ನನ್ನು ಜೂನ್ 18ರಂದು ಕಾಣೆಯಾಗಿದ್ದ. ಯಾರೋ ದುಷ್ಕರ್ಮಿಗಳು ತನ್ನ ಮಗನನ್ನು ಅಪಹರಿಸಿದ್ದಾರೆಎಂದು ಮಮ್ತಾಜ್ ಜೂ.19ರಂದು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು. ದೂರಿನನ್ವಯ ಪೊಲೀಸರು 8 ಮಂದಿಯನ್ನು ಬಂಧಿಸಿ, ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.

ಅಪಹರಣಕ್ಕೊಳಗಾದ ಸಾಹಿಲ್ ಮತ್ತು ಆರೋಪಿ ಮಹ್ಮಮದ ರಫೀಕ್ ಇಬ್ಬರೂ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿಲ್ ಕುಟುಂಬವು ಇತ್ತೀಚೆಗಷ್ಟೇ ತಮಗೆ ಸೇರಿದ 2 ಎಕರೆ ಜಮೀನನ್ನು 26 ಲಕ್ಷ ರೂ.ಗೆ ಮಾರಾಟ ಮಾಡಿತ್ತು. ಸಾಹಿಲ್ ಈ ವಿಷಯವನ್ನು ತನ್ನ ಸಹೋದ್ಯೋಗಿ ಮಹ್ಮಮದ ರಫೀಕ್ ಬಳಿ ಹಂಚಿಕೊಂಡಿದ್ದನು. ಹಣದ ಸುಳಿವು ಸಿಗುತ್ತಿದ್ದಂತೆ ರಫೀಕ್, ಈ ವಿಷಯವನ್ನು ತನ್ನ ಸ್ನೇಹಿತ ಗೋಪಾಲ ಎಂಬಾತನಿಗೆ ತಿಳಿಸಿ, ಬಳಿಕ ಸಾಹಿಲ್‌ನನ್ನು ಹನಿಟ್ರ‍್ಯಾಪ್ ಮೂಲಕ ಅಪಹರಿಸಿದ್ರು. ಹಣ ವಸೂಲಿ ಮಾಡಲು ಇಬ್ಬರೂ ಸೇರಿ ಒಳಸಂಚು ರೂಪಿಸಿದ್ದರು.

ಕಿಡ್ನ್ಯಾಪ್‌ ನಡೆದಿದ್ದು ಹೇಗೆ?
ಆರೋಪಿಗಳು ವಿಜಯಪುರದ ಯುವತಿಯನ್ನು ಸಂಪರ್ಕಿಸಿ ಹನಿಟ್ರ್ಯಾಪ್‌ಗೆ ಒಪ್ಪಿಸಿದ್ರು. ಯುವತಿ ಮೂಲಕ ಸಾಹಿಲ್‌ಗೆ ಪರಿಚಯ ಮಾಡಿಸಿ ಸ್ನೇಹ ಬೆಳೆಸಿದ್ರು. ಜೂನ್ 18ರಂದು ರಾತ್ರಿ 8 ಗಂಟೆ ಸುಮಾರಿಗೆ ಯುವತಿ ಸಾಹಿಲ್‌ಗೆ ಫೋನ್ ಮಾಡಿ ಸರ್ಕಾರಿ ಆಸ್ಪತ್ರೆ ಹಿಂಭಾಗದ ಖಾಲಿ ಜಾಗಕ್ಕೆ ಬರುವಂತೆ ತಿಳಿಸಿದ್ದಳು. ಆಕೆ ಹೇಳಿದ ಜಾಗಕ್ಕೆ ಸಾಹಿಲ್ ಬರುತ್ತಿದ್ದಂತೆ, ಅಲ್ಲಿ ಹೊಂಚು ಹಾಕಿ ಕುಳಿತಿದ್ದ ಗೋಪಾಲ ಮತ್ತು ಆತನ ಗ್ಯಾಂಗ್ ಸಾಹಿಲ್‌ನನ್ನು ಸ್ಕಾರ್ಪಿಯೋದಲ್ಲಿ ಅಪಹರಿಸಿದ್ರು. ಅಪಹರಣಕಾರರು ಸಾಹಿಲ್‌ನನ್ನು ವಿಜಯಪುರದಿಂದ ಗದಗ, ಗೋವಾ ಮಾರ್ಗವಾಗಿ ಕರೆದೊಯ್ದಿದ್ರು. ದಾರಿಯ ಮಧ್ಯೆ ಸಾಹಿಲ್ ಮೊಬೈಲ್‌ನಿಂದಲೇ ಆತನ ತಾಯಿಗೆ ಕರೆ ಮಾಡಿ 12 ಲಕ್ಷ ರೂ. ನೀಡಬೇಕು ಎಂದು ಬೆದರಿಕೆ ಹಾಕಿದ್ರು.

ಸಾಯಿಲ್ ಪೋಷಕರ ದೂರಿನ ಬೆನ್ನಲ್ಲೇ ಗಾಂಧಿಚೌಕ್ ಠಾಣೆಯ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ರು. ಮೊಬೈಲ್ ಕರೆಗಳ ನೆಟ್‌ವರ್ಕ್ ಆಧರಿಸಿ ಆರೋಪಿಗಳಿಗೆ ಬಲೆ ಬೀಸಿದ್ರು. ಜೂನ್ 21ರಂದು ಬೆಳಗಾವಿ ಜಿಲ್ಲೆಯ ಘಟಪ್ರಭಾ ಹತ್ತಿರ ಆರೋಪಿಗಳನ್ನು ಸುತ್ತುವರಿದು ಸಾಹಿಲ್‌ನನ್ನು ಪೊಲೀಸ್ರು ರಕ್ಷಿಸಿದ್ದಾರೆ. ಎಲ್ಲಾ 8 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಹಾಗೂ 7 ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.


Spread the love

About Laxminews 24x7

Check Also

ಉಗಾಂಡದಲ್ಲಿ ಕೊಟ್ಟೂರು ಮಹಿಳೆ ಆತ್ಮಹತ್ಯೆ – ಕಾರಣ ಸಸ್ಪೆನ್ಸ್‌

Spread the loveಬಳ್ಳಾರಿ: ಪತಿಯ ಜೊತೆ ಉಗಾಂಡ ದೇಶದಲ್ಲಿ ನೆಲೆಸಿದ್ದ ಕರ್ನಾಟಕ ವಿಜಯನಗರ  ಜಿಲ್ಲೆಯ ಕೊಟ್ಟೂರು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ