Breaking News

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

Spread the love

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ.

ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಅಚ್ಚರಿ ಎಂದ್ರೆ, ವಿಧಾನಸಭೆ ಮತ್ತು ಪರಿಷತ್​​ಗೆ ಇಬ್ಬರು ಹಿಂದುಳಿದ ವರ್ಗದ ನಾಯಕರಿಗೆ ವಿಪಕ್ಷ ಸ್ಥಾನ ಕಲ್ಪಿಸಲಾಗಿದೆ. ಇನ್ನು, ಇದೇ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಎಂ.ಇಬ್ರಾಹಿಂ ನಿರೀಕ್ಷೆ ನೀರುಪಾಲಾಗಿದೆ.

 


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ