Breaking News

ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ- ನಿರ್ಧಾರವಾಗಲಿದೆ ಲಾಕ್‍ಡೌನ್ ಭವಿಷ್ಯ

Spread the love

ನವದೆಹಲಿ: ಕೊರೊನಾ ಸಂಕಷ್ಟಕ್ಕೆ ಸಿಲುಕಿ ದೇಶ ಬಡವ ಆಗಿದೆ. ಲಾಕ್ ಡೌನ್ ಇರುತ್ತೊ ತೆರವಾಗತ್ತೊ ಅನ್ನೊ ಗೊಂದಲದಲ್ಲಿ ಜನರಿದ್ದಾರೆ. ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಲಿದ್ದು ಇಂದಿನ ಸಭೆ ನಿರ್ಣಾಯಕವಾಗಿದ್ದು, ಈ ನಡುವೆ ಲಾಕ್ ಡೌನ್ ವಿಸ್ತರಣೆ ಅಧಿಕೃತ ಘೋಷಣೆ ನಾಳೆ ಆಗಬಹದು ಎನ್ನಲಾಗುತ್ತಿದೆ.

ಕಳೆದೆರಡು ದಿನಗಳಿಂದ ದೇಶದಲ್ಲಿ ಕೊರೊನಾಗಿಂತ ಹೆಚ್ಚು ಚರ್ಚೆ ಆಗ್ತಿರೋದು ಲಾಕ್ ಡೌನ್ ಬಗ್ಗೆ. ಇನ್ನೇನು ಜಸ್ಟ್ ನಾಲ್ಕು ದಿನಗಳ ಕಳೆದು ಬಿಟ್ರೆ ಹೋಂ ಕ್ವಾರಂಟೈನ್ ಅವಧಿ ಮುಗಿದೆ ಹೋಯ್ತು ಅಂತಾ ಎಲ್ಲರೂ ಯೋಚಿಸಿದ್ರು. ಆದರೆ ಅದು ಸುಳ್ಳಾಗುವ ಎಲ್ಲ ಲಕ್ಷಣಗಳು ಕಂಡು ಬರ್ತಿದೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ಗಳು ಆರಂಭವಾಗಿದ್ದು ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಬೆಳಗ್ಗೆ ಹನ್ನೊಂದು ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಆರಂಭವಾಗಲಿದ್ದು ಎಲ್ಲ ಸಿಎಂಗಳು ಪಿಎಂ ಜೊತೆ ಸೇರಿ ಲಾಕ್ ಡೌನ್ ವಿಸ್ತರಣೆ ಭವಿಷ್ಯ ನಿರ್ಧರಿಸಲಿದ್ದಾರೆ.

ಈ ನಡುವೆ ಒಡಿಶಾ ಮತ್ತು ಪಂಜಾಬ್ ರಾಜ್ಯದ ಸಿಎಂ ಗಳು ಎಪ್ರಿಲ್ ಅಂತ್ಯದವರೆಗೂ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ. ಇದಲ್ಲದೆ ಹಲವು ರಾಜ್ಯಗಳು ಲಾಕ್‍ಡೌನ್ ಸಂಬಂಧಿಸಿದಂತೆ ಈ ರೀತಿಯಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದೆ.

* ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಆರ್ಥಿಕತೆಯನ್ನು ಆಮೇಲೆ ಪರಿಶೀಲನೆ ಮಾಡಬಹುದು. ಜೀವಗಳನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಲಾಕ್ ಡೌನ್ ಮುಂದುವರಿಸುವುದು ಸೂಕ್ತ ಎಂದಿದ್ದರು
* ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಲಾಕ್‍ಡೌನ್ ವಿಸ್ತರಣೆ ಅವಶ್ಯಕ. ಜನರು ಸರ್ಕಾರದ ಜೊತೆ ಹೆಜ್ಜೆ ಹಾಕಬೇಕು ಅಂತಾ ಅಭಿಪ್ರಾಯಪಟ್ಟಿದ್ದಾರೆ.
* ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೊರೊನಾ ವಿರುದ್ಧ ಮೂರು ಹೆಜ್ಜೆ ಮುಂದೆ ಇಡಬೇಕಿದ್ದು, ಲಾಕ್‍ಡೌನ್ ಮತ್ತಷ್ಟು ದಿನ ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಲಾಕ್‍ಡೌನ್ ಮುಂದುವರಿಸುವ ಅಧಿಕಾರ ರಾಜ್ಯಗಳಿಗೆ ಕೇಂದ್ರ ಬಿಟ್ಟುಕೊಡಬೇಕು ಪರಿಸ್ಥಿತಿ ಮೇಲೆ ರಾಜ್ಯಗಳ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ
* ಈ ನಡುವೆ ಛತ್ತೀಸಗಢ, ಜಾರ್ಖಂಡ್ ರಾಜ್ಯಗಳು ಲಾಕ್‍ಡೌನ್ ವಿಸ್ತರಣೆ ಬಹು ಪರಾಕ್ ಎಂದಿವೆ.

ಇದೇ ಅಭಿಪ್ರಾಯ ಬಹುತೇಕ ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಕರ್ನಾಟಕವೂ ಸೇರಿ ಹಲವು ರಾಜ್ಯಗಳು ಲಾಕ್‍ಡೌನ್ ತೆರವು ಮಾಡಬೇಕಾ ಮುಂದುವರಿಸಬೇಕಾ ಅನ್ನೊ ಗೊಂದಲದಲ್ಲಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ಸಭೆ ಬಳಿಕ ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವುದು ಕುತೂಹಲ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ