Breaking News

ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನಿಂದ ಜನಾಂದೋಲನ ಆಕ್ರೋಶ ಯಾತ್ರೆ

Spread the love

ಬಳ್ಳಾರಿ: ರಾಜ್ಯ ಬಿಜೆಪಿಯ  ಪಾದಯಾತ್ರೆಗೆ ಪ್ರತಿಯಾಗಿ ಜನಾಂದೋಲನ ಆಕ್ರೋಶ ಯಾತ್ರೆ ನಡೆಸಲು ಕಾಂಗ್ರೆಸ್  ಭರ್ಜರಿ ಸಿದ್ಧತೆ ನಡೆಸಿದ್ದು, ಈ ಮೂಲಕ ಬಳ್ಳಾರಿಯಲ್ಲಿ ಮತ್ತೊಂದು ಹೈವೋಲ್ಟೇಜ್ ರಾಜಕೀಯ ಯಾತ್ರೆಗೆ ವೇದಿಕೆ ಸಿದ್ಧಗೊಂಡಿದೆ.

ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಗೆ ತಕ್ಕ ತಿರುಗೇಟು ನೀಡಲು ಕಾಂಗ್ರೆಸ್ ನಾಯಕರು ಪ್ರತಿತಂತ್ರ ರೂಪಿಸಿದ್ದಾರೆ. ಬಿಜೆಪಿ ನಾಯಕರ ಆರೋಪಗಳಿಗೆ ನೇರವಾಗಿ ಜನರ ಮುಂದೆಯೇ ಉತ್ತರ ನೀಡಲು ನಿರ್ಧರಿಸಿರುವ ಕಾಂಗ್ರೆಸ್, ಬಿಜೆಪಿ ಪಾದಯಾತ್ರೆ ಸಾಗಿದ ಮಾರ್ಗದಲ್ಲೇ ‘ಜನಾಂದೋಲನ ಆಕ್ರೋಶ ಯಾತ್ರೆ’ಯನ್ನು ಸಂಘಟಿಸಲು ಮುಂದಾಗಿದೆ.

ಈ ಯಾತ್ರೆಗೆ ಅಂತಿಮ ರೂಪ ನೀಡುವ ಸಂಬಂಧ ಸ್ಥಳೀಯ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ ಜತೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಪಾದಯಾತ್ರೆ ಬಳ್ಳಾರಿ ತಲುಪುವ ಮುನ್ನವೇ ಈ ಕೌಂಟರ್ ಯಾತ್ರೆಯನ್ನು ಕಾರ್ಯರೂಪಕ್ಕೆ ತರಲು ಯೋಜನೆ ರೂಪಿಸಲಾಗಿದೆ. 

ಯಾತ್ರೆಯ ಆರಂಭಿಕ ಸಿದ್ಧತೆಯಾಗಿ ಮೊದಲ ಹಂತದಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಲಾಗಿದೆ. ಆ ಬಳಿಕ ಪೂರ್ಣ ಪ್ರಮಾಣದ ಯಾತ್ರೆಯ ದಿನಾಂಕ ಮತ್ತು ರೂಪುರೇಷೆಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Spread the love

About Laxminews 24x7

Check Also

ಸರಣಿ ಪ್ರಶ್ನೆ ಕೇಳಿ ಪ್ರಿಯಾಂಕ್‌ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ

Spread the loveಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್  ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ